ತಾಲೂಕಿನ ತೂಬಗೆರೆ ಹೋಬಳಿಯ ತುರುವನಹಳ್ಳಿ ಗ್ರಾಮದ ವಾಸು ಎಂಬ ರೈತ ತನ್ನ ಮೂರು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ನಂತರ ಬೆಳೆ ಮಾತ್ರ ಎಲ್ಲರ ಕಣ್ಣು ಕುಕ್ಕುವ ಹಾಗೆ ಆಳೆತ್ತರಕ್ಕೆ ಬೆಳೆದು ನಿಂತಿದೆ. ಇದೀಗ ಬೆಳೆಯಲ್ಲಿ ಶೂನ್ಯ ಫಸಲು ಬಂದಿರುವುದು ಮಾತ್ರ ಇದೀಗ ರೈತನಿಗೆ ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೆ ಕಾರಣ ಕಳೆದ ಮೂರು ತಿಂಗಳ ಹಿಂದೆ ತೂಬಗೆರೆಯ ಬಿತ್ತನೆ ಬೀಜ ಮಾರಾಟ ಅಂಗಡಿಯಲ್ಲಿ ಹೈದರಾಬಾದ್ ಸಿಡ್ಸ್ 8199 ಮುಸುಕಿನ ಜೋಳದ ಬಿತ್ತನೆ ಬೀಜ ಖರೀದಿಸಿ ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದ್ದಾರೆ. ಒಂದು ಜೋಳದ ಕಡ್ಡಿಯೊಳಗೆ ಒಂದು ಅಥವಾ ಎರಡು ತೆನೆ ಬರಬೇಕು. ಆದರೆ ಈ ಬಿತ್ತನೆ ಬೀಜದಲ್ಲಿ ಒಂದು ಕಡ್ಡಿಗೆ ನಾಲ್ಕರಿಂದ ಐದು ತೆನೆ ಬಂದಿದೆ. ಬಂದಿರುವ ತೆನೆಯಲ್ಲೂ ಸರಿಯಾಗಿ ಬೀಜ ಉತ್ಪತ್ತಿ ಆಗಿಲ್ಲ ಅನ್ನೋದು ಇದೀಗ ರೈತನ ಆತಂಕಕ್ಕೆ ಕಾರಣವಾಗಿದೆ. ನೀರಿನ ಬವಣೆಯಲ್ಲೂ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ.
ಕಳಪೆ ಬಿತ್ತನೆ ಬೀಜದ ಬಗ್ಗೆ ಕಂಪನಿಯವರಿಗೆ ತಿಳಿಸಿದಾಗ ನಿಮಗೆ ನಷ್ಟ ಆದರೆ ನಾವು ನಿಮ್ಮಗೆ ಪರಿಹಾರ ಕಟ್ಟಿಕೊಡುತ್ತೇವೆ ಎಂದು ತಿಳಿಸಿದ್ದಾರೆ ಆದರೆ ಇದೀಗ ನಾವು ಪರಿಹಾರ ಕಟ್ಟಿಕೊಡುವುದಿಲ್ಲ ನೀವು ಬೇಕಾದರೆ ಕೋರ್ಟ್ ಗೆ ಹೋಗಿ ಪ್ರಕರಣ ದಾಖಲಿಸಿ ಎಂದು ಬೇಜವಾಬ್ಧಾರಿ ಉತ್ತರ ನೀಡುತ್ತಿದ್ದಾರೆ ಎಂದು ರೈತ ತನ್ನ ಅಳಲು ತೋಡಿಕೊಂಡಿದ್ದಾರೆ.
ಇನ್ನೂ ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ತಿಂಗಳು ರೈತ ಕಷ್ಟ ಪಟ್ಟು ಬೆಳೆದ ಬೆಳೆಗೆ ಪ್ರತಿಫಲವಿಲ್ಲದೆ ಇದೀಗ ರೈತ ಪರಿಹಾರಕ್ಕೆ ಎದುರು ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…