ಕಳ್ಳತನ ಪ್ರಕರಣ ವಜಾ ಆಗಿದೆ ಎಂದು ನಂಬಿದ್ದವರಿಗೆ ಶಾಕ್….! 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳ ಬಂಧನ

ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಸಫಲರಾಗಿದ್ದಾರೆ.

ನಾಗರಾಜು (47) ಮತ್ತು ಶ್ರೀನಿವಾಸಲು (39) ಕಳೆದ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಬ್ಬರೂ 2004ರಲ್ಲಿ ತಾಲ್ಲೂಕಿನ ಕೈಗಾರಿಕಾ ಪ್ರದೇಶ ಬಾಶೆಟ್ಟಿಹಳ್ಳಿ ಬಳಿಯ ಟ್ರಾನ್ಸ್ ಎಲೆಕ್ಟ್ರಿಕ್ ಮೋಟರ್ ಕಂಪನಿಯ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ಕಂಪನಿಗೆ ಬೀಗ ಹಾಕಿದ್ದ ಸಮಯದಲ್ಲಿ ವಾಚ್ ಮನ್ ಗಳಾಗಿದ್ದ ಇವರಿಬ್ಬರು ಕಂಪನಿಯಲ್ಲಿನ ಮೋಟರ್‌ಗಳನ್ನು ಕಳವು ಮಾಡಿದಲ್ಲದೇ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದರು.

ನಾಗರಾಜು (26) ಮತ್ತು ಶ್ರೀನಿವಾಸಲು (19) ಇಬ್ಬರ ಮೇಲೆ ಮೋಟರ್ ಕಳ್ಳತನದ ಆರೋಪದ ಮೇಲೆ ಕ್ರೈಂ ನಂ 95/2004 ರಂತೆ ಪ್ರಕರಣ ದಾಖಲಾಗಿ ಮೂರು ತಿಂಗಳ ಕಾಲ ಜೈಲಿನಲ್ಲಿದ್ದ ಗೆಳೆಯರು ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.

ಆರೋಪಿಗಳ ಪರ ವಾದ ಮಾಡಿದ್ದ ವಕೀಲ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳಿಗೆ ಸಂಪೂರ್ಣ ಮಾಹಿತಿ ನೀಡದೆ ನಿಮ್ಮ ಮೇಲಿನ ಪ್ರಕರಣ ವಜಾ ಆಗಿದೆ ಎಂದು ಹೇಳಿದ್ದರು. ಹೀಗಾಗಿ ನಾವು ಈ ವಿಚಾರವನ್ನು ಮರೆತಿದ್ದೆವು ಎಂದು ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳು ತಿಳಿಸಿದ್ದಾರೆ.

ಇಪ್ಪತ್ತು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರದ ಜೆಎಂಎಫ್‌ಸಿ ನ್ಯಾಯಾಲಯ ಎಲ್‌ಆರ್‌ಪಿ (ತಲೆ ಮರೆಸಿಕೊಂಡ ಆರೋಪಿಗಳು) ಗಳು ಎಂದು ನಿರ್ಧಾರ ಮಾಡಿತ್ತು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ತನಿಖೆಗೆ ಇಳಿದ ತಂಡ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ಆರೋಪಿ ನಾಗರಾಜು

ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ, ಪುಟ್ಟಪರ್ತಿ ಎರಡು ಪೊಲೀಸ್ ಠಾಣೆಗಳಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ನಾಗರಾಜು, ನಂತರ ಗಂಡ ಹೆಂಡತಿ ನಡುವೆ ಜಗಳವಾಗಿ ಕೆಲಸ ಬಿಟ್ಟು, ಧರ್ಮಾವರಂ ಜಿಲ್ಲೆ ಸಿದ್ದರಾಮಪುರಂ ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ.

ಉಸ್ಮಾನಿಯಾ ವಿವಿಯಲ್ಲಿ ಎಂಬಿಎ ಪದವೀಧರ ಆರೋಪಿ ಶ್ರೀನಿವಾಸಲು

ಬಂಧನವಾಗಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ ಬಂದ ಮತ್ತೊಬ್ಬ ಆರೋಪಿ ಶ್ರೀನಿವಾಸಲು ಆಂಧ್ರಪ್ರದೇಶದ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಜೊತೆಗೆ ಮಾರ್ಕೆಟಿಂಗ್ ಗ್ರಾಜ್ಯುಯೆಷನ್ ಪಡೆದು ಟಾಟಾ ಕಂಪನಿಯಲ್ಲಿ ಮಾರ್ಕೆಟಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ.

ಒಮ್ಮೆ ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಕಲಿತಿದ್ದ ಇಬ್ಬರೂ ಆರೋಪಿಗಳು ಮತ್ತೆ ಕೆಟ್ಟದಾರಿ ಹಿಡಿಯದೆ ಓದಿ ವಿದ್ಯಾಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ನಡೆಸುತ್ತಿದ್ದರು. ಆದರೆ, ಮಾಡಿದ ಪಾಪ ಈಗಲೇ ಅನುಭವಿಸಬೇಕು ಎಂಬ ನಾಣ್ಣುಡಿಯಂತೆ ಮಾಡಿದ ತಪ್ಪಿಗೆ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡ ಆರೋಪಿಗಳಾದ ನಾಗರಾಜು, ಶ್ರೀನಿವಾಸಲುರನ್ನ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿರುವ ದೃಶ್ಯ ಕಂಡುಬಂತು.

ಈ ವೇಳೆ ಮುಖ್ಯಪೇದೆ ಗೋವಿಂದರಾಜು, ಪೇದೆ ನಾಗೇಶ್ ಇದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

10 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

15 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

15 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

23 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago