ಕಳ್ಳತನ ಪ್ರಕರಣ ವಜಾ ಆಗಿದೆ ಎಂದು ನಂಬಿದ್ದವರಿಗೆ ಶಾಕ್….! 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳ ಬಂಧನ

ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಸಫಲರಾಗಿದ್ದಾರೆ.

ನಾಗರಾಜು (47) ಮತ್ತು ಶ್ರೀನಿವಾಸಲು (39) ಕಳೆದ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಬ್ಬರೂ 2004ರಲ್ಲಿ ತಾಲ್ಲೂಕಿನ ಕೈಗಾರಿಕಾ ಪ್ರದೇಶ ಬಾಶೆಟ್ಟಿಹಳ್ಳಿ ಬಳಿಯ ಟ್ರಾನ್ಸ್ ಎಲೆಕ್ಟ್ರಿಕ್ ಮೋಟರ್ ಕಂಪನಿಯ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ಕಂಪನಿಗೆ ಬೀಗ ಹಾಕಿದ್ದ ಸಮಯದಲ್ಲಿ ವಾಚ್ ಮನ್ ಗಳಾಗಿದ್ದ ಇವರಿಬ್ಬರು ಕಂಪನಿಯಲ್ಲಿನ ಮೋಟರ್‌ಗಳನ್ನು ಕಳವು ಮಾಡಿದಲ್ಲದೇ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದರು.

ನಾಗರಾಜು (26) ಮತ್ತು ಶ್ರೀನಿವಾಸಲು (19) ಇಬ್ಬರ ಮೇಲೆ ಮೋಟರ್ ಕಳ್ಳತನದ ಆರೋಪದ ಮೇಲೆ ಕ್ರೈಂ ನಂ 95/2004 ರಂತೆ ಪ್ರಕರಣ ದಾಖಲಾಗಿ ಮೂರು ತಿಂಗಳ ಕಾಲ ಜೈಲಿನಲ್ಲಿದ್ದ ಗೆಳೆಯರು ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.

ಆರೋಪಿಗಳ ಪರ ವಾದ ಮಾಡಿದ್ದ ವಕೀಲ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳಿಗೆ ಸಂಪೂರ್ಣ ಮಾಹಿತಿ ನೀಡದೆ ನಿಮ್ಮ ಮೇಲಿನ ಪ್ರಕರಣ ವಜಾ ಆಗಿದೆ ಎಂದು ಹೇಳಿದ್ದರು. ಹೀಗಾಗಿ ನಾವು ಈ ವಿಚಾರವನ್ನು ಮರೆತಿದ್ದೆವು ಎಂದು ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳು ತಿಳಿಸಿದ್ದಾರೆ.

ಇಪ್ಪತ್ತು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರದ ಜೆಎಂಎಫ್‌ಸಿ ನ್ಯಾಯಾಲಯ ಎಲ್‌ಆರ್‌ಪಿ (ತಲೆ ಮರೆಸಿಕೊಂಡ ಆರೋಪಿಗಳು) ಗಳು ಎಂದು ನಿರ್ಧಾರ ಮಾಡಿತ್ತು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ತನಿಖೆಗೆ ಇಳಿದ ತಂಡ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ಆರೋಪಿ ನಾಗರಾಜು

ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ, ಪುಟ್ಟಪರ್ತಿ ಎರಡು ಪೊಲೀಸ್ ಠಾಣೆಗಳಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ನಾಗರಾಜು, ನಂತರ ಗಂಡ ಹೆಂಡತಿ ನಡುವೆ ಜಗಳವಾಗಿ ಕೆಲಸ ಬಿಟ್ಟು, ಧರ್ಮಾವರಂ ಜಿಲ್ಲೆ ಸಿದ್ದರಾಮಪುರಂ ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ.

ಉಸ್ಮಾನಿಯಾ ವಿವಿಯಲ್ಲಿ ಎಂಬಿಎ ಪದವೀಧರ ಆರೋಪಿ ಶ್ರೀನಿವಾಸಲು

ಬಂಧನವಾಗಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ ಬಂದ ಮತ್ತೊಬ್ಬ ಆರೋಪಿ ಶ್ರೀನಿವಾಸಲು ಆಂಧ್ರಪ್ರದೇಶದ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಜೊತೆಗೆ ಮಾರ್ಕೆಟಿಂಗ್ ಗ್ರಾಜ್ಯುಯೆಷನ್ ಪಡೆದು ಟಾಟಾ ಕಂಪನಿಯಲ್ಲಿ ಮಾರ್ಕೆಟಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ.

ಒಮ್ಮೆ ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಕಲಿತಿದ್ದ ಇಬ್ಬರೂ ಆರೋಪಿಗಳು ಮತ್ತೆ ಕೆಟ್ಟದಾರಿ ಹಿಡಿಯದೆ ಓದಿ ವಿದ್ಯಾಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ನಡೆಸುತ್ತಿದ್ದರು. ಆದರೆ, ಮಾಡಿದ ಪಾಪ ಈಗಲೇ ಅನುಭವಿಸಬೇಕು ಎಂಬ ನಾಣ್ಣುಡಿಯಂತೆ ಮಾಡಿದ ತಪ್ಪಿಗೆ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡ ಆರೋಪಿಗಳಾದ ನಾಗರಾಜು, ಶ್ರೀನಿವಾಸಲುರನ್ನ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿರುವ ದೃಶ್ಯ ಕಂಡುಬಂತು.

ಈ ವೇಳೆ ಮುಖ್ಯಪೇದೆ ಗೋವಿಂದರಾಜು, ಪೇದೆ ನಾಗೇಶ್ ಇದ್ದರು.

Ramesh Babu

Journalist

Recent Posts

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

8 hours ago

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

12 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳಲ್ಲಿ ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

13 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

20 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

21 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

22 hours ago