ಕಳಪೆ ಮೆಕ್ಕೆಜೋಳ ಕಂಡು ಅಧಿಕಾರಿಗಳ ಬೇವರಿಳಿಸಿದ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

ಕರ್ನಾಟಕ ಹಾಲು ಮಹಾ ಮಂಡಳಿಯ ನೂತನ ಅಧ್ಯಕ್ಷರಾಗಿರುವ ಹಗರಿಬೊಮ್ಮನಹಳ್ಳಿಯ ಮಾಜಿ ಶಾಸಕ ಭೀಮಾನಾಯ್ಕ್ ಕಾರ್ಯೋನ್ಮುರಾಗಿದ್ದಾರೆ. ರೈತರಿಂದ ಪಶು ಆಹಾರದ ಗುಣಮಟ್ಟ ಕಡಿಮೆಯಾಗುತ್ತಿರುವ ದೂರು ಕೇಳಿ ಬಂದ ಹಿನ್ನೆಲೆ ಇಂದು ರಾಜಾನುಕುಂಟೆಯಲ್ಲಿರುವ ಪಶು ಆಹಾರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಖುದ್ದು ಗೋದಾಮುಗಳ ಪರಿಶೀಲನೆ ನಡೆಸಿದ ಭೀಮಾನಾಯ್ಕ್, ದಾಸ್ತಾನಾಗಿದ್ದ ಮೆಕ್ಕೆಜೋಳ, ವಿವಿಧ ಕಚ್ಚಾ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಜೋಳಗಳಲ್ಲಿ ಹುಳುಗಳು ಕಾಣಿಸಿಕೊಂಡಿದ್ದರಿಂದ ಅಧ್ಯಕ್ಷ ಭೀಮಾನಾಯ್ಕ್ ಸೇರಿ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ನಿರ್ದೇಶಕರಾದ ಬಿ.ಸಿ.ಆನಂದ್ ಕುಮಾರ್, ಕಾಪು ದಿವಾಕರ ಶೆಟ್ಟಿ, ಮರಳುಸಿದ್ದಪ್ಪನವರು ಅಧಿಕಾರಿಗಳ ಕಾರ್ಯ ವೈಖರಿಗೆ ಚಾಟಿ ಬೀಸಿದರು.

ಗುಣಮಟ್ಟವನ್ನು ಮತ್ತಷ್ಟು ಪರೀಕ್ಷೆಗೊಳಪಡಿಸಲು ವಿವಿಧ ಸ್ಯಾಂಪಲ್ ಗಳನ್ನು ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಲಾಯಿತು.

ರೈತರ ಸಮಸ್ಯೆ ನನಗೂ ತಿಳಿದಿದೆ:

ಪಶು ಆಹಾರ ಕಾರ್ಖಾನೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಮಾದರಿ ಒಕ್ಕೂಟ ಮಾಡುವ ಗುರಿಯೊಂದಿಗೆ ಕೆಎಂಎಫ್ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಸಿಬ್ಬಂದಿ ಯಾವುದೇ ಲೋಪದೋಷಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಯಾವುದೇ ಸಮಸ್ಯೆ ಇದ್ದರೂ ನಾನು ಬೇರೆಯವರಿಂದ ತೀಳಿಯಬೇಕಿಲ್ಲ. ಏಕೆಂದರೆ ನಾನು ಕೂಡ 100 ಹಸುಗಳನ್ನು ಸಾಕಿದ್ದೇನೆ. ಡೇರಿಗೆ ಹಾಲನ್ನು ಹಾಕುತ್ತಿದ್ದೇನೆ. ರೈತರ ಸಮಸ್ಯೆಗಳು ನನಗೂ ಅನ್ವಯಿಸುತ್ತದೆ, ಸ್ವ ತಿಳಿಯುತ್ತದೆ ಎಂದರು.

ಯಾವುದೇ ಪ್ರಭಾವಕ್ಕೂ ಬಗ್ಗಲ್ಲ: ಗುಣಮಟ್ಟದಲ್ಲಿ ರಾಜಿ ಇಲ್ಲವೇ ಇಲ್ಲ:

ಕೆಎಂಎಫ್ ನ ಯಾವುದೇ ಕಚೇರಿಯ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ರೈತರಿಗೆ ಉತ್ತಮ ಗುಣಮಟ್ಟದ ಪಶು ಆಹಾರ ವಿತರಣೆ ಮಾಡಿದರೆ ಹೆಚ್ಚಿನ ಹಾಲು ಉತ್ಪಾದನೆಯಾಗುತ್ತದೆ. ರೈತರಿಗೂ ಅನುಕೂಲವಾಗುತ್ತದೆ. ಹೀಗಾಗಿ ನಾನು

ಗುಣಮಟ್ಟ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಶತಯಾಗತಯ ಅತ್ಯುತ್ತಮ ಗುಣಮಟ್ಟವನ್ನು ಕಾಪಾಡಲೇಬೇಕು. ಮುಂದಿನ ದಿನಗಳಲ್ಲಿ ನಾನು ಯಾವುದೇ ಕ್ಷಣದಲ್ಲಿಯೂ ಭೇಟಿ ನೀಡಬಹುದು. ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಹಾಲು ಉತ್ಪಾದನೆಯಲ್ಲಿ ನಾವು ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಮೊದಲ ಸ್ಥಾನಕ್ಕೆ ಬರಲು ಕೆಲಸ ಮಾಡಬೇಕು ಎಂದರು. ಯಾವುದೇ ದೂರುಗಳು ಬಂದರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಎಷ್ಟೆ ದೊಡ್ಡ ಪ್ರಭಾವ ಬೀರಿದರೂ ಬಿಡುವುದಿಲ್ಲ. ರೈತರು ಕಟ್ಟಿದ ಸಂಸ್ಥೆ ಕೆಎಂಎಫ್ ಆಗಿದೆ. ಅದನ್ನು ಉಳಿಸುವಂತ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕೆಎಂಎಫ್ ನೂತನ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ಮಾತನಾಡಿ ರಾಜ್ಯದ 15 ಹಾಲು ಒಕ್ಕೂಟದ ಮುಖ್ಯ ಒಕ್ಕೂಟ ಕೆಎಂಎಫ್ ಆಗಿದೆ. ಹಾಲಿನಿಂದಲೆ ಕೆಎಂಎಫ್ ನಡೆಯುತ್ತಿರುವುದು. ಉತ್ತಮ ಗುಣಮಟ್ಟದ ಹಾಲು ಸರಬರಾಜು ಆಗಬೇಕಾದರೆ ಉತ್ತಮ ಆಹಾರ ಸರಬರಾಜು ಆಗಬೇಕು. ನೀವು ಕೆಟ್ಟ ಆಹಾರ ಕೊಟ್ಟರೆ ಹಾಲಿನ ಗುಣಮಟ್ಟ ಕಡಿಮೆಯಾಗುತ್ತದೆ. ಆತ್ಮಸಾಕ್ಷಿಗೆ ಮೋಸ ಮಾಡದಂತೆ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಬಳಿಕ ಹೆಸರುಘಟ್ಟದಲ್ಲಿರುವ ನಂದಿನಿ ವಿರ್ಯಾಣು ಕೇಂದ್ರ ಹಾಗೂ ಕೆಎಂಎಫ್ ಹೈಟೆಕ್ ಬುಲ್ ಮದರ್ ಫಾರಂ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಬಳ್ಳಾರಿ ನಿರ್ದೆಶಕ ಮರಳು ಸಿದ್ದಪ್ಪ, ಉಡುಪಿಯ ಕಾಪು ದಿವಾಕರ ಶೆಟ್ಟಿ, ಬಮೂಲ್ ನಿರ್ದೇಶಕ ಜೈಕುಮಾರ್, ಸಿಬ್ಬಂದಿಗಳಾದ ರಾಘವೇಂದ್ರ, ರಾಮಕೃಷ್ಣಪ್ಪ, ಮುನಿರೆಡ್ಡಿ ಮತ್ತಿತರರು ಇದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

23 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago