Categories: ಕೋಲಾರ

ಕಳುವಾಗಿದ್ದ ನವಜಾತು ಶಿಶು ಮರಳಿ ತಾಯಿ ಮಡಲಿಗೆ: ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶು: 24 ಗಂಟೆಗಳ ಒಳಗೆ ಮರಳಿ ತಾಯಿ ಮಡಿಲಿಗೆ

 

ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶುವನ್ನು 24 ಗಂಟೆಗಳ ಒಳಗೆ ಮರಳಿ ತಾಯಿ ಮಡಿಲಿಗೆ ಸೇರಿಸಿರುವ ಕೋಲಾರ ಜಿಲ್ಲಾ ಪೊಲೀಸರ ಕಾರ್ಯಕ್ಷಮತೆ ಶ್ಲಾಘನೀಯ. ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಪ್ರಕರಣ ಬೇಧಿಸಿದ ಪೊಲೀಸ್ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ.

ನಿನ್ನೆ ಮಧ್ಯಾಹ್ನ ಸುಮಾರು 4 ಗಂಟೆ ಸಮಯದಲ್ಲಿ ತಾಯಿ ಮತ್ತು ಮಗು ಘಟಕದಿಂದ ನಂದಿನಿ ಎಂಬುವರ 6 ದಿನದ ಗಂಡು ನವಜಾತ ಶಿಶು ಕಳವಾಗಿತ್ತು, ಆಸ್ಪತ್ರೆಯ ಸಿಸಿ ಕ್ಯಾಮಾರಗಳ ಪರಿಶೀಲನೆ ಮಾಡಿದ್ದಾಗ, ಮೂವರು ಅಪರಿಚಿತ ಮಹಿಳೆಯರು ಬ್ಯಾಗ್ ನಲ್ಲಿ ಮಗುವನ್ನ ಹೊತ್ತೊಯುತ್ತಿರುವ ದೃಶ್ಯ ಸೆರೆಯಾಗಿತ್ತು, ಈ ದೃಶ್ಯಗಳ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಪ್ರಕರಣ ದಾಖಲಿಸಿಕೊಂಡ ಕೋಲಾರ ನಗರ ಪೊಲೀಸರು ಮಗು ಕಳ್ಳರ ಪತ್ತೆಗಾಗಿ ಬಲೆ ಬಿಸಿದ್ದರು. ಠಾಣಾ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದ ತಂಡ ಮಗುವನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಬೇರಿಕೆ ಎಂಬಲ್ಲಿ ಮಗು ಪತ್ತೆಯಾಗಿದ್ದು, ಮೂವರು ಮಹಿಳೆಯರ ಪೈಕಿ ಒಬ್ಬಳ ಬಂಧನವಾಗಿದೆ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

6 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

2 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

3 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

20 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago