ಕೋಲಾರ: ಜಿಲ್ಲೆಯ ಟೇಕಲ್ ಹೋಬಳಿಯ ಮಾಕಾರಹಳ್ಳಿಯಲ್ಲಿ ಸೋಮವಾರ ಕಲ್ಲು ಗಣಿಗಾರಿಕೆ ವೇಳೆ ಕಲ್ಲು ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಪದೇಪದೇ ಇಂತಹ ಸಾವು ನೋವುಗಳ ಘಟನೆಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಆರೋಪಿಸಿದರು.
ಘಟನೆ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ರಾಜಾರೋಷವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದರೂ ಅಧಿಕಾರಿಗಳು ಜನಪ್ರತಿನಿಧಿಗಳ ಕೈಗೊಂಬೆಯಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಇಂತಹ ಸಾವುಗಳಿಗೆ ಬೆಲೆ ಇಲ್ಲವಾಗಿವೆ ಮಾಲೀಕರಿಗೂ ಕಾರ್ಮಿಕರ ಹಿತ ಮುಖ್ಯವಾಗಿಲ್ಲ ಕಲ್ಲು ಒಡೆಯಲು ಬೃಹತ್ ಯಂತ್ರಗಳು, ಸ್ಫೋಟಕ ಬಳಸಿದರೂ ಪೊಲೀಸರಾಗಲಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾಗಲಿ ಕ್ರಮ ವಹಿಸುತ್ತಿಲ್ಲ. ಅರಣ್ಯ ಇಲಾಖೆ ನಿಯಮಗಳು, ಗಣಿ ಇಲಾಖೆ ನಿಯಮಗಳು, ಸ್ಫೋಟಕ ಬಳಕೆ ಕಾನೂನುಗಳನ್ನು ಉಲ್ಲಂಘಿಸಿದ್ದರೂ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದರು.
ಕಲ್ಲು ಗಣಿಗಾರಿಕೆಗಳಿಗೆ ಕಾರ್ಮಿಕ ಇಲಾಖೆಯ ಕಾನೂನುಗಳು ಅನ್ವಯವಾಗುತ್ತವೆ ಆದರೆ ಜಿಲ್ಲೆಯಲ್ಲಿ ಯಾವುದು ಜಾರಿಯಾಗುತ್ತಿಲ್ಲ ಕಲ್ಲು ಗಣಿಗಾರಿಕೆಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಕಾರ್ಮಿರಿಗೆ ಕಾನೂನು ಬದ್ಧ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗುವುದಿಲ್ಲ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಸಹ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಕಾನೂನು ವಿರುದ್ದವಾಗಿ ಅಕ್ರಮವಾಗಿ ನಡೆಸುತ್ತಿರುವ ಕಲ್ಲುಗಣಿಗಾರಿಕೆಯ ವಿರುದ್ಧ ಜಿಲ್ಲಾಡಳಿತ ಕೂಡಲೇ ಕ್ರಮಕೈಗೊಳ್ಳಬೇಕು. ಅಕ್ರಮ ಕಲ್ಲುಗಣಿಗಾರಿಕೆಯ ಹಿಂದೆ ಇರುವ ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಕಲ್ಲು ಗಣಿಗಾರಿಕೆ ಹೆಸರಲ್ಲಿ ರಾಷ್ಟ್ರೀಯ ಸಂಪತ್ತಿನ ಲೂಟಿ ಬಹಿರಂಗವಾಗಿ ಹಾಗೂ ರಾಜಾರೋಷವಾಗಿ ಹಾಡುಹಗಲೇ ನಡೆದರೂ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗಿಲ್ಲ ಕೆಲವರ ಒತ್ತಡಕ್ಕೆ ಅಧಿಕಾರಿಗಳು ಸರಕಾರಿ ಸಂಪತ್ತು ರಕ್ಷಣೆ ಮಾಡುವ ಸುಳ್ಳು ಭರವಸೆಗಳು ನೀಡುತ್ತಲೇ ಇದ್ದಾರೆ ಹೊರತು ಅದನ್ನು ರಕ್ಷಿಸುವ ಗೋಜಿಗೆ ಇದುವರೆಗೂ ಹೋಗದಿರುವುದು ಅನುಮಾನಕ್ಕೆ ಎಡೆ ಮಾಡಿದೆ ಜೊತೆಗೆ ಕೆರೆಗಳ ಪಕ್ಕದಲ್ಲೇ ಕಲ್ಲು ಪುಡಿ ಮಾಡಲು ಅನುಮತಿ ನೀಡಿ ಕೆರಗಳ ಸೌಂದರ್ಯ ಹಾಳು ಮಾಡಲು ಹೊರಟಿದ್ದಾರೆ ಅವುಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…