Categories: ಕೋಲಾರ

ಕಲ್ಲು ಗಣಿಗಾರಿಕೆ ಅಮಾಯಕ ಕಾರ್ಮಿಕರ ಸಾವು: ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಯಲುವಗುಳಿ ನಾಗರಾಜ್ ಆಗ್ರಹ

ಕೋಲಾರ: ಜಿಲ್ಲೆಯ ಟೇಕಲ್‌ ಹೋಬಳಿಯ ಮಾಕಾರಹಳ್ಳಿಯಲ್ಲಿ ಸೋಮವಾರ ಕಲ್ಲು ಗಣಿಗಾರಿಕೆ ವೇಳೆ ಕಲ್ಲು ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಪದೇಪದೇ ಇಂತಹ ಸಾವು ನೋವುಗಳ ಘಟನೆಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಆರೋಪಿಸಿದರು.

ಘಟನೆ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ರಾಜಾರೋಷವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದರೂ ಅಧಿಕಾರಿಗಳು ಜನಪ್ರತಿನಿಧಿಗಳ ಕೈಗೊಂಬೆಯಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಇಂತಹ ಸಾವುಗಳಿಗೆ ಬೆಲೆ ಇಲ್ಲವಾಗಿವೆ ಮಾಲೀಕರಿಗೂ ಕಾರ್ಮಿಕರ ಹಿತ ಮುಖ್ಯವಾಗಿಲ್ಲ ಕಲ್ಲು ಒಡೆಯಲು ಬೃಹತ್‌ ಯಂತ್ರಗಳು, ಸ್ಫೋಟಕ ಬಳಸಿದರೂ ಪೊಲೀಸರಾಗಲಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾಗಲಿ ಕ್ರಮ ವಹಿಸುತ್ತಿಲ್ಲ. ಅರಣ್ಯ ಇಲಾಖೆ ನಿಯಮಗಳು, ಗಣಿ ಇಲಾಖೆ ನಿಯಮಗಳು, ಸ್ಫೋಟಕ ಬಳಕೆ ಕಾನೂನುಗಳನ್ನು ಉಲ್ಲಂಘಿಸಿದ್ದರೂ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಕಲ್ಲು ಗಣಿಗಾರಿಕೆಗಳಿಗೆ ಕಾರ್ಮಿಕ ಇಲಾಖೆಯ ಕಾನೂನುಗಳು ಅನ್ವಯವಾಗುತ್ತವೆ ಆದರೆ ಜಿಲ್ಲೆಯಲ್ಲಿ ಯಾವುದು ಜಾರಿಯಾಗುತ್ತಿಲ್ಲ ಕಲ್ಲು ಗಣಿಗಾರಿಕೆಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಕಾರ್ಮಿರಿಗೆ ಕಾನೂನು ಬದ್ಧ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗುವುದಿಲ್ಲ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಸಹ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಕಾನೂನು ವಿರುದ್ದವಾಗಿ ಅಕ್ರಮವಾಗಿ ನಡೆಸುತ್ತಿರುವ ಕಲ್ಲುಗಣಿಗಾರಿಕೆಯ ವಿರುದ್ಧ ಜಿಲ್ಲಾಡಳಿತ ಕೂಡಲೇ ಕ್ರಮಕೈಗೊಳ್ಳಬೇಕು. ಅಕ್ರಮ ಕಲ್ಲುಗಣಿಗಾರಿಕೆಯ ಹಿಂದೆ ಇರುವ ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಕಲ್ಲು ಗಣಿಗಾರಿಕೆ ಹೆಸರಲ್ಲಿ ರಾಷ್ಟ್ರೀಯ ಸಂಪತ್ತಿನ ಲೂಟಿ ಬಹಿರಂಗವಾಗಿ ಹಾಗೂ ರಾಜಾರೋಷವಾಗಿ ಹಾಡುಹಗಲೇ ನಡೆದರೂ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗಿಲ್ಲ ಕೆಲವರ ಒತ್ತಡಕ್ಕೆ ಅಧಿಕಾರಿಗಳು ಸರಕಾರಿ ಸಂಪತ್ತು ರಕ್ಷಣೆ ಮಾಡುವ ಸುಳ್ಳು ಭರವಸೆಗಳು ನೀಡುತ್ತಲೇ ಇದ್ದಾರೆ ಹೊರತು ಅದನ್ನು ರಕ್ಷಿಸುವ ಗೋಜಿಗೆ ಇದುವರೆಗೂ ಹೋಗದಿರುವುದು ಅನುಮಾನಕ್ಕೆ ಎಡೆ ಮಾಡಿದೆ ಜೊತೆಗೆ ಕೆರೆಗಳ ಪಕ್ಕದಲ್ಲೇ ಕಲ್ಲು ಪುಡಿ ಮಾಡಲು ಅನುಮತಿ ನೀಡಿ ಕೆರಗಳ ಸೌಂದರ್ಯ ಹಾಳು ಮಾಡಲು ಹೊರಟಿದ್ದಾರೆ ಅವುಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.

Ramesh Babu

Journalist

Recent Posts

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

8 minutes ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

12 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

13 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

15 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

18 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

20 hours ago