ಕಳಪೆ ಬಿತ್ತನೆ ಬೀಜ ಖರೀದಿಸಿ ಮೋಸ ಹೋದ ರೈತ: ಬಿತ್ತನೆ ಬೀಜ ಮಾರಾಟ ಅಂಗಡಿಯಿಂದ ರೈತನಿಗೆ ಮೋಸ

ತಾಲೂಕಿನ ತೂಬಗೆರೆ ಹೋಬಳಿಯ ತುರುವನಹಳ್ಳಿ ಗ್ರಾಮದ ವಾಸು ಎಂಬ ರೈತ ತನ್ನ ಮೂರು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ನಂತರ ಬೆಳೆ ಮಾತ್ರ ಎಲ್ಲರ ಕಣ್ಣು ಕುಕ್ಕುವ ಹಾಗೆ ಆಳೆತ್ತರಕ್ಕೆ ಬೆಳೆದು ನಿಂತಿದೆ. ಇದೀಗ ಬೆಳೆಯಲ್ಲಿ ಶೂನ್ಯ ಫಸಲು ಬಂದಿರುವುದು ಮಾತ್ರ ಇದೀಗ ರೈತನಿಗೆ ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದಕ್ಕೆ ಕಾರಣ ಕಳೆದ ಮೂರು ತಿಂಗಳ ಹಿಂದೆ ತೂಬಗೆರೆಯ ಬಿತ್ತನೆ ಬೀಜ ಮಾರಾಟ ಅಂಗಡಿಯಲ್ಲಿ ಹೈದರಾಬಾದ್ ಸಿಡ್ಸ್ 8199 ಮುಸುಕಿನ ಜೋಳದ ಬಿತ್ತನೆ ಬೀಜ ಖರೀದಿಸಿ ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದ್ದಾರೆ. ಒಂದು ಜೋಳದ ಕಡ್ಡಿಯೊಳಗೆ ಒಂದು ಅಥವಾ ಎರಡು ತೆನೆ ಬರಬೇಕು. ಆದರೆ ಈ ಬಿತ್ತನೆ ಬೀಜದಲ್ಲಿ ಒಂದು ಕಡ್ಡಿಗೆ ನಾಲ್ಕರಿಂದ ಐದು ತೆನೆ ಬಂದಿದೆ. ಬಂದಿರುವ ತೆನೆಯಲ್ಲೂ ಸರಿಯಾಗಿ ಬೀಜ ಉತ್ಪತ್ತಿ ಆಗಿಲ್ಲ ಅನ್ನೋದು ಇದೀಗ ರೈತನ ಆತಂಕಕ್ಕೆ ಕಾರಣವಾಗಿದೆ. ನೀರಿನ ಬವಣೆಯಲ್ಲೂ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ.

ರೈತ ತನ್ನ ತೋಟದಲ್ಲಿ ಹಗಲು ರಾತ್ರಿ ಎನ್ನದೆ ದುಡಿದು, ಹಂದಿ, ನಾಯಿಗಳ, ಕಾಟದಿಂದ ತನ್ನ ತೋಟವನ್ನು ರಕ್ಷಿಸಿಕೊಂಡಿದ್ದ. ಆದ್ರೆ ಕೊನೆಗೆ ರೈತನಿಗೆ ತಾನು ಬೆಳೆದ ಬೆಳೆಯಲ್ಲಿ ಸಿಕ್ಕಿದ್ದು ಮಾತ್ರ ಶೂನ್ಯ. ಅಷ್ಟಕ್ಕೂ ಕಷ್ಟ ಪಟ್ಟು ಬೆಳೆದ ಬೆಳೆಯಲ್ಲಿ ಶೂನ್ಯ ಫಸಲು ಸಿಗಲು ಕಾರಣ ಕಳಪೆ ಬಿತ್ತನೆ ಬೀಜ.

ಕಳಪೆ ಬಿತ್ತನೆ ಬೀಜದ ಬಗ್ಗೆ ಕಂಪನಿಯವರಿಗೆ ತಿಳಿಸಿದಾಗ ನಿಮಗೆ ನಷ್ಟ ಆದರೆ ನಾವು ನಿಮ್ಮಗೆ ಪರಿಹಾರ ಕಟ್ಟಿಕೊಡುತ್ತೇವೆ ಎಂದು ತಿಳಿಸಿದ್ದಾರೆ ಆದರೆ ಇದೀಗ ನಾವು ಪರಿಹಾರ ಕಟ್ಟಿಕೊಡುವುದಿಲ್ಲ ನೀವು ಬೇಕಾದರೆ ಕೋರ್ಟ್ ಗೆ ಹೋಗಿ ಪ್ರಕರಣ ದಾಖಲಿಸಿ ಎಂದು ಬೇಜವಾಬ್ಧಾರಿ ಉತ್ತರ ನೀಡುತ್ತಿದ್ದಾರೆ ಎಂದು ರೈತ ತನ್ನ ಅಳಲು ತೋಡಿಕೊಂಡಿದ್ದಾರೆ.

ಇನ್ನೂ ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ತಿಂಗಳು ರೈತ ಕಷ್ಟ ಪಟ್ಟು ಬೆಳೆದ ಬೆಳೆಗೆ ಪ್ರತಿಫಲವಿಲ್ಲದೆ ಇದೀಗ ರೈತ ಪರಿಹಾರಕ್ಕೆ ಎದುರು ಪರಿಸ್ಥಿತಿ ನಿರ್ಮಾಣವಾಗಿದೆ.

ಒಟ್ಟಾರೆ ಬಯಲು ಸೀಮೆ ಪ್ರದೇಶದಲ್ಲಿ ರೈತ ಬೆಳೆ ಬೆಳೆಯುದೇ ಹರ ಸಾಹಸ ಪಡಬೇಕು. ಇಂತಹ‌ ಸನ್ನಿವೇಶದಲ್ಲಿ ರೈತನಿಗೆ ಈ ರೀತಿ ಕಳಪೆ ಬಿತ್ತನೆ ಬೀಜ ವಿತರಣೆ ಮಾಡಿದವರ ವಿರುದ್ಧ ದೂರು ದಾಖಲಿಸಿ ನಷ್ಟಕ್ಕೆ ಒಳಗಾದ ರೈತನಿಗೆ ಸೂಕ್ತ ಪರಿಹಾರ ಒದಗಿಸಬೇಕಾಗಿದೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

15 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago