ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ: 862 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ- ಸಿಎಂ ಸಿದ್ದರಾಮಯ್ಯ

ಕೋವಿಡ್- 19 ನಿಯಂತ್ರಣ ಕುರಿತು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಭೆ ನಡೆಸಿ, ಈ ವರೆಗೆ ಕೈಗೊಂಡಿರುವ ರೋಗ ನಿಯಂತ್ರಣ ಕ್ರಮಗಳು, ಪ್ರಸ್ತುತ ಪರಿಸ್ಥಿತಿ ಹಾಗೂ ಅಗತ್ಯ ತಯಾರಿಗಳ ಕುರಿತು ಮಾಹಿತಿ ಪಡೆದು, ಅವಶ್ಯಕ ಸಲಹೆ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು:

• ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.

• ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.

• ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ.

• ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ.

• ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

• ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ವೇಳೆ ಆರೋಗ್ಯ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ‌ ಪರ್ವೇಜ್, ಬಿಬಿಎಂಪಿ ಆಯುಕ್ತರಾದ ಮಹೇಶ್ವರ ರಾವ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

7 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

17 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

18 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago