ತಾಲೂಕಿನ ತೂಬಗೆರೆ ಹೋಬಳಿಯ ತುರುವನಹಳ್ಳಿ ಗ್ರಾಮದ ವಾಸು ಎಂಬ ರೈತ ತನ್ನ ಮೂರು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ನಂತರ ಬೆಳೆ ಮಾತ್ರ ಎಲ್ಲರ ಕಣ್ಣು ಕುಕ್ಕುವ ಹಾಗೆ ಆಳೆತ್ತರಕ್ಕೆ ಬೆಳೆದು ನಿಂತಿದೆ. ಇದೀಗ ಬೆಳೆಯಲ್ಲಿ ಶೂನ್ಯ ಫಸಲು ಬಂದಿರುವುದು ಮಾತ್ರ ಇದೀಗ ರೈತನಿಗೆ ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೆ ಕಾರಣ ಕಳೆದ ಮೂರು ತಿಂಗಳ ಹಿಂದೆ ತೂಬಗೆರೆಯ ಬಿತ್ತನೆ ಬೀಜ ಮಾರಾಟ ಅಂಗಡಿಯಲ್ಲಿ ಹೈದರಾಬಾದ್ ಸಿಡ್ಸ್ 8199 ಮುಸುಕಿನ ಜೋಳದ ಬಿತ್ತನೆ ಬೀಜ ಖರೀದಿಸಿ ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದ್ದಾರೆ. ಒಂದು ಜೋಳದ ಕಡ್ಡಿಯೊಳಗೆ ಒಂದು ಅಥವಾ ಎರಡು ತೆನೆ ಬರಬೇಕು. ಆದರೆ ಈ ಬಿತ್ತನೆ ಬೀಜದಲ್ಲಿ ಒಂದು ಕಡ್ಡಿಗೆ ನಾಲ್ಕರಿಂದ ಐದು ತೆನೆ ಬಂದಿದೆ. ಬಂದಿರುವ ತೆನೆಯಲ್ಲೂ ಸರಿಯಾಗಿ ಬೀಜ ಉತ್ಪತ್ತಿ ಆಗಿಲ್ಲ ಅನ್ನೋದು ಇದೀಗ ರೈತನ ಆತಂಕಕ್ಕೆ ಕಾರಣವಾಗಿದೆ. ನೀರಿನ ಬವಣೆಯಲ್ಲೂ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ.
ಕಳಪೆ ಬಿತ್ತನೆ ಬೀಜದ ಬಗ್ಗೆ ಕಂಪನಿಯವರಿಗೆ ತಿಳಿಸಿದಾಗ ನಿಮಗೆ ನಷ್ಟ ಆದರೆ ನಾವು ನಿಮ್ಮಗೆ ಪರಿಹಾರ ಕಟ್ಟಿಕೊಡುತ್ತೇವೆ ಎಂದು ತಿಳಿಸಿದ್ದಾರೆ ಆದರೆ ಇದೀಗ ನಾವು ಪರಿಹಾರ ಕಟ್ಟಿಕೊಡುವುದಿಲ್ಲ ನೀವು ಬೇಕಾದರೆ ಕೋರ್ಟ್ ಗೆ ಹೋಗಿ ಪ್ರಕರಣ ದಾಖಲಿಸಿ ಎಂದು ಬೇಜವಾಬ್ಧಾರಿ ಉತ್ತರ ನೀಡುತ್ತಿದ್ದಾರೆ ಎಂದು ರೈತ ತನ್ನ ಅಳಲು ತೋಡಿಕೊಂಡಿದ್ದಾರೆ.
ಇನ್ನೂ ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ತಿಂಗಳು ರೈತ ಕಷ್ಟ ಪಟ್ಟು ಬೆಳೆದ ಬೆಳೆಗೆ ಪ್ರತಿಫಲವಿಲ್ಲದೆ ಇದೀಗ ರೈತ ಪರಿಹಾರಕ್ಕೆ ಎದುರು ಪರಿಸ್ಥಿತಿ ನಿರ್ಮಾಣವಾಗಿದೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…