ಕರ್ನಾಟಕ ಹಾಲು ಮಹಾ ಮಂಡಳಿಯ ನೂತನ ಅಧ್ಯಕ್ಷರಾಗಿರುವ ಹಗರಿಬೊಮ್ಮನಹಳ್ಳಿಯ ಮಾಜಿ ಶಾಸಕ ಭೀಮಾನಾಯ್ಕ್ ಕಾರ್ಯೋನ್ಮುರಾಗಿದ್ದಾರೆ. ರೈತರಿಂದ ಪಶು ಆಹಾರದ ಗುಣಮಟ್ಟ ಕಡಿಮೆಯಾಗುತ್ತಿರುವ ದೂರು ಕೇಳಿ ಬಂದ ಹಿನ್ನೆಲೆ ಇಂದು ರಾಜಾನುಕುಂಟೆಯಲ್ಲಿರುವ ಪಶು ಆಹಾರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಖುದ್ದು ಗೋದಾಮುಗಳ ಪರಿಶೀಲನೆ ನಡೆಸಿದ ಭೀಮಾನಾಯ್ಕ್, ದಾಸ್ತಾನಾಗಿದ್ದ ಮೆಕ್ಕೆಜೋಳ, ವಿವಿಧ ಕಚ್ಚಾ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.
ಗುಣಮಟ್ಟವನ್ನು ಮತ್ತಷ್ಟು ಪರೀಕ್ಷೆಗೊಳಪಡಿಸಲು ವಿವಿಧ ಸ್ಯಾಂಪಲ್ ಗಳನ್ನು ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಲಾಯಿತು.
ಪಶು ಆಹಾರ ಕಾರ್ಖಾನೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಮಾದರಿ ಒಕ್ಕೂಟ ಮಾಡುವ ಗುರಿಯೊಂದಿಗೆ ಕೆಎಂಎಫ್ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಸಿಬ್ಬಂದಿ ಯಾವುದೇ ಲೋಪದೋಷಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಯಾವುದೇ ಸಮಸ್ಯೆ ಇದ್ದರೂ ನಾನು ಬೇರೆಯವರಿಂದ ತೀಳಿಯಬೇಕಿಲ್ಲ. ಏಕೆಂದರೆ ನಾನು ಕೂಡ 100 ಹಸುಗಳನ್ನು ಸಾಕಿದ್ದೇನೆ. ಡೇರಿಗೆ ಹಾಲನ್ನು ಹಾಕುತ್ತಿದ್ದೇನೆ. ರೈತರ ಸಮಸ್ಯೆಗಳು ನನಗೂ ಅನ್ವಯಿಸುತ್ತದೆ, ಸ್ವ ತಿಳಿಯುತ್ತದೆ ಎಂದರು.
ಯಾವುದೇ ಪ್ರಭಾವಕ್ಕೂ ಬಗ್ಗಲ್ಲ: ಗುಣಮಟ್ಟದಲ್ಲಿ ರಾಜಿ ಇಲ್ಲವೇ ಇಲ್ಲ:
ಗುಣಮಟ್ಟ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಶತಯಾಗತಯ ಅತ್ಯುತ್ತಮ ಗುಣಮಟ್ಟವನ್ನು ಕಾಪಾಡಲೇಬೇಕು. ಮುಂದಿನ ದಿನಗಳಲ್ಲಿ ನಾನು ಯಾವುದೇ ಕ್ಷಣದಲ್ಲಿಯೂ ಭೇಟಿ ನೀಡಬಹುದು. ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಹಾಲು ಉತ್ಪಾದನೆಯಲ್ಲಿ ನಾವು ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಮೊದಲ ಸ್ಥಾನಕ್ಕೆ ಬರಲು ಕೆಲಸ ಮಾಡಬೇಕು ಎಂದರು. ಯಾವುದೇ ದೂರುಗಳು ಬಂದರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಎಷ್ಟೆ ದೊಡ್ಡ ಪ್ರಭಾವ ಬೀರಿದರೂ ಬಿಡುವುದಿಲ್ಲ. ರೈತರು ಕಟ್ಟಿದ ಸಂಸ್ಥೆ ಕೆಎಂಎಫ್ ಆಗಿದೆ. ಅದನ್ನು ಉಳಿಸುವಂತ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಈ ವೇಳೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಬಳ್ಳಾರಿ ನಿರ್ದೆಶಕ ಮರಳು ಸಿದ್ದಪ್ಪ, ಉಡುಪಿಯ ಕಾಪು ದಿವಾಕರ ಶೆಟ್ಟಿ, ಬಮೂಲ್ ನಿರ್ದೇಶಕ ಜೈಕುಮಾರ್, ಸಿಬ್ಬಂದಿಗಳಾದ ರಾಘವೇಂದ್ರ, ರಾಮಕೃಷ್ಣಪ್ಪ, ಮುನಿರೆಡ್ಡಿ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…