ದೊಡ್ಡಬಳ್ಳಾಪು : ಕಳ್ಳತನದ ಆರೋಪದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ತಂಡ ಯಶಸ್ವಿಯಾಗಿದೆ.
ಸಾಸಲು ಹೋಬಳಿ ಆರೋಡಿ ಗ್ರಾಮದ ನಿವಾಸಿ ನರಸಿಂಹರಾಜು ಬಿನ್ ಲಕ್ಷ್ಮಣ (44) ಬಂಧಿತ ಆರೋಪಿ.
ಕಳೆದ 23 ವರ್ಷಗಳ ಹಿಂದೆ ಕಳ್ಳತನ ₹15000 ಬೆಲೆ ಬಾಳುವ ಸೀಮೆ ಹಸು ಕದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ನಂ 113/2002 ಕಲಂ 379 ಐಪಿಸಿ ಅಡಿಯಲ್ಲಿ ಬೆಂಗಳೂರಿನಲ್ಲಿ ಬಂಧನವಾಗಿದ್ದ ನರಸಿಂಹರಾಜು. ಕೃತ್ಯ ನಡೆದ ವ್ಯಾಪ್ತಿಯ ದೊಡ್ಡಬಳ್ಳಾಪುರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ನಂತರ ಆರೋಪಿ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ.
ತಲೆ ಮರೆಸಿಕೊಂಡಿದ್ದ ಆರೋಪಿ ನರಸಿಂಹರಾಜು ಎಳ್ಳುಪುರ ಗ್ರಾಮದಲ್ಲಿ ವಾಸವಾಗಿದ್ದು, ಖಾಸಗಿ ಕಾರ್ಖಾನೆಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್ಟೇಬಲ್ ಗೋವಿಂದರಾಜು, ಕಾನ್ಸ್ಟೇಬಲ್ ನಾಗೇಶ್ ಕುಮಾರ್ ಅವರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನಂತರ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಬಿಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…