ತಾಲೂಕಿನ ತೂಬಗೆರೆ ಹೋಬಳಿಯ ತುರುವನಹಳ್ಳಿ ಗ್ರಾಮದ ವಾಸು ಎಂಬ ರೈತ ತನ್ನ ಮೂರು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ನಂತರ ಬೆಳೆ ಮಾತ್ರ ಎಲ್ಲರ ಕಣ್ಣು ಕುಕ್ಕುವ ಹಾಗೆ ಆಳೆತ್ತರಕ್ಕೆ ಬೆಳೆದು ನಿಂತಿದೆ. ಇದೀಗ ಬೆಳೆಯಲ್ಲಿ ಶೂನ್ಯ ಫಸಲು ಬಂದಿರುವುದು ಮಾತ್ರ ಇದೀಗ ರೈತನಿಗೆ ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೆ ಕಾರಣ ಕಳೆದ ಮೂರು ತಿಂಗಳ ಹಿಂದೆ ತೂಬಗೆರೆಯ ಬಿತ್ತನೆ ಬೀಜ ಮಾರಾಟ ಅಂಗಡಿಯಲ್ಲಿ ಹೈದರಾಬಾದ್ ಸಿಡ್ಸ್ 8199 ಮುಸುಕಿನ ಜೋಳದ ಬಿತ್ತನೆ ಬೀಜ ಖರೀದಿಸಿ ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದ್ದಾರೆ. ಒಂದು ಜೋಳದ ಕಡ್ಡಿಯೊಳಗೆ ಒಂದು ಅಥವಾ ಎರಡು ತೆನೆ ಬರಬೇಕು. ಆದರೆ ಈ ಬಿತ್ತನೆ ಬೀಜದಲ್ಲಿ ಒಂದು ಕಡ್ಡಿಗೆ ನಾಲ್ಕರಿಂದ ಐದು ತೆನೆ ಬಂದಿದೆ. ಬಂದಿರುವ ತೆನೆಯಲ್ಲೂ ಸರಿಯಾಗಿ ಬೀಜ ಉತ್ಪತ್ತಿ ಆಗಿಲ್ಲ ಅನ್ನೋದು ಇದೀಗ ರೈತನ ಆತಂಕಕ್ಕೆ ಕಾರಣವಾಗಿದೆ. ನೀರಿನ ಬವಣೆಯಲ್ಲೂ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ.
ಕಳಪೆ ಬಿತ್ತನೆ ಬೀಜದ ಬಗ್ಗೆ ಕಂಪನಿಯವರಿಗೆ ತಿಳಿಸಿದಾಗ ನಿಮಗೆ ನಷ್ಟ ಆದರೆ ನಾವು ನಿಮ್ಮಗೆ ಪರಿಹಾರ ಕಟ್ಟಿಕೊಡುತ್ತೇವೆ ಎಂದು ತಿಳಿಸಿದ್ದಾರೆ ಆದರೆ ಇದೀಗ ನಾವು ಪರಿಹಾರ ಕಟ್ಟಿಕೊಡುವುದಿಲ್ಲ ನೀವು ಬೇಕಾದರೆ ಕೋರ್ಟ್ ಗೆ ಹೋಗಿ ಪ್ರಕರಣ ದಾಖಲಿಸಿ ಎಂದು ಬೇಜವಾಬ್ಧಾರಿ ಉತ್ತರ ನೀಡುತ್ತಿದ್ದಾರೆ ಎಂದು ರೈತ ತನ್ನ ಅಳಲು ತೋಡಿಕೊಂಡಿದ್ದಾರೆ.
ಇನ್ನೂ ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ತಿಂಗಳು ರೈತ ಕಷ್ಟ ಪಟ್ಟು ಬೆಳೆದ ಬೆಳೆಗೆ ಪ್ರತಿಫಲವಿಲ್ಲದೆ ಇದೀಗ ರೈತ ಪರಿಹಾರಕ್ಕೆ ಎದುರು ಪರಿಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…