ತಾಲೂಕಿನ ತೂಬಗೆರೆ ಹೋಬಳಿಯ ತುರುವನಹಳ್ಳಿ ಗ್ರಾಮದ ವಾಸು ಎಂಬ ರೈತ ತನ್ನ ಮೂರು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ನಂತರ ಬೆಳೆ ಮಾತ್ರ ಎಲ್ಲರ ಕಣ್ಣು ಕುಕ್ಕುವ ಹಾಗೆ ಆಳೆತ್ತರಕ್ಕೆ ಬೆಳೆದು ನಿಂತಿದೆ. ಇದೀಗ ಬೆಳೆಯಲ್ಲಿ ಶೂನ್ಯ ಫಸಲು ಬಂದಿರುವುದು ಮಾತ್ರ ಇದೀಗ ರೈತನಿಗೆ ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೆ ಕಾರಣ ಕಳೆದ ಮೂರು ತಿಂಗಳ ಹಿಂದೆ ತೂಬಗೆರೆಯ ಬಿತ್ತನೆ ಬೀಜ ಮಾರಾಟ ಅಂಗಡಿಯಲ್ಲಿ ಹೈದರಾಬಾದ್ ಸಿಡ್ಸ್ 8199 ಮುಸುಕಿನ ಜೋಳದ ಬಿತ್ತನೆ ಬೀಜ ಖರೀದಿಸಿ ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದ್ದಾರೆ. ಒಂದು ಜೋಳದ ಕಡ್ಡಿಯೊಳಗೆ ಒಂದು ಅಥವಾ ಎರಡು ತೆನೆ ಬರಬೇಕು. ಆದರೆ ಈ ಬಿತ್ತನೆ ಬೀಜದಲ್ಲಿ ಒಂದು ಕಡ್ಡಿಗೆ ನಾಲ್ಕರಿಂದ ಐದು ತೆನೆ ಬಂದಿದೆ. ಬಂದಿರುವ ತೆನೆಯಲ್ಲೂ ಸರಿಯಾಗಿ ಬೀಜ ಉತ್ಪತ್ತಿ ಆಗಿಲ್ಲ ಅನ್ನೋದು ಇದೀಗ ರೈತನ ಆತಂಕಕ್ಕೆ ಕಾರಣವಾಗಿದೆ. ನೀರಿನ ಬವಣೆಯಲ್ಲೂ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ.
ಕಳಪೆ ಬಿತ್ತನೆ ಬೀಜದ ಬಗ್ಗೆ ಕಂಪನಿಯವರಿಗೆ ತಿಳಿಸಿದಾಗ ನಿಮಗೆ ನಷ್ಟ ಆದರೆ ನಾವು ನಿಮ್ಮಗೆ ಪರಿಹಾರ ಕಟ್ಟಿಕೊಡುತ್ತೇವೆ ಎಂದು ತಿಳಿಸಿದ್ದಾರೆ ಆದರೆ ಇದೀಗ ನಾವು ಪರಿಹಾರ ಕಟ್ಟಿಕೊಡುವುದಿಲ್ಲ ನೀವು ಬೇಕಾದರೆ ಕೋರ್ಟ್ ಗೆ ಹೋಗಿ ಪ್ರಕರಣ ದಾಖಲಿಸಿ ಎಂದು ಬೇಜವಾಬ್ಧಾರಿ ಉತ್ತರ ನೀಡುತ್ತಿದ್ದಾರೆ ಎಂದು ರೈತ ತನ್ನ ಅಳಲು ತೋಡಿಕೊಂಡಿದ್ದಾರೆ.
ಇನ್ನೂ ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ತಿಂಗಳು ರೈತ ಕಷ್ಟ ಪಟ್ಟು ಬೆಳೆದ ಬೆಳೆಗೆ ಪ್ರತಿಫಲವಿಲ್ಲದೆ ಇದೀಗ ರೈತ ಪರಿಹಾರಕ್ಕೆ ಎದುರು ಪರಿಸ್ಥಿತಿ ನಿರ್ಮಾಣವಾಗಿದೆ.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…