ದೊಡ್ಡಬಳ್ಳಾಪು : ಕಳ್ಳತನದ ಆರೋಪದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ತಂಡ ಯಶಸ್ವಿಯಾಗಿದೆ.
ಸಾಸಲು ಹೋಬಳಿ ಆರೋಡಿ ಗ್ರಾಮದ ನಿವಾಸಿ ನರಸಿಂಹರಾಜು ಬಿನ್ ಲಕ್ಷ್ಮಣ (44) ಬಂಧಿತ ಆರೋಪಿ.
ಕಳೆದ 23 ವರ್ಷಗಳ ಹಿಂದೆ ಕಳ್ಳತನ ₹15000 ಬೆಲೆ ಬಾಳುವ ಸೀಮೆ ಹಸು ಕದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ನಂ 113/2002 ಕಲಂ 379 ಐಪಿಸಿ ಅಡಿಯಲ್ಲಿ ಬೆಂಗಳೂರಿನಲ್ಲಿ ಬಂಧನವಾಗಿದ್ದ ನರಸಿಂಹರಾಜು. ಕೃತ್ಯ ನಡೆದ ವ್ಯಾಪ್ತಿಯ ದೊಡ್ಡಬಳ್ಳಾಪುರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ನಂತರ ಆರೋಪಿ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ.
ತಲೆ ಮರೆಸಿಕೊಂಡಿದ್ದ ಆರೋಪಿ ನರಸಿಂಹರಾಜು ಎಳ್ಳುಪುರ ಗ್ರಾಮದಲ್ಲಿ ವಾಸವಾಗಿದ್ದು, ಖಾಸಗಿ ಕಾರ್ಖಾನೆಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್ಟೇಬಲ್ ಗೋವಿಂದರಾಜು, ಕಾನ್ಸ್ಟೇಬಲ್ ನಾಗೇಶ್ ಕುಮಾರ್ ಅವರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನಂತರ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಬಿಡಲಾಗಿದೆ.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…