ಕಳಪೆ ಗುಣಮಟ್ಟದ ಹಾಲು ಬಳಸಿ ಅನಾರೋಗ್ಯಕ್ಕೆ ಒಳಗಾಗಬೇಡಿ- ನಂದಿನಿ ಹಾಲು ಬಳಸಿ ಆರೋಗ್ಯವಂತರಾಗಿ- ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮನವಿ

ನಾನು ಬಮೂಲ್ ಅಧ್ಯಕ್ಷನಾದ ಮೇಲೆ ದೊಡ್ಡಬಳ್ಳಾಪುರ ಹಾಲು ಉತ್ಪಾದಕರ ಸಮಸ್ಯೆ ತಿಳಿದುಕೊಳ್ಳಲು ಇಂದು  ಇಲ್ಲಿಗೆ ಬಂದಿದ್ದೇ‌ನೆ. ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಕಳಪೆ ಗುಣಮಟ್ಟದ ಹಾಲನ್ನು ಬಳಸಿ ಅನಾರೋಗ್ಯಕ್ಕೆ ಒಳಗಾಗಬೇಡಿ. ಉತ್ತಮ ಗುಣಮಟ್ಟದ ನಂದಿನಿ ಹಾಲನ್ನು ಬಳಸಿ ಆರೋಗ್ಯವನ್ನು ಕಾಪಾಡುವಂತೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಜನರಲ್ಲಿ ಮನವಿ ಮಾಡಿದರು.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಹಾಲು ಪೂರೈಕೆ ಕಡಿಮೆಯಾಗಿದ್ದು, ಹಾಲು ಪೂರೈಕೆ ಹೆಚ್ಚಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಚರ್ಚಿಸುತ್ತೇವೆ ಎಂದರು.

ಗುಣಮಟ್ಟದ ಹಾಲು ಪೂರೈಕೆ, ರೈತರಿಗೆ ಉತ್ತಮ ದರ ನೀಡುವ ಜೊತೆಯಲ್ಲಿಯೇ, ಗ್ರಾಹಕರ ಹಿತ ಕಾಪಾಡಬೇಕಾದ ಹೊಣೆಗಾರಿಕೆ ಬಮೂಲ್ ಮೇಲಿದೆ ಎಂದು ಹೇಳಿದರು.

ಬಮೂಲ್ ವತಿಯಿಂದ 160ಕ್ಕೂ ಹೆಚ್ಚು ನಂದಿನ ಉತ್ಪಾದಕಗಳನ್ನು ತಯಾರಿಸಲಾಗುತ್ತಿದೆ. ಇದರ ಬಗ್ಗೆ ಜನರಿಗೆ ಸಾಕಷ್ಟು ಅರಿವು ಮೂಡಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ನಂದಿನಿ ಉತ್ಪನ್ನಗಳನ್ನೇ ಬಳಸಬೇಕು ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಟೆಟ್ರಾ ಪ್ಯಾಕ್ ಘಟಕ ಸ್ಥಾಪನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ಪೂರೈಕೆ ಕಡಿಮೆಯಾಗಿರುವ ಕಾರಣ ಘಟಕ ಸ್ಥಾಪನೆ ಕುರಿತು ಕೆಲ ತಾಂತ್ರಿಕ ಸಮಸ್ಯೆ ಎದುರಾಗಿದೆ. ಟೆಟ್ರಾ ಪ್ಯಾಕ್ ಘಟಕ ಸ್ಥಾಪನೆ ಸಾಧಕ ಬಾಧಕದ ಕುರಿತು ಚರ್ಚೆ ಮಾಡಬೇಕಿದೆ. ಈಗಾಗಲೇ ಪರಿಸರಕ್ಕೆ ಮಾರಕವಾಗದಂತೆ ನಂದಿನ ಹಾಲಿನ ಪ್ಯಾಕ್ ಬಳಕೆಗೆ ಒತ್ತು ನೀಡಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ಎರಡು ರೂ. ಹೆಚ್ಚಳವಾಗಲಿದೆ. ಲಕ್ಷಾಂತರ ಪ್ಲಾಸ್ಟಿಕ್ ಕವರ್ ಬಳಕೆಯಿಂದ ಉಂಟಾಗುತ್ತಿರುವ ಪರಿಸರಮಾಲಿನ್ಯ ತಡೆಯಲು ಗ್ರಾಹಕರ ಸಹಕಾರ, ಪ್ರತಿಕ್ರಿಯೆ ಯಾವ ರೀತಿ ಸಿಗುತ್ತದೆ ಎಂಬುದನ್ನು ತಿಳಿಯಲು ಬೆಂಗಳೂರಿನಲ್ಲಿ ಟ್ರಯಲ್ ಮಾಡಲಾಗುತ್ತಿದೆ ಎಂದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago