ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ: 862 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ- ಸಿಎಂ ಸಿದ್ದರಾಮಯ್ಯ

ಕೋವಿಡ್- 19 ನಿಯಂತ್ರಣ ಕುರಿತು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಭೆ ನಡೆಸಿ, ಈ ವರೆಗೆ ಕೈಗೊಂಡಿರುವ ರೋಗ ನಿಯಂತ್ರಣ ಕ್ರಮಗಳು, ಪ್ರಸ್ತುತ ಪರಿಸ್ಥಿತಿ ಹಾಗೂ ಅಗತ್ಯ ತಯಾರಿಗಳ ಕುರಿತು ಮಾಹಿತಿ ಪಡೆದು, ಅವಶ್ಯಕ ಸಲಹೆ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು:

• ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.

• ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.

• ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ.

• ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ.

• ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

• ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ವೇಳೆ ಆರೋಗ್ಯ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ‌ ಪರ್ವೇಜ್, ಬಿಬಿಎಂಪಿ ಆಯುಕ್ತರಾದ ಮಹೇಶ್ವರ ರಾವ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

5 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

7 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

14 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago