ರಸ್ತೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ: ಸಕಲೇಶ್ ಎಂಬಾತ ರವಿ ಎಂಬಾತನ ಮೇಲೆ ಗುಂಡಿನ ದಾಳಿ

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪದಲ್ಲಿ ಬುಧವಾರ ಘಟನೆ ನಡೆದಿದೆ. ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ರಸ್ತೆ ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದರಿಂದ ರೈತ ಚಿಕನ್‌ ರವಿ ಮೇಲೆ ಸಕಲೇಶಕುಮಾರ್‌ ಎಂಬಾತ ಫೈರಿಂಗ್‌ ಮಾಡಿದ್ದಾರೆ.

ರಾಜ್ಯದಲ್ಲಿ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ನಡೆದ ಬೆನ್ನಲ್ಲೇ ಮತ್ತೊಂದು ಶೂಟೌಟ್‌ ಪ್ರಕರಣ ಸದ್ದು ಮಾಡಿದೆ.

ಯೆಸ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ಮಾಸುವ ಮೊದಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪದಲ್ಲಿ ಮತ್ತೊಂದು ಗುಂಡಿನ ದಾಳಿ ಪ್ರಕರಣ ಬೆಳಕಿಗೆ ಬಂದಿದೆ.

ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ರಸ್ತೆ ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದರಿಂದ ರೈತ ಚಿಕನ್‌ ರವಿ ಎಂಬುವವರ ಮೇಲೆ ಸಕಲೇಶಕುಮಾರ್‌ ಎಂಬಾತ ಫೈರಿಂಗ್‌ ಮಾಡಿದ್ದಾನೆ ಎನ್ನಲಾಗಿದೆ.

ಹಾಡಹಗಲೇ ರವಿ ಕಾಲಿಗೆ ಗುಂಡು ಹಾರಿಸಲಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ..

ರಸ್ತೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ಚಿಕನ್ ರವಿ ಕಾಲಿಗೆ ಸಕಲೇಶಕುಮಾರ್ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ.

ಗುಂಡಿನ ದಾಳಿ ನಡೆಸಿರುವ ಸಕಲೇಶಕುಮಾರ್, ಬಿಜೆಪಿ ಮಾಜಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಅವರ ಸಂಬಂಧಿ ಎನ್ನಲಾಗಿದೆ.

ತಲೆಗೆ ಕಲ್ಲಿನಿಂದ ಹೊಡೆದರು ಎಂಬ ಕಾರಣಕ್ಕೆ ಸಕಲೇಶಕುಮಾರ್‌ ಫೈರಿಂಗ್‌ ಮಾಡಿದ್ದಾನೆ ಎನ್ನಲಾಗಿದೆ. ತಲೆಗೆ ಯಾರೋ ಕಲ್ಲು ಹೊಡೆಯುತ್ತೀರಾ ಎಂದು ಗನ್ ಹಿಡಿದು ಸಕಲೇಶಕುಮಾರ್‌ ಬೆದರಿಸಿದ್ದು, ಸ್ಥಳದಲ್ಲಿದ್ದ ಜನ ಭಯಭೀತರಾಗಿದ್ದಾರೆ.

ಸ್ಥಳಕ್ಕೆ ಕುಶಲ್ ಚೌಕ್ಸೆ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

21 seconds ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago