ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ ಆಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ಅನುದಾನ ನೀಡಿದ್ದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ. ಆದರೆ ಮೌಢ್ಯದಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.
ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದ್ದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರೇಪಿಸಿದ್ದೆ ಎಂದರು.
ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ, ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…