ಕಳಪೆ ಮೆಕ್ಕೆಜೋಳ ಕಂಡು ಅಧಿಕಾರಿಗಳ ಬೇವರಿಳಿಸಿದ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

ಕರ್ನಾಟಕ ಹಾಲು ಮಹಾ ಮಂಡಳಿಯ ನೂತನ ಅಧ್ಯಕ್ಷರಾಗಿರುವ ಹಗರಿಬೊಮ್ಮನಹಳ್ಳಿಯ ಮಾಜಿ ಶಾಸಕ ಭೀಮಾನಾಯ್ಕ್ ಕಾರ್ಯೋನ್ಮುರಾಗಿದ್ದಾರೆ. ರೈತರಿಂದ ಪಶು ಆಹಾರದ ಗುಣಮಟ್ಟ ಕಡಿಮೆಯಾಗುತ್ತಿರುವ ದೂರು ಕೇಳಿ ಬಂದ ಹಿನ್ನೆಲೆ ಇಂದು ರಾಜಾನುಕುಂಟೆಯಲ್ಲಿರುವ ಪಶು ಆಹಾರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಖುದ್ದು ಗೋದಾಮುಗಳ ಪರಿಶೀಲನೆ ನಡೆಸಿದ ಭೀಮಾನಾಯ್ಕ್, ದಾಸ್ತಾನಾಗಿದ್ದ ಮೆಕ್ಕೆಜೋಳ, ವಿವಿಧ ಕಚ್ಚಾ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಜೋಳಗಳಲ್ಲಿ ಹುಳುಗಳು ಕಾಣಿಸಿಕೊಂಡಿದ್ದರಿಂದ ಅಧ್ಯಕ್ಷ ಭೀಮಾನಾಯ್ಕ್ ಸೇರಿ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ನಿರ್ದೇಶಕರಾದ ಬಿ.ಸಿ.ಆನಂದ್ ಕುಮಾರ್, ಕಾಪು ದಿವಾಕರ ಶೆಟ್ಟಿ, ಮರಳುಸಿದ್ದಪ್ಪನವರು ಅಧಿಕಾರಿಗಳ ಕಾರ್ಯ ವೈಖರಿಗೆ ಚಾಟಿ ಬೀಸಿದರು.

ಗುಣಮಟ್ಟವನ್ನು ಮತ್ತಷ್ಟು ಪರೀಕ್ಷೆಗೊಳಪಡಿಸಲು ವಿವಿಧ ಸ್ಯಾಂಪಲ್ ಗಳನ್ನು ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಲಾಯಿತು.

ರೈತರ ಸಮಸ್ಯೆ ನನಗೂ ತಿಳಿದಿದೆ:

ಪಶು ಆಹಾರ ಕಾರ್ಖಾನೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಮಾದರಿ ಒಕ್ಕೂಟ ಮಾಡುವ ಗುರಿಯೊಂದಿಗೆ ಕೆಎಂಎಫ್ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಸಿಬ್ಬಂದಿ ಯಾವುದೇ ಲೋಪದೋಷಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಯಾವುದೇ ಸಮಸ್ಯೆ ಇದ್ದರೂ ನಾನು ಬೇರೆಯವರಿಂದ ತೀಳಿಯಬೇಕಿಲ್ಲ. ಏಕೆಂದರೆ ನಾನು ಕೂಡ 100 ಹಸುಗಳನ್ನು ಸಾಕಿದ್ದೇನೆ. ಡೇರಿಗೆ ಹಾಲನ್ನು ಹಾಕುತ್ತಿದ್ದೇನೆ. ರೈತರ ಸಮಸ್ಯೆಗಳು ನನಗೂ ಅನ್ವಯಿಸುತ್ತದೆ, ಸ್ವ ತಿಳಿಯುತ್ತದೆ ಎಂದರು.

ಯಾವುದೇ ಪ್ರಭಾವಕ್ಕೂ ಬಗ್ಗಲ್ಲ: ಗುಣಮಟ್ಟದಲ್ಲಿ ರಾಜಿ ಇಲ್ಲವೇ ಇಲ್ಲ:

ಕೆಎಂಎಫ್ ನ ಯಾವುದೇ ಕಚೇರಿಯ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ರೈತರಿಗೆ ಉತ್ತಮ ಗುಣಮಟ್ಟದ ಪಶು ಆಹಾರ ವಿತರಣೆ ಮಾಡಿದರೆ ಹೆಚ್ಚಿನ ಹಾಲು ಉತ್ಪಾದನೆಯಾಗುತ್ತದೆ. ರೈತರಿಗೂ ಅನುಕೂಲವಾಗುತ್ತದೆ. ಹೀಗಾಗಿ ನಾನು

ಗುಣಮಟ್ಟ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಶತಯಾಗತಯ ಅತ್ಯುತ್ತಮ ಗುಣಮಟ್ಟವನ್ನು ಕಾಪಾಡಲೇಬೇಕು. ಮುಂದಿನ ದಿನಗಳಲ್ಲಿ ನಾನು ಯಾವುದೇ ಕ್ಷಣದಲ್ಲಿಯೂ ಭೇಟಿ ನೀಡಬಹುದು. ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಹಾಲು ಉತ್ಪಾದನೆಯಲ್ಲಿ ನಾವು ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಮೊದಲ ಸ್ಥಾನಕ್ಕೆ ಬರಲು ಕೆಲಸ ಮಾಡಬೇಕು ಎಂದರು. ಯಾವುದೇ ದೂರುಗಳು ಬಂದರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಎಷ್ಟೆ ದೊಡ್ಡ ಪ್ರಭಾವ ಬೀರಿದರೂ ಬಿಡುವುದಿಲ್ಲ. ರೈತರು ಕಟ್ಟಿದ ಸಂಸ್ಥೆ ಕೆಎಂಎಫ್ ಆಗಿದೆ. ಅದನ್ನು ಉಳಿಸುವಂತ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕೆಎಂಎಫ್ ನೂತನ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ಮಾತನಾಡಿ ರಾಜ್ಯದ 15 ಹಾಲು ಒಕ್ಕೂಟದ ಮುಖ್ಯ ಒಕ್ಕೂಟ ಕೆಎಂಎಫ್ ಆಗಿದೆ. ಹಾಲಿನಿಂದಲೆ ಕೆಎಂಎಫ್ ನಡೆಯುತ್ತಿರುವುದು. ಉತ್ತಮ ಗುಣಮಟ್ಟದ ಹಾಲು ಸರಬರಾಜು ಆಗಬೇಕಾದರೆ ಉತ್ತಮ ಆಹಾರ ಸರಬರಾಜು ಆಗಬೇಕು. ನೀವು ಕೆಟ್ಟ ಆಹಾರ ಕೊಟ್ಟರೆ ಹಾಲಿನ ಗುಣಮಟ್ಟ ಕಡಿಮೆಯಾಗುತ್ತದೆ. ಆತ್ಮಸಾಕ್ಷಿಗೆ ಮೋಸ ಮಾಡದಂತೆ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಬಳಿಕ ಹೆಸರುಘಟ್ಟದಲ್ಲಿರುವ ನಂದಿನಿ ವಿರ್ಯಾಣು ಕೇಂದ್ರ ಹಾಗೂ ಕೆಎಂಎಫ್ ಹೈಟೆಕ್ ಬುಲ್ ಮದರ್ ಫಾರಂ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಬಳ್ಳಾರಿ ನಿರ್ದೆಶಕ ಮರಳು ಸಿದ್ದಪ್ಪ, ಉಡುಪಿಯ ಕಾಪು ದಿವಾಕರ ಶೆಟ್ಟಿ, ಬಮೂಲ್ ನಿರ್ದೇಶಕ ಜೈಕುಮಾರ್, ಸಿಬ್ಬಂದಿಗಳಾದ ರಾಘವೇಂದ್ರ, ರಾಮಕೃಷ್ಣಪ್ಪ, ಮುನಿರೆಡ್ಡಿ ಮತ್ತಿತರರು ಇದ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

13 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

22 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago