ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಸಫಲರಾಗಿದ್ದಾರೆ.
ನಾಗರಾಜು (47) ಮತ್ತು ಶ್ರೀನಿವಾಸಲು (39) ಕಳೆದ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಬ್ಬರೂ 2004ರಲ್ಲಿ ತಾಲ್ಲೂಕಿನ ಕೈಗಾರಿಕಾ ಪ್ರದೇಶ ಬಾಶೆಟ್ಟಿಹಳ್ಳಿ ಬಳಿಯ ಟ್ರಾನ್ಸ್ ಎಲೆಕ್ಟ್ರಿಕ್ ಮೋಟರ್ ಕಂಪನಿಯ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ಕಂಪನಿಗೆ ಬೀಗ ಹಾಕಿದ್ದ ಸಮಯದಲ್ಲಿ ವಾಚ್ ಮನ್ ಗಳಾಗಿದ್ದ ಇವರಿಬ್ಬರು ಕಂಪನಿಯಲ್ಲಿನ ಮೋಟರ್ಗಳನ್ನು ಕಳವು ಮಾಡಿದಲ್ಲದೇ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದರು.
ನಾಗರಾಜು (26) ಮತ್ತು ಶ್ರೀನಿವಾಸಲು (19) ಇಬ್ಬರ ಮೇಲೆ ಮೋಟರ್ ಕಳ್ಳತನದ ಆರೋಪದ ಮೇಲೆ ಕ್ರೈಂ ನಂ 95/2004 ರಂತೆ ಪ್ರಕರಣ ದಾಖಲಾಗಿ ಮೂರು ತಿಂಗಳ ಕಾಲ ಜೈಲಿನಲ್ಲಿದ್ದ ಗೆಳೆಯರು ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.
ಆರೋಪಿಗಳ ಪರ ವಾದ ಮಾಡಿದ್ದ ವಕೀಲ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳಿಗೆ ಸಂಪೂರ್ಣ ಮಾಹಿತಿ ನೀಡದೆ ನಿಮ್ಮ ಮೇಲಿನ ಪ್ರಕರಣ ವಜಾ ಆಗಿದೆ ಎಂದು ಹೇಳಿದ್ದರು. ಹೀಗಾಗಿ ನಾವು ಈ ವಿಚಾರವನ್ನು ಮರೆತಿದ್ದೆವು ಎಂದು ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳು ತಿಳಿಸಿದ್ದಾರೆ.
ಇಪ್ಪತ್ತು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರದ ಜೆಎಂಎಫ್ಸಿ ನ್ಯಾಯಾಲಯ ಎಲ್ಆರ್ಪಿ (ತಲೆ ಮರೆಸಿಕೊಂಡ ಆರೋಪಿಗಳು) ಗಳು ಎಂದು ನಿರ್ಧಾರ ಮಾಡಿತ್ತು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ತನಿಖೆಗೆ ಇಳಿದ ತಂಡ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ಆರೋಪಿ ನಾಗರಾಜು
ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ, ಪುಟ್ಟಪರ್ತಿ ಎರಡು ಪೊಲೀಸ್ ಠಾಣೆಗಳಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ನಾಗರಾಜು, ನಂತರ ಗಂಡ ಹೆಂಡತಿ ನಡುವೆ ಜಗಳವಾಗಿ ಕೆಲಸ ಬಿಟ್ಟು, ಧರ್ಮಾವರಂ ಜಿಲ್ಲೆ ಸಿದ್ದರಾಮಪುರಂ ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ.
ಉಸ್ಮಾನಿಯಾ ವಿವಿಯಲ್ಲಿ ಎಂಬಿಎ ಪದವೀಧರ ಆರೋಪಿ ಶ್ರೀನಿವಾಸಲು
ಬಂಧನವಾಗಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ ಬಂದ ಮತ್ತೊಬ್ಬ ಆರೋಪಿ ಶ್ರೀನಿವಾಸಲು ಆಂಧ್ರಪ್ರದೇಶದ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಜೊತೆಗೆ ಮಾರ್ಕೆಟಿಂಗ್ ಗ್ರಾಜ್ಯುಯೆಷನ್ ಪಡೆದು ಟಾಟಾ ಕಂಪನಿಯಲ್ಲಿ ಮಾರ್ಕೆಟಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ.
ಒಮ್ಮೆ ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಕಲಿತಿದ್ದ ಇಬ್ಬರೂ ಆರೋಪಿಗಳು ಮತ್ತೆ ಕೆಟ್ಟದಾರಿ ಹಿಡಿಯದೆ ಓದಿ ವಿದ್ಯಾಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ನಡೆಸುತ್ತಿದ್ದರು. ಆದರೆ, ಮಾಡಿದ ಪಾಪ ಈಗಲೇ ಅನುಭವಿಸಬೇಕು ಎಂಬ ನಾಣ್ಣುಡಿಯಂತೆ ಮಾಡಿದ ತಪ್ಪಿಗೆ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
ಈ ವೇಳೆ ಮುಖ್ಯಪೇದೆ ಗೋವಿಂದರಾಜು, ಪೇದೆ ನಾಗೇಶ್ ಇದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…