ಕಳಪೆ ಮೆಕ್ಕೆಜೋಳ ಕಂಡು ಅಧಿಕಾರಿಗಳ ಬೇವರಿಳಿಸಿದ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

ಕರ್ನಾಟಕ ಹಾಲು ಮಹಾ ಮಂಡಳಿಯ ನೂತನ ಅಧ್ಯಕ್ಷರಾಗಿರುವ ಹಗರಿಬೊಮ್ಮನಹಳ್ಳಿಯ ಮಾಜಿ ಶಾಸಕ ಭೀಮಾನಾಯ್ಕ್ ಕಾರ್ಯೋನ್ಮುರಾಗಿದ್ದಾರೆ. ರೈತರಿಂದ ಪಶು ಆಹಾರದ ಗುಣಮಟ್ಟ ಕಡಿಮೆಯಾಗುತ್ತಿರುವ ದೂರು ಕೇಳಿ ಬಂದ ಹಿನ್ನೆಲೆ ಇಂದು ರಾಜಾನುಕುಂಟೆಯಲ್ಲಿರುವ ಪಶು ಆಹಾರ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಖುದ್ದು ಗೋದಾಮುಗಳ ಪರಿಶೀಲನೆ ನಡೆಸಿದ ಭೀಮಾನಾಯ್ಕ್, ದಾಸ್ತಾನಾಗಿದ್ದ ಮೆಕ್ಕೆಜೋಳ, ವಿವಿಧ ಕಚ್ಚಾ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಜೋಳಗಳಲ್ಲಿ ಹುಳುಗಳು ಕಾಣಿಸಿಕೊಂಡಿದ್ದರಿಂದ ಅಧ್ಯಕ್ಷ ಭೀಮಾನಾಯ್ಕ್ ಸೇರಿ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ನಿರ್ದೇಶಕರಾದ ಬಿ.ಸಿ.ಆನಂದ್ ಕುಮಾರ್, ಕಾಪು ದಿವಾಕರ ಶೆಟ್ಟಿ, ಮರಳುಸಿದ್ದಪ್ಪನವರು ಅಧಿಕಾರಿಗಳ ಕಾರ್ಯ ವೈಖರಿಗೆ ಚಾಟಿ ಬೀಸಿದರು.

ಗುಣಮಟ್ಟವನ್ನು ಮತ್ತಷ್ಟು ಪರೀಕ್ಷೆಗೊಳಪಡಿಸಲು ವಿವಿಧ ಸ್ಯಾಂಪಲ್ ಗಳನ್ನು ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಲಾಯಿತು.

ರೈತರ ಸಮಸ್ಯೆ ನನಗೂ ತಿಳಿದಿದೆ:

ಪಶು ಆಹಾರ ಕಾರ್ಖಾನೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಮಾದರಿ ಒಕ್ಕೂಟ ಮಾಡುವ ಗುರಿಯೊಂದಿಗೆ ಕೆಎಂಎಫ್ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಸಿಬ್ಬಂದಿ ಯಾವುದೇ ಲೋಪದೋಷಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಯಾವುದೇ ಸಮಸ್ಯೆ ಇದ್ದರೂ ನಾನು ಬೇರೆಯವರಿಂದ ತೀಳಿಯಬೇಕಿಲ್ಲ. ಏಕೆಂದರೆ ನಾನು ಕೂಡ 100 ಹಸುಗಳನ್ನು ಸಾಕಿದ್ದೇನೆ. ಡೇರಿಗೆ ಹಾಲನ್ನು ಹಾಕುತ್ತಿದ್ದೇನೆ. ರೈತರ ಸಮಸ್ಯೆಗಳು ನನಗೂ ಅನ್ವಯಿಸುತ್ತದೆ, ಸ್ವ ತಿಳಿಯುತ್ತದೆ ಎಂದರು.

ಯಾವುದೇ ಪ್ರಭಾವಕ್ಕೂ ಬಗ್ಗಲ್ಲ: ಗುಣಮಟ್ಟದಲ್ಲಿ ರಾಜಿ ಇಲ್ಲವೇ ಇಲ್ಲ:

ಕೆಎಂಎಫ್ ನ ಯಾವುದೇ ಕಚೇರಿಯ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ರೈತರಿಗೆ ಉತ್ತಮ ಗುಣಮಟ್ಟದ ಪಶು ಆಹಾರ ವಿತರಣೆ ಮಾಡಿದರೆ ಹೆಚ್ಚಿನ ಹಾಲು ಉತ್ಪಾದನೆಯಾಗುತ್ತದೆ. ರೈತರಿಗೂ ಅನುಕೂಲವಾಗುತ್ತದೆ. ಹೀಗಾಗಿ ನಾನು

ಗುಣಮಟ್ಟ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಶತಯಾಗತಯ ಅತ್ಯುತ್ತಮ ಗುಣಮಟ್ಟವನ್ನು ಕಾಪಾಡಲೇಬೇಕು. ಮುಂದಿನ ದಿನಗಳಲ್ಲಿ ನಾನು ಯಾವುದೇ ಕ್ಷಣದಲ್ಲಿಯೂ ಭೇಟಿ ನೀಡಬಹುದು. ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಹಾಲು ಉತ್ಪಾದನೆಯಲ್ಲಿ ನಾವು ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಮೊದಲ ಸ್ಥಾನಕ್ಕೆ ಬರಲು ಕೆಲಸ ಮಾಡಬೇಕು ಎಂದರು. ಯಾವುದೇ ದೂರುಗಳು ಬಂದರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಎಷ್ಟೆ ದೊಡ್ಡ ಪ್ರಭಾವ ಬೀರಿದರೂ ಬಿಡುವುದಿಲ್ಲ. ರೈತರು ಕಟ್ಟಿದ ಸಂಸ್ಥೆ ಕೆಎಂಎಫ್ ಆಗಿದೆ. ಅದನ್ನು ಉಳಿಸುವಂತ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕೆಎಂಎಫ್ ನೂತನ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ಮಾತನಾಡಿ ರಾಜ್ಯದ 15 ಹಾಲು ಒಕ್ಕೂಟದ ಮುಖ್ಯ ಒಕ್ಕೂಟ ಕೆಎಂಎಫ್ ಆಗಿದೆ. ಹಾಲಿನಿಂದಲೆ ಕೆಎಂಎಫ್ ನಡೆಯುತ್ತಿರುವುದು. ಉತ್ತಮ ಗುಣಮಟ್ಟದ ಹಾಲು ಸರಬರಾಜು ಆಗಬೇಕಾದರೆ ಉತ್ತಮ ಆಹಾರ ಸರಬರಾಜು ಆಗಬೇಕು. ನೀವು ಕೆಟ್ಟ ಆಹಾರ ಕೊಟ್ಟರೆ ಹಾಲಿನ ಗುಣಮಟ್ಟ ಕಡಿಮೆಯಾಗುತ್ತದೆ. ಆತ್ಮಸಾಕ್ಷಿಗೆ ಮೋಸ ಮಾಡದಂತೆ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಬಳಿಕ ಹೆಸರುಘಟ್ಟದಲ್ಲಿರುವ ನಂದಿನಿ ವಿರ್ಯಾಣು ಕೇಂದ್ರ ಹಾಗೂ ಕೆಎಂಎಫ್ ಹೈಟೆಕ್ ಬುಲ್ ಮದರ್ ಫಾರಂ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಬಳ್ಳಾರಿ ನಿರ್ದೆಶಕ ಮರಳು ಸಿದ್ದಪ್ಪ, ಉಡುಪಿಯ ಕಾಪು ದಿವಾಕರ ಶೆಟ್ಟಿ, ಬಮೂಲ್ ನಿರ್ದೇಶಕ ಜೈಕುಮಾರ್, ಸಿಬ್ಬಂದಿಗಳಾದ ರಾಘವೇಂದ್ರ, ರಾಮಕೃಷ್ಣಪ್ಪ, ಮುನಿರೆಡ್ಡಿ ಮತ್ತಿತರರು ಇದ್ದರು.

Ramesh Babu

Journalist

Recent Posts

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

15 minutes ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

4 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

5 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

11 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

12 hours ago

ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ

ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

1 day ago