Categories: ಕೋಲಾರ

ಕಲ್ಲು ಗಣಿಗಾರಿಕೆ ಅಮಾಯಕ ಕಾರ್ಮಿಕರ ಸಾವು: ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಯಲುವಗುಳಿ ನಾಗರಾಜ್ ಆಗ್ರಹ

ಕೋಲಾರ: ಜಿಲ್ಲೆಯ ಟೇಕಲ್‌ ಹೋಬಳಿಯ ಮಾಕಾರಹಳ್ಳಿಯಲ್ಲಿ ಸೋಮವಾರ ಕಲ್ಲು ಗಣಿಗಾರಿಕೆ ವೇಳೆ ಕಲ್ಲು ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಪದೇಪದೇ ಇಂತಹ ಸಾವು ನೋವುಗಳ ಘಟನೆಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಆರೋಪಿಸಿದರು.

ಘಟನೆ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ರಾಜಾರೋಷವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದರೂ ಅಧಿಕಾರಿಗಳು ಜನಪ್ರತಿನಿಧಿಗಳ ಕೈಗೊಂಬೆಯಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಇಂತಹ ಸಾವುಗಳಿಗೆ ಬೆಲೆ ಇಲ್ಲವಾಗಿವೆ ಮಾಲೀಕರಿಗೂ ಕಾರ್ಮಿಕರ ಹಿತ ಮುಖ್ಯವಾಗಿಲ್ಲ ಕಲ್ಲು ಒಡೆಯಲು ಬೃಹತ್‌ ಯಂತ್ರಗಳು, ಸ್ಫೋಟಕ ಬಳಸಿದರೂ ಪೊಲೀಸರಾಗಲಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾಗಲಿ ಕ್ರಮ ವಹಿಸುತ್ತಿಲ್ಲ. ಅರಣ್ಯ ಇಲಾಖೆ ನಿಯಮಗಳು, ಗಣಿ ಇಲಾಖೆ ನಿಯಮಗಳು, ಸ್ಫೋಟಕ ಬಳಕೆ ಕಾನೂನುಗಳನ್ನು ಉಲ್ಲಂಘಿಸಿದ್ದರೂ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಕಲ್ಲು ಗಣಿಗಾರಿಕೆಗಳಿಗೆ ಕಾರ್ಮಿಕ ಇಲಾಖೆಯ ಕಾನೂನುಗಳು ಅನ್ವಯವಾಗುತ್ತವೆ ಆದರೆ ಜಿಲ್ಲೆಯಲ್ಲಿ ಯಾವುದು ಜಾರಿಯಾಗುತ್ತಿಲ್ಲ ಕಲ್ಲು ಗಣಿಗಾರಿಕೆಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಕಾರ್ಮಿರಿಗೆ ಕಾನೂನು ಬದ್ಧ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗುವುದಿಲ್ಲ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಸಹ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಕಾನೂನು ವಿರುದ್ದವಾಗಿ ಅಕ್ರಮವಾಗಿ ನಡೆಸುತ್ತಿರುವ ಕಲ್ಲುಗಣಿಗಾರಿಕೆಯ ವಿರುದ್ಧ ಜಿಲ್ಲಾಡಳಿತ ಕೂಡಲೇ ಕ್ರಮಕೈಗೊಳ್ಳಬೇಕು. ಅಕ್ರಮ ಕಲ್ಲುಗಣಿಗಾರಿಕೆಯ ಹಿಂದೆ ಇರುವ ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಕಲ್ಲು ಗಣಿಗಾರಿಕೆ ಹೆಸರಲ್ಲಿ ರಾಷ್ಟ್ರೀಯ ಸಂಪತ್ತಿನ ಲೂಟಿ ಬಹಿರಂಗವಾಗಿ ಹಾಗೂ ರಾಜಾರೋಷವಾಗಿ ಹಾಡುಹಗಲೇ ನಡೆದರೂ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗಿಲ್ಲ ಕೆಲವರ ಒತ್ತಡಕ್ಕೆ ಅಧಿಕಾರಿಗಳು ಸರಕಾರಿ ಸಂಪತ್ತು ರಕ್ಷಣೆ ಮಾಡುವ ಸುಳ್ಳು ಭರವಸೆಗಳು ನೀಡುತ್ತಲೇ ಇದ್ದಾರೆ ಹೊರತು ಅದನ್ನು ರಕ್ಷಿಸುವ ಗೋಜಿಗೆ ಇದುವರೆಗೂ ಹೋಗದಿರುವುದು ಅನುಮಾನಕ್ಕೆ ಎಡೆ ಮಾಡಿದೆ ಜೊತೆಗೆ ಕೆರೆಗಳ ಪಕ್ಕದಲ್ಲೇ ಕಲ್ಲು ಪುಡಿ ಮಾಡಲು ಅನುಮತಿ ನೀಡಿ ಕೆರಗಳ ಸೌಂದರ್ಯ ಹಾಳು ಮಾಡಲು ಹೊರಟಿದ್ದಾರೆ ಅವುಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.

Ramesh Babu

Journalist

Recent Posts

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

23 minutes ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

5 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

7 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

10 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

11 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

22 hours ago