ಕರ್ನಾಟಕ ಹಾಲು ಮಹಾ ಮಂಡಳಿಯ ನೂತನ ಅಧ್ಯಕ್ಷರಾಗಿರುವ ಹಗರಿಬೊಮ್ಮನಹಳ್ಳಿಯ ಮಾಜಿ ಶಾಸಕ ಭೀಮಾನಾಯ್ಕ್ ಕಾರ್ಯೋನ್ಮುರಾಗಿದ್ದಾರೆ. ರೈತರಿಂದ ಪಶು ಆಹಾರದ ಗುಣಮಟ್ಟ ಕಡಿಮೆಯಾಗುತ್ತಿರುವ ದೂರು ಕೇಳಿ ಬಂದ ಹಿನ್ನೆಲೆ ಇಂದು ರಾಜಾನುಕುಂಟೆಯಲ್ಲಿರುವ ಪಶು ಆಹಾರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಖುದ್ದು ಗೋದಾಮುಗಳ ಪರಿಶೀಲನೆ ನಡೆಸಿದ ಭೀಮಾನಾಯ್ಕ್, ದಾಸ್ತಾನಾಗಿದ್ದ ಮೆಕ್ಕೆಜೋಳ, ವಿವಿಧ ಕಚ್ಚಾ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.
ಗುಣಮಟ್ಟವನ್ನು ಮತ್ತಷ್ಟು ಪರೀಕ್ಷೆಗೊಳಪಡಿಸಲು ವಿವಿಧ ಸ್ಯಾಂಪಲ್ ಗಳನ್ನು ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಲಾಯಿತು.
ಪಶು ಆಹಾರ ಕಾರ್ಖಾನೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಮಾದರಿ ಒಕ್ಕೂಟ ಮಾಡುವ ಗುರಿಯೊಂದಿಗೆ ಕೆಎಂಎಫ್ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಸಿಬ್ಬಂದಿ ಯಾವುದೇ ಲೋಪದೋಷಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಯಾವುದೇ ಸಮಸ್ಯೆ ಇದ್ದರೂ ನಾನು ಬೇರೆಯವರಿಂದ ತೀಳಿಯಬೇಕಿಲ್ಲ. ಏಕೆಂದರೆ ನಾನು ಕೂಡ 100 ಹಸುಗಳನ್ನು ಸಾಕಿದ್ದೇನೆ. ಡೇರಿಗೆ ಹಾಲನ್ನು ಹಾಕುತ್ತಿದ್ದೇನೆ. ರೈತರ ಸಮಸ್ಯೆಗಳು ನನಗೂ ಅನ್ವಯಿಸುತ್ತದೆ, ಸ್ವ ತಿಳಿಯುತ್ತದೆ ಎಂದರು.
ಯಾವುದೇ ಪ್ರಭಾವಕ್ಕೂ ಬಗ್ಗಲ್ಲ: ಗುಣಮಟ್ಟದಲ್ಲಿ ರಾಜಿ ಇಲ್ಲವೇ ಇಲ್ಲ:
ಗುಣಮಟ್ಟ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಶತಯಾಗತಯ ಅತ್ಯುತ್ತಮ ಗುಣಮಟ್ಟವನ್ನು ಕಾಪಾಡಲೇಬೇಕು. ಮುಂದಿನ ದಿನಗಳಲ್ಲಿ ನಾನು ಯಾವುದೇ ಕ್ಷಣದಲ್ಲಿಯೂ ಭೇಟಿ ನೀಡಬಹುದು. ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಹಾಲು ಉತ್ಪಾದನೆಯಲ್ಲಿ ನಾವು ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಮೊದಲ ಸ್ಥಾನಕ್ಕೆ ಬರಲು ಕೆಲಸ ಮಾಡಬೇಕು ಎಂದರು. ಯಾವುದೇ ದೂರುಗಳು ಬಂದರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಎಷ್ಟೆ ದೊಡ್ಡ ಪ್ರಭಾವ ಬೀರಿದರೂ ಬಿಡುವುದಿಲ್ಲ. ರೈತರು ಕಟ್ಟಿದ ಸಂಸ್ಥೆ ಕೆಎಂಎಫ್ ಆಗಿದೆ. ಅದನ್ನು ಉಳಿಸುವಂತ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಈ ವೇಳೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಬಳ್ಳಾರಿ ನಿರ್ದೆಶಕ ಮರಳು ಸಿದ್ದಪ್ಪ, ಉಡುಪಿಯ ಕಾಪು ದಿವಾಕರ ಶೆಟ್ಟಿ, ಬಮೂಲ್ ನಿರ್ದೇಶಕ ಜೈಕುಮಾರ್, ಸಿಬ್ಬಂದಿಗಳಾದ ರಾಘವೇಂದ್ರ, ರಾಮಕೃಷ್ಣಪ್ಪ, ಮುನಿರೆಡ್ಡಿ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…