ಕಳಪೆ ಬಿತ್ತನೆ ಬೀಜ ಖರೀದಿಸಿ ಮೋಸ ಹೋದ ರೈತ: ಬಿತ್ತನೆ ಬೀಜ ಮಾರಾಟ ಅಂಗಡಿಯಿಂದ ರೈತನಿಗೆ ಮೋಸ

ತಾಲೂಕಿನ ತೂಬಗೆರೆ ಹೋಬಳಿಯ ತುರುವನಹಳ್ಳಿ ಗ್ರಾಮದ ವಾಸು ಎಂಬ ರೈತ ತನ್ನ ಮೂರು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ನಂತರ ಬೆಳೆ ಮಾತ್ರ ಎಲ್ಲರ ಕಣ್ಣು ಕುಕ್ಕುವ ಹಾಗೆ ಆಳೆತ್ತರಕ್ಕೆ ಬೆಳೆದು ನಿಂತಿದೆ. ಇದೀಗ ಬೆಳೆಯಲ್ಲಿ ಶೂನ್ಯ ಫಸಲು ಬಂದಿರುವುದು ಮಾತ್ರ ಇದೀಗ ರೈತನಿಗೆ ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದಕ್ಕೆ ಕಾರಣ ಕಳೆದ ಮೂರು ತಿಂಗಳ ಹಿಂದೆ ತೂಬಗೆರೆಯ ಬಿತ್ತನೆ ಬೀಜ ಮಾರಾಟ ಅಂಗಡಿಯಲ್ಲಿ ಹೈದರಾಬಾದ್ ಸಿಡ್ಸ್ 8199 ಮುಸುಕಿನ ಜೋಳದ ಬಿತ್ತನೆ ಬೀಜ ಖರೀದಿಸಿ ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದ್ದಾರೆ. ಒಂದು ಜೋಳದ ಕಡ್ಡಿಯೊಳಗೆ ಒಂದು ಅಥವಾ ಎರಡು ತೆನೆ ಬರಬೇಕು. ಆದರೆ ಈ ಬಿತ್ತನೆ ಬೀಜದಲ್ಲಿ ಒಂದು ಕಡ್ಡಿಗೆ ನಾಲ್ಕರಿಂದ ಐದು ತೆನೆ ಬಂದಿದೆ. ಬಂದಿರುವ ತೆನೆಯಲ್ಲೂ ಸರಿಯಾಗಿ ಬೀಜ ಉತ್ಪತ್ತಿ ಆಗಿಲ್ಲ ಅನ್ನೋದು ಇದೀಗ ರೈತನ ಆತಂಕಕ್ಕೆ ಕಾರಣವಾಗಿದೆ. ನೀರಿನ ಬವಣೆಯಲ್ಲೂ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ.

ರೈತ ತನ್ನ ತೋಟದಲ್ಲಿ ಹಗಲು ರಾತ್ರಿ ಎನ್ನದೆ ದುಡಿದು, ಹಂದಿ, ನಾಯಿಗಳ, ಕಾಟದಿಂದ ತನ್ನ ತೋಟವನ್ನು ರಕ್ಷಿಸಿಕೊಂಡಿದ್ದ. ಆದ್ರೆ ಕೊನೆಗೆ ರೈತನಿಗೆ ತಾನು ಬೆಳೆದ ಬೆಳೆಯಲ್ಲಿ ಸಿಕ್ಕಿದ್ದು ಮಾತ್ರ ಶೂನ್ಯ. ಅಷ್ಟಕ್ಕೂ ಕಷ್ಟ ಪಟ್ಟು ಬೆಳೆದ ಬೆಳೆಯಲ್ಲಿ ಶೂನ್ಯ ಫಸಲು ಸಿಗಲು ಕಾರಣ ಕಳಪೆ ಬಿತ್ತನೆ ಬೀಜ.

ಕಳಪೆ ಬಿತ್ತನೆ ಬೀಜದ ಬಗ್ಗೆ ಕಂಪನಿಯವರಿಗೆ ತಿಳಿಸಿದಾಗ ನಿಮಗೆ ನಷ್ಟ ಆದರೆ ನಾವು ನಿಮ್ಮಗೆ ಪರಿಹಾರ ಕಟ್ಟಿಕೊಡುತ್ತೇವೆ ಎಂದು ತಿಳಿಸಿದ್ದಾರೆ ಆದರೆ ಇದೀಗ ನಾವು ಪರಿಹಾರ ಕಟ್ಟಿಕೊಡುವುದಿಲ್ಲ ನೀವು ಬೇಕಾದರೆ ಕೋರ್ಟ್ ಗೆ ಹೋಗಿ ಪ್ರಕರಣ ದಾಖಲಿಸಿ ಎಂದು ಬೇಜವಾಬ್ಧಾರಿ ಉತ್ತರ ನೀಡುತ್ತಿದ್ದಾರೆ ಎಂದು ರೈತ ತನ್ನ ಅಳಲು ತೋಡಿಕೊಂಡಿದ್ದಾರೆ.

ಇನ್ನೂ ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ತಿಂಗಳು ರೈತ ಕಷ್ಟ ಪಟ್ಟು ಬೆಳೆದ ಬೆಳೆಗೆ ಪ್ರತಿಫಲವಿಲ್ಲದೆ ಇದೀಗ ರೈತ ಪರಿಹಾರಕ್ಕೆ ಎದುರು ಪರಿಸ್ಥಿತಿ ನಿರ್ಮಾಣವಾಗಿದೆ.

ಒಟ್ಟಾರೆ ಬಯಲು ಸೀಮೆ ಪ್ರದೇಶದಲ್ಲಿ ರೈತ ಬೆಳೆ ಬೆಳೆಯುದೇ ಹರ ಸಾಹಸ ಪಡಬೇಕು. ಇಂತಹ‌ ಸನ್ನಿವೇಶದಲ್ಲಿ ರೈತನಿಗೆ ಈ ರೀತಿ ಕಳಪೆ ಬಿತ್ತನೆ ಬೀಜ ವಿತರಣೆ ಮಾಡಿದವರ ವಿರುದ್ಧ ದೂರು ದಾಖಲಿಸಿ ನಷ್ಟಕ್ಕೆ ಒಳಗಾದ ರೈತನಿಗೆ ಸೂಕ್ತ ಪರಿಹಾರ ಒದಗಿಸಬೇಕಾಗಿದೆ.

Ramesh Babu

Journalist

Recent Posts

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

47 minutes ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

2 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

2 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

3 hours ago

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

7 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

20 hours ago