ಕಳಪೆ ಗುಣಮಟ್ಟದ ಹಾಲು ಬಳಸಿ ಅನಾರೋಗ್ಯಕ್ಕೆ ಒಳಗಾಗಬೇಡಿ- ನಂದಿನಿ ಹಾಲು ಬಳಸಿ ಆರೋಗ್ಯವಂತರಾಗಿ- ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮನವಿ

ನಾನು ಬಮೂಲ್ ಅಧ್ಯಕ್ಷನಾದ ಮೇಲೆ ದೊಡ್ಡಬಳ್ಳಾಪುರ ಹಾಲು ಉತ್ಪಾದಕರ ಸಮಸ್ಯೆ ತಿಳಿದುಕೊಳ್ಳಲು ಇಂದು  ಇಲ್ಲಿಗೆ ಬಂದಿದ್ದೇ‌ನೆ. ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಕಳಪೆ ಗುಣಮಟ್ಟದ ಹಾಲನ್ನು ಬಳಸಿ ಅನಾರೋಗ್ಯಕ್ಕೆ ಒಳಗಾಗಬೇಡಿ. ಉತ್ತಮ ಗುಣಮಟ್ಟದ ನಂದಿನಿ ಹಾಲನ್ನು ಬಳಸಿ ಆರೋಗ್ಯವನ್ನು ಕಾಪಾಡುವಂತೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಜನರಲ್ಲಿ ಮನವಿ ಮಾಡಿದರು.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಹಾಲು ಪೂರೈಕೆ ಕಡಿಮೆಯಾಗಿದ್ದು, ಹಾಲು ಪೂರೈಕೆ ಹೆಚ್ಚಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಚರ್ಚಿಸುತ್ತೇವೆ ಎಂದರು.

ಗುಣಮಟ್ಟದ ಹಾಲು ಪೂರೈಕೆ, ರೈತರಿಗೆ ಉತ್ತಮ ದರ ನೀಡುವ ಜೊತೆಯಲ್ಲಿಯೇ, ಗ್ರಾಹಕರ ಹಿತ ಕಾಪಾಡಬೇಕಾದ ಹೊಣೆಗಾರಿಕೆ ಬಮೂಲ್ ಮೇಲಿದೆ ಎಂದು ಹೇಳಿದರು.

ಬಮೂಲ್ ವತಿಯಿಂದ 160ಕ್ಕೂ ಹೆಚ್ಚು ನಂದಿನ ಉತ್ಪಾದಕಗಳನ್ನು ತಯಾರಿಸಲಾಗುತ್ತಿದೆ. ಇದರ ಬಗ್ಗೆ ಜನರಿಗೆ ಸಾಕಷ್ಟು ಅರಿವು ಮೂಡಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ನಂದಿನಿ ಉತ್ಪನ್ನಗಳನ್ನೇ ಬಳಸಬೇಕು ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಟೆಟ್ರಾ ಪ್ಯಾಕ್ ಘಟಕ ಸ್ಥಾಪನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ಪೂರೈಕೆ ಕಡಿಮೆಯಾಗಿರುವ ಕಾರಣ ಘಟಕ ಸ್ಥಾಪನೆ ಕುರಿತು ಕೆಲ ತಾಂತ್ರಿಕ ಸಮಸ್ಯೆ ಎದುರಾಗಿದೆ. ಟೆಟ್ರಾ ಪ್ಯಾಕ್ ಘಟಕ ಸ್ಥಾಪನೆ ಸಾಧಕ ಬಾಧಕದ ಕುರಿತು ಚರ್ಚೆ ಮಾಡಬೇಕಿದೆ. ಈಗಾಗಲೇ ಪರಿಸರಕ್ಕೆ ಮಾರಕವಾಗದಂತೆ ನಂದಿನ ಹಾಲಿನ ಪ್ಯಾಕ್ ಬಳಕೆಗೆ ಒತ್ತು ನೀಡಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ಎರಡು ರೂ. ಹೆಚ್ಚಳವಾಗಲಿದೆ. ಲಕ್ಷಾಂತರ ಪ್ಲಾಸ್ಟಿಕ್ ಕವರ್ ಬಳಕೆಯಿಂದ ಉಂಟಾಗುತ್ತಿರುವ ಪರಿಸರಮಾಲಿನ್ಯ ತಡೆಯಲು ಗ್ರಾಹಕರ ಸಹಕಾರ, ಪ್ರತಿಕ್ರಿಯೆ ಯಾವ ರೀತಿ ಸಿಗುತ್ತದೆ ಎಂಬುದನ್ನು ತಿಳಿಯಲು ಬೆಂಗಳೂರಿನಲ್ಲಿ ಟ್ರಯಲ್ ಮಾಡಲಾಗುತ್ತಿದೆ ಎಂದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago