ಕಳ್ಳತನದ ಆರೋಪದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ದೊಡ್ಡಬಳ್ಳಾಪು : ಕಳ್ಳತನದ ಆರೋಪದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ತಂಡ ಯಶಸ್ವಿಯಾಗಿದೆ.

ಸಾಸಲು ಹೋಬಳಿ ಆರೋಡಿ ಗ್ರಾಮದ ನಿವಾಸಿ ನರಸಿಂಹರಾಜು ಬಿನ್ ಲಕ್ಷ್ಮಣ (44) ಬಂಧಿತ ಆರೋಪಿ.

ಕಳೆದ 23 ವರ್ಷಗಳ ಹಿಂದೆ ಕಳ್ಳತನ ₹15000 ಬೆಲೆ ಬಾಳುವ ಸೀಮೆ ಹಸು ಕದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ನಂ 113/2002 ಕಲಂ 379 ಐಪಿಸಿ ಅಡಿಯಲ್ಲಿ ಬೆಂಗಳೂರಿನಲ್ಲಿ ಬಂಧನವಾಗಿದ್ದ ನರಸಿಂಹರಾಜು. ಕೃತ್ಯ ನಡೆದ ವ್ಯಾಪ್ತಿಯ ದೊಡ್ಡಬಳ್ಳಾಪುರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ನಂತರ ಆರೋಪಿ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ.

ತಲೆ ಮರೆಸಿಕೊಂಡಿದ್ದ ಆರೋಪಿ ನರಸಿಂಹರಾಜು ಎಳ್ಳುಪುರ ಗ್ರಾಮದಲ್ಲಿ ವಾಸವಾಗಿದ್ದು, ಖಾಸಗಿ ಕಾರ್ಖಾನೆಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್ ಗೋವಿಂದರಾಜು, ಕಾನ್ಸ್‌ಟೇಬಲ್ ನಾಗೇಶ್ ಕುಮಾರ್ ಅವರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನಂತರ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಬಿಡಲಾಗಿದೆ.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

46 minutes ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

10 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

12 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

13 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago