ಕಳಪೆ ಮೆಕ್ಕೆಜೋಳ ಕಂಡು ಅಧಿಕಾರಿಗಳ ಬೇವರಿಳಿಸಿದ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

ಕರ್ನಾಟಕ ಹಾಲು ಮಹಾ ಮಂಡಳಿಯ ನೂತನ ಅಧ್ಯಕ್ಷರಾಗಿರುವ ಹಗರಿಬೊಮ್ಮನಹಳ್ಳಿಯ ಮಾಜಿ ಶಾಸಕ ಭೀಮಾನಾಯ್ಕ್ ಕಾರ್ಯೋನ್ಮುರಾಗಿದ್ದಾರೆ. ರೈತರಿಂದ ಪಶು ಆಹಾರದ ಗುಣಮಟ್ಟ ಕಡಿಮೆಯಾಗುತ್ತಿರುವ ದೂರು ಕೇಳಿ ಬಂದ ಹಿನ್ನೆಲೆ ಇಂದು ರಾಜಾನುಕುಂಟೆಯಲ್ಲಿರುವ ಪಶು ಆಹಾರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಖುದ್ದು ಗೋದಾಮುಗಳ ಪರಿಶೀಲನೆ ನಡೆಸಿದ ಭೀಮಾನಾಯ್ಕ್, ದಾಸ್ತಾನಾಗಿದ್ದ ಮೆಕ್ಕೆಜೋಳ, ವಿವಿಧ ಕಚ್ಚಾ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಜೋಳಗಳಲ್ಲಿ ಹುಳುಗಳು ಕಾಣಿಸಿಕೊಂಡಿದ್ದರಿಂದ ಅಧ್ಯಕ್ಷ ಭೀಮಾನಾಯ್ಕ್ ಸೇರಿ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ನಿರ್ದೇಶಕರಾದ ಬಿ.ಸಿ.ಆನಂದ್ ಕುಮಾರ್, ಕಾಪು ದಿವಾಕರ ಶೆಟ್ಟಿ, ಮರಳುಸಿದ್ದಪ್ಪನವರು ಅಧಿಕಾರಿಗಳ ಕಾರ್ಯ ವೈಖರಿಗೆ ಚಾಟಿ ಬೀಸಿದರು.

ಗುಣಮಟ್ಟವನ್ನು ಮತ್ತಷ್ಟು ಪರೀಕ್ಷೆಗೊಳಪಡಿಸಲು ವಿವಿಧ ಸ್ಯಾಂಪಲ್ ಗಳನ್ನು ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಲಾಯಿತು.

ರೈತರ ಸಮಸ್ಯೆ ನನಗೂ ತಿಳಿದಿದೆ:

ಪಶು ಆಹಾರ ಕಾರ್ಖಾನೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಮಾದರಿ ಒಕ್ಕೂಟ ಮಾಡುವ ಗುರಿಯೊಂದಿಗೆ ಕೆಎಂಎಫ್ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಸಿಬ್ಬಂದಿ ಯಾವುದೇ ಲೋಪದೋಷಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಯಾವುದೇ ಸಮಸ್ಯೆ ಇದ್ದರೂ ನಾನು ಬೇರೆಯವರಿಂದ ತೀಳಿಯಬೇಕಿಲ್ಲ. ಏಕೆಂದರೆ ನಾನು ಕೂಡ 100 ಹಸುಗಳನ್ನು ಸಾಕಿದ್ದೇನೆ. ಡೇರಿಗೆ ಹಾಲನ್ನು ಹಾಕುತ್ತಿದ್ದೇನೆ. ರೈತರ ಸಮಸ್ಯೆಗಳು ನನಗೂ ಅನ್ವಯಿಸುತ್ತದೆ, ಸ್ವ ತಿಳಿಯುತ್ತದೆ ಎಂದರು.

ಯಾವುದೇ ಪ್ರಭಾವಕ್ಕೂ ಬಗ್ಗಲ್ಲ: ಗುಣಮಟ್ಟದಲ್ಲಿ ರಾಜಿ ಇಲ್ಲವೇ ಇಲ್ಲ:

ಕೆಎಂಎಫ್ ನ ಯಾವುದೇ ಕಚೇರಿಯ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ರೈತರಿಗೆ ಉತ್ತಮ ಗುಣಮಟ್ಟದ ಪಶು ಆಹಾರ ವಿತರಣೆ ಮಾಡಿದರೆ ಹೆಚ್ಚಿನ ಹಾಲು ಉತ್ಪಾದನೆಯಾಗುತ್ತದೆ. ರೈತರಿಗೂ ಅನುಕೂಲವಾಗುತ್ತದೆ. ಹೀಗಾಗಿ ನಾನು

ಗುಣಮಟ್ಟ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಶತಯಾಗತಯ ಅತ್ಯುತ್ತಮ ಗುಣಮಟ್ಟವನ್ನು ಕಾಪಾಡಲೇಬೇಕು. ಮುಂದಿನ ದಿನಗಳಲ್ಲಿ ನಾನು ಯಾವುದೇ ಕ್ಷಣದಲ್ಲಿಯೂ ಭೇಟಿ ನೀಡಬಹುದು. ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಹಾಲು ಉತ್ಪಾದನೆಯಲ್ಲಿ ನಾವು ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಮೊದಲ ಸ್ಥಾನಕ್ಕೆ ಬರಲು ಕೆಲಸ ಮಾಡಬೇಕು ಎಂದರು. ಯಾವುದೇ ದೂರುಗಳು ಬಂದರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಎಷ್ಟೆ ದೊಡ್ಡ ಪ್ರಭಾವ ಬೀರಿದರೂ ಬಿಡುವುದಿಲ್ಲ. ರೈತರು ಕಟ್ಟಿದ ಸಂಸ್ಥೆ ಕೆಎಂಎಫ್ ಆಗಿದೆ. ಅದನ್ನು ಉಳಿಸುವಂತ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕೆಎಂಎಫ್ ನೂತನ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ಮಾತನಾಡಿ ರಾಜ್ಯದ 15 ಹಾಲು ಒಕ್ಕೂಟದ ಮುಖ್ಯ ಒಕ್ಕೂಟ ಕೆಎಂಎಫ್ ಆಗಿದೆ. ಹಾಲಿನಿಂದಲೆ ಕೆಎಂಎಫ್ ನಡೆಯುತ್ತಿರುವುದು. ಉತ್ತಮ ಗುಣಮಟ್ಟದ ಹಾಲು ಸರಬರಾಜು ಆಗಬೇಕಾದರೆ ಉತ್ತಮ ಆಹಾರ ಸರಬರಾಜು ಆಗಬೇಕು. ನೀವು ಕೆಟ್ಟ ಆಹಾರ ಕೊಟ್ಟರೆ ಹಾಲಿನ ಗುಣಮಟ್ಟ ಕಡಿಮೆಯಾಗುತ್ತದೆ. ಆತ್ಮಸಾಕ್ಷಿಗೆ ಮೋಸ ಮಾಡದಂತೆ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಬಳಿಕ ಹೆಸರುಘಟ್ಟದಲ್ಲಿರುವ ನಂದಿನಿ ವಿರ್ಯಾಣು ಕೇಂದ್ರ ಹಾಗೂ ಕೆಎಂಎಫ್ ಹೈಟೆಕ್ ಬುಲ್ ಮದರ್ ಫಾರಂ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಬಳ್ಳಾರಿ ನಿರ್ದೆಶಕ ಮರಳು ಸಿದ್ದಪ್ಪ, ಉಡುಪಿಯ ಕಾಪು ದಿವಾಕರ ಶೆಟ್ಟಿ, ಬಮೂಲ್ ನಿರ್ದೇಶಕ ಜೈಕುಮಾರ್, ಸಿಬ್ಬಂದಿಗಳಾದ ರಾಘವೇಂದ್ರ, ರಾಮಕೃಷ್ಣಪ್ಪ, ಮುನಿರೆಡ್ಡಿ ಮತ್ತಿತರರು ಇದ್ದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago