ಕಳಪೆ ಗುಣಮಟ್ಟದ ಹಾಲು ಬಳಸಿ ಅನಾರೋಗ್ಯಕ್ಕೆ ಒಳಗಾಗಬೇಡಿ- ನಂದಿನಿ ಹಾಲು ಬಳಸಿ ಆರೋಗ್ಯವಂತರಾಗಿ- ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮನವಿ

ನಾನು ಬಮೂಲ್ ಅಧ್ಯಕ್ಷನಾದ ಮೇಲೆ ದೊಡ್ಡಬಳ್ಳಾಪುರ ಹಾಲು ಉತ್ಪಾದಕರ ಸಮಸ್ಯೆ ತಿಳಿದುಕೊಳ್ಳಲು ಇಂದು  ಇಲ್ಲಿಗೆ ಬಂದಿದ್ದೇ‌ನೆ. ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಕಳಪೆ ಗುಣಮಟ್ಟದ ಹಾಲನ್ನು ಬಳಸಿ ಅನಾರೋಗ್ಯಕ್ಕೆ ಒಳಗಾಗಬೇಡಿ. ಉತ್ತಮ ಗುಣಮಟ್ಟದ ನಂದಿನಿ ಹಾಲನ್ನು ಬಳಸಿ ಆರೋಗ್ಯವನ್ನು ಕಾಪಾಡುವಂತೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಜನರಲ್ಲಿ ಮನವಿ ಮಾಡಿದರು.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಹಾಲು ಪೂರೈಕೆ ಕಡಿಮೆಯಾಗಿದ್ದು, ಹಾಲು ಪೂರೈಕೆ ಹೆಚ್ಚಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಚರ್ಚಿಸುತ್ತೇವೆ ಎಂದರು.

ಗುಣಮಟ್ಟದ ಹಾಲು ಪೂರೈಕೆ, ರೈತರಿಗೆ ಉತ್ತಮ ದರ ನೀಡುವ ಜೊತೆಯಲ್ಲಿಯೇ, ಗ್ರಾಹಕರ ಹಿತ ಕಾಪಾಡಬೇಕಾದ ಹೊಣೆಗಾರಿಕೆ ಬಮೂಲ್ ಮೇಲಿದೆ ಎಂದು ಹೇಳಿದರು.

ಬಮೂಲ್ ವತಿಯಿಂದ 160ಕ್ಕೂ ಹೆಚ್ಚು ನಂದಿನ ಉತ್ಪಾದಕಗಳನ್ನು ತಯಾರಿಸಲಾಗುತ್ತಿದೆ. ಇದರ ಬಗ್ಗೆ ಜನರಿಗೆ ಸಾಕಷ್ಟು ಅರಿವು ಮೂಡಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ನಂದಿನಿ ಉತ್ಪನ್ನಗಳನ್ನೇ ಬಳಸಬೇಕು ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಟೆಟ್ರಾ ಪ್ಯಾಕ್ ಘಟಕ ಸ್ಥಾಪನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ಪೂರೈಕೆ ಕಡಿಮೆಯಾಗಿರುವ ಕಾರಣ ಘಟಕ ಸ್ಥಾಪನೆ ಕುರಿತು ಕೆಲ ತಾಂತ್ರಿಕ ಸಮಸ್ಯೆ ಎದುರಾಗಿದೆ. ಟೆಟ್ರಾ ಪ್ಯಾಕ್ ಘಟಕ ಸ್ಥಾಪನೆ ಸಾಧಕ ಬಾಧಕದ ಕುರಿತು ಚರ್ಚೆ ಮಾಡಬೇಕಿದೆ. ಈಗಾಗಲೇ ಪರಿಸರಕ್ಕೆ ಮಾರಕವಾಗದಂತೆ ನಂದಿನ ಹಾಲಿನ ಪ್ಯಾಕ್ ಬಳಕೆಗೆ ಒತ್ತು ನೀಡಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ಎರಡು ರೂ. ಹೆಚ್ಚಳವಾಗಲಿದೆ. ಲಕ್ಷಾಂತರ ಪ್ಲಾಸ್ಟಿಕ್ ಕವರ್ ಬಳಕೆಯಿಂದ ಉಂಟಾಗುತ್ತಿರುವ ಪರಿಸರಮಾಲಿನ್ಯ ತಡೆಯಲು ಗ್ರಾಹಕರ ಸಹಕಾರ, ಪ್ರತಿಕ್ರಿಯೆ ಯಾವ ರೀತಿ ಸಿಗುತ್ತದೆ ಎಂಬುದನ್ನು ತಿಳಿಯಲು ಬೆಂಗಳೂರಿನಲ್ಲಿ ಟ್ರಯಲ್ ಮಾಡಲಾಗುತ್ತಿದೆ ಎಂದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 hour ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

4 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

13 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

1 day ago