ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ: 862 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ- ಸಿಎಂ ಸಿದ್ದರಾಮಯ್ಯ

ಕೋವಿಡ್- 19 ನಿಯಂತ್ರಣ ಕುರಿತು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಭೆ ನಡೆಸಿ, ಈ ವರೆಗೆ ಕೈಗೊಂಡಿರುವ ರೋಗ ನಿಯಂತ್ರಣ ಕ್ರಮಗಳು, ಪ್ರಸ್ತುತ ಪರಿಸ್ಥಿತಿ ಹಾಗೂ ಅಗತ್ಯ ತಯಾರಿಗಳ ಕುರಿತು ಮಾಹಿತಿ ಪಡೆದು, ಅವಶ್ಯಕ ಸಲಹೆ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು:

• ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.

• ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.

• ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ.

• ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ.

• ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

• ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ವೇಳೆ ಆರೋಗ್ಯ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ‌ ಪರ್ವೇಜ್, ಬಿಬಿಎಂಪಿ ಆಯುಕ್ತರಾದ ಮಹೇಶ್ವರ ರಾವ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

4 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

18 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

19 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

22 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

1 day ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

2 days ago