ತಾಲೂಕಿನ ತೂಬಗೆರೆ ಹೋಬಳಿಯ ತುರುವನಹಳ್ಳಿ ಗ್ರಾಮದ ವಾಸು ಎಂಬ ರೈತ ತನ್ನ ಮೂರು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ನಂತರ ಬೆಳೆ ಮಾತ್ರ ಎಲ್ಲರ ಕಣ್ಣು ಕುಕ್ಕುವ ಹಾಗೆ ಆಳೆತ್ತರಕ್ಕೆ ಬೆಳೆದು ನಿಂತಿದೆ. ಇದೀಗ ಬೆಳೆಯಲ್ಲಿ ಶೂನ್ಯ ಫಸಲು ಬಂದಿರುವುದು ಮಾತ್ರ ಇದೀಗ ರೈತನಿಗೆ ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೆ ಕಾರಣ ಕಳೆದ ಮೂರು ತಿಂಗಳ ಹಿಂದೆ ತೂಬಗೆರೆಯ ಬಿತ್ತನೆ ಬೀಜ ಮಾರಾಟ ಅಂಗಡಿಯಲ್ಲಿ ಹೈದರಾಬಾದ್ ಸಿಡ್ಸ್ 8199 ಮುಸುಕಿನ ಜೋಳದ ಬಿತ್ತನೆ ಬೀಜ ಖರೀದಿಸಿ ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದ್ದಾರೆ. ಒಂದು ಜೋಳದ ಕಡ್ಡಿಯೊಳಗೆ ಒಂದು ಅಥವಾ ಎರಡು ತೆನೆ ಬರಬೇಕು. ಆದರೆ ಈ ಬಿತ್ತನೆ ಬೀಜದಲ್ಲಿ ಒಂದು ಕಡ್ಡಿಗೆ ನಾಲ್ಕರಿಂದ ಐದು ತೆನೆ ಬಂದಿದೆ. ಬಂದಿರುವ ತೆನೆಯಲ್ಲೂ ಸರಿಯಾಗಿ ಬೀಜ ಉತ್ಪತ್ತಿ ಆಗಿಲ್ಲ ಅನ್ನೋದು ಇದೀಗ ರೈತನ ಆತಂಕಕ್ಕೆ ಕಾರಣವಾಗಿದೆ. ನೀರಿನ ಬವಣೆಯಲ್ಲೂ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ.
ಕಳಪೆ ಬಿತ್ತನೆ ಬೀಜದ ಬಗ್ಗೆ ಕಂಪನಿಯವರಿಗೆ ತಿಳಿಸಿದಾಗ ನಿಮಗೆ ನಷ್ಟ ಆದರೆ ನಾವು ನಿಮ್ಮಗೆ ಪರಿಹಾರ ಕಟ್ಟಿಕೊಡುತ್ತೇವೆ ಎಂದು ತಿಳಿಸಿದ್ದಾರೆ ಆದರೆ ಇದೀಗ ನಾವು ಪರಿಹಾರ ಕಟ್ಟಿಕೊಡುವುದಿಲ್ಲ ನೀವು ಬೇಕಾದರೆ ಕೋರ್ಟ್ ಗೆ ಹೋಗಿ ಪ್ರಕರಣ ದಾಖಲಿಸಿ ಎಂದು ಬೇಜವಾಬ್ಧಾರಿ ಉತ್ತರ ನೀಡುತ್ತಿದ್ದಾರೆ ಎಂದು ರೈತ ತನ್ನ ಅಳಲು ತೋಡಿಕೊಂಡಿದ್ದಾರೆ.
ಇನ್ನೂ ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ತಿಂಗಳು ರೈತ ಕಷ್ಟ ಪಟ್ಟು ಬೆಳೆದ ಬೆಳೆಗೆ ಪ್ರತಿಫಲವಿಲ್ಲದೆ ಇದೀಗ ರೈತ ಪರಿಹಾರಕ್ಕೆ ಎದುರು ಪರಿಸ್ಥಿತಿ ನಿರ್ಮಾಣವಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…