ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ ಆಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ಅನುದಾನ ನೀಡಿದ್ದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ. ಆದರೆ ಮೌಢ್ಯದಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.
ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದ್ದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರೇಪಿಸಿದ್ದೆ ಎಂದರು.
ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ, ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…