ಕಳಪೆ ಮೆಕ್ಕೆಜೋಳ ಕಂಡು ಅಧಿಕಾರಿಗಳ ಬೇವರಿಳಿಸಿದ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

ಕರ್ನಾಟಕ ಹಾಲು ಮಹಾ ಮಂಡಳಿಯ ನೂತನ ಅಧ್ಯಕ್ಷರಾಗಿರುವ ಹಗರಿಬೊಮ್ಮನಹಳ್ಳಿಯ ಮಾಜಿ ಶಾಸಕ ಭೀಮಾನಾಯ್ಕ್ ಕಾರ್ಯೋನ್ಮುರಾಗಿದ್ದಾರೆ. ರೈತರಿಂದ ಪಶು ಆಹಾರದ ಗುಣಮಟ್ಟ ಕಡಿಮೆಯಾಗುತ್ತಿರುವ ದೂರು ಕೇಳಿ ಬಂದ ಹಿನ್ನೆಲೆ ಇಂದು ರಾಜಾನುಕುಂಟೆಯಲ್ಲಿರುವ ಪಶು ಆಹಾರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಖುದ್ದು ಗೋದಾಮುಗಳ ಪರಿಶೀಲನೆ ನಡೆಸಿದ ಭೀಮಾನಾಯ್ಕ್, ದಾಸ್ತಾನಾಗಿದ್ದ ಮೆಕ್ಕೆಜೋಳ, ವಿವಿಧ ಕಚ್ಚಾ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಜೋಳಗಳಲ್ಲಿ ಹುಳುಗಳು ಕಾಣಿಸಿಕೊಂಡಿದ್ದರಿಂದ ಅಧ್ಯಕ್ಷ ಭೀಮಾನಾಯ್ಕ್ ಸೇರಿ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ನಿರ್ದೇಶಕರಾದ ಬಿ.ಸಿ.ಆನಂದ್ ಕುಮಾರ್, ಕಾಪು ದಿವಾಕರ ಶೆಟ್ಟಿ, ಮರಳುಸಿದ್ದಪ್ಪನವರು ಅಧಿಕಾರಿಗಳ ಕಾರ್ಯ ವೈಖರಿಗೆ ಚಾಟಿ ಬೀಸಿದರು.

ಗುಣಮಟ್ಟವನ್ನು ಮತ್ತಷ್ಟು ಪರೀಕ್ಷೆಗೊಳಪಡಿಸಲು ವಿವಿಧ ಸ್ಯಾಂಪಲ್ ಗಳನ್ನು ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಲಾಯಿತು.

ರೈತರ ಸಮಸ್ಯೆ ನನಗೂ ತಿಳಿದಿದೆ:

ಪಶು ಆಹಾರ ಕಾರ್ಖಾನೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಮಾದರಿ ಒಕ್ಕೂಟ ಮಾಡುವ ಗುರಿಯೊಂದಿಗೆ ಕೆಎಂಎಫ್ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಸಿಬ್ಬಂದಿ ಯಾವುದೇ ಲೋಪದೋಷಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಯಾವುದೇ ಸಮಸ್ಯೆ ಇದ್ದರೂ ನಾನು ಬೇರೆಯವರಿಂದ ತೀಳಿಯಬೇಕಿಲ್ಲ. ಏಕೆಂದರೆ ನಾನು ಕೂಡ 100 ಹಸುಗಳನ್ನು ಸಾಕಿದ್ದೇನೆ. ಡೇರಿಗೆ ಹಾಲನ್ನು ಹಾಕುತ್ತಿದ್ದೇನೆ. ರೈತರ ಸಮಸ್ಯೆಗಳು ನನಗೂ ಅನ್ವಯಿಸುತ್ತದೆ, ಸ್ವ ತಿಳಿಯುತ್ತದೆ ಎಂದರು.

ಯಾವುದೇ ಪ್ರಭಾವಕ್ಕೂ ಬಗ್ಗಲ್ಲ: ಗುಣಮಟ್ಟದಲ್ಲಿ ರಾಜಿ ಇಲ್ಲವೇ ಇಲ್ಲ:

ಕೆಎಂಎಫ್ ನ ಯಾವುದೇ ಕಚೇರಿಯ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ರೈತರಿಗೆ ಉತ್ತಮ ಗುಣಮಟ್ಟದ ಪಶು ಆಹಾರ ವಿತರಣೆ ಮಾಡಿದರೆ ಹೆಚ್ಚಿನ ಹಾಲು ಉತ್ಪಾದನೆಯಾಗುತ್ತದೆ. ರೈತರಿಗೂ ಅನುಕೂಲವಾಗುತ್ತದೆ. ಹೀಗಾಗಿ ನಾನು

ಗುಣಮಟ್ಟ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಶತಯಾಗತಯ ಅತ್ಯುತ್ತಮ ಗುಣಮಟ್ಟವನ್ನು ಕಾಪಾಡಲೇಬೇಕು. ಮುಂದಿನ ದಿನಗಳಲ್ಲಿ ನಾನು ಯಾವುದೇ ಕ್ಷಣದಲ್ಲಿಯೂ ಭೇಟಿ ನೀಡಬಹುದು. ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಹಾಲು ಉತ್ಪಾದನೆಯಲ್ಲಿ ನಾವು ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಮೊದಲ ಸ್ಥಾನಕ್ಕೆ ಬರಲು ಕೆಲಸ ಮಾಡಬೇಕು ಎಂದರು. ಯಾವುದೇ ದೂರುಗಳು ಬಂದರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಎಷ್ಟೆ ದೊಡ್ಡ ಪ್ರಭಾವ ಬೀರಿದರೂ ಬಿಡುವುದಿಲ್ಲ. ರೈತರು ಕಟ್ಟಿದ ಸಂಸ್ಥೆ ಕೆಎಂಎಫ್ ಆಗಿದೆ. ಅದನ್ನು ಉಳಿಸುವಂತ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕೆಎಂಎಫ್ ನೂತನ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ಮಾತನಾಡಿ ರಾಜ್ಯದ 15 ಹಾಲು ಒಕ್ಕೂಟದ ಮುಖ್ಯ ಒಕ್ಕೂಟ ಕೆಎಂಎಫ್ ಆಗಿದೆ. ಹಾಲಿನಿಂದಲೆ ಕೆಎಂಎಫ್ ನಡೆಯುತ್ತಿರುವುದು. ಉತ್ತಮ ಗುಣಮಟ್ಟದ ಹಾಲು ಸರಬರಾಜು ಆಗಬೇಕಾದರೆ ಉತ್ತಮ ಆಹಾರ ಸರಬರಾಜು ಆಗಬೇಕು. ನೀವು ಕೆಟ್ಟ ಆಹಾರ ಕೊಟ್ಟರೆ ಹಾಲಿನ ಗುಣಮಟ್ಟ ಕಡಿಮೆಯಾಗುತ್ತದೆ. ಆತ್ಮಸಾಕ್ಷಿಗೆ ಮೋಸ ಮಾಡದಂತೆ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಬಳಿಕ ಹೆಸರುಘಟ್ಟದಲ್ಲಿರುವ ನಂದಿನಿ ವಿರ್ಯಾಣು ಕೇಂದ್ರ ಹಾಗೂ ಕೆಎಂಎಫ್ ಹೈಟೆಕ್ ಬುಲ್ ಮದರ್ ಫಾರಂ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಬಳ್ಳಾರಿ ನಿರ್ದೆಶಕ ಮರಳು ಸಿದ್ದಪ್ಪ, ಉಡುಪಿಯ ಕಾಪು ದಿವಾಕರ ಶೆಟ್ಟಿ, ಬಮೂಲ್ ನಿರ್ದೇಶಕ ಜೈಕುಮಾರ್, ಸಿಬ್ಬಂದಿಗಳಾದ ರಾಘವೇಂದ್ರ, ರಾಮಕೃಷ್ಣಪ್ಪ, ಮುನಿರೆಡ್ಡಿ ಮತ್ತಿತರರು ಇದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

24 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago