ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಸಫಲರಾಗಿದ್ದಾರೆ.
ನಾಗರಾಜು (47) ಮತ್ತು ಶ್ರೀನಿವಾಸಲು (39) ಕಳೆದ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಬ್ಬರೂ 2004ರಲ್ಲಿ ತಾಲ್ಲೂಕಿನ ಕೈಗಾರಿಕಾ ಪ್ರದೇಶ ಬಾಶೆಟ್ಟಿಹಳ್ಳಿ ಬಳಿಯ ಟ್ರಾನ್ಸ್ ಎಲೆಕ್ಟ್ರಿಕ್ ಮೋಟರ್ ಕಂಪನಿಯ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ಕಂಪನಿಗೆ ಬೀಗ ಹಾಕಿದ್ದ ಸಮಯದಲ್ಲಿ ವಾಚ್ ಮನ್ ಗಳಾಗಿದ್ದ ಇವರಿಬ್ಬರು ಕಂಪನಿಯಲ್ಲಿನ ಮೋಟರ್ಗಳನ್ನು ಕಳವು ಮಾಡಿದಲ್ಲದೇ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದರು.
ನಾಗರಾಜು (26) ಮತ್ತು ಶ್ರೀನಿವಾಸಲು (19) ಇಬ್ಬರ ಮೇಲೆ ಮೋಟರ್ ಕಳ್ಳತನದ ಆರೋಪದ ಮೇಲೆ ಕ್ರೈಂ ನಂ 95/2004 ರಂತೆ ಪ್ರಕರಣ ದಾಖಲಾಗಿ ಮೂರು ತಿಂಗಳ ಕಾಲ ಜೈಲಿನಲ್ಲಿದ್ದ ಗೆಳೆಯರು ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.
ಆರೋಪಿಗಳ ಪರ ವಾದ ಮಾಡಿದ್ದ ವಕೀಲ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳಿಗೆ ಸಂಪೂರ್ಣ ಮಾಹಿತಿ ನೀಡದೆ ನಿಮ್ಮ ಮೇಲಿನ ಪ್ರಕರಣ ವಜಾ ಆಗಿದೆ ಎಂದು ಹೇಳಿದ್ದರು. ಹೀಗಾಗಿ ನಾವು ಈ ವಿಚಾರವನ್ನು ಮರೆತಿದ್ದೆವು ಎಂದು ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳು ತಿಳಿಸಿದ್ದಾರೆ.
ಇಪ್ಪತ್ತು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರದ ಜೆಎಂಎಫ್ಸಿ ನ್ಯಾಯಾಲಯ ಎಲ್ಆರ್ಪಿ (ತಲೆ ಮರೆಸಿಕೊಂಡ ಆರೋಪಿಗಳು) ಗಳು ಎಂದು ನಿರ್ಧಾರ ಮಾಡಿತ್ತು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ತನಿಖೆಗೆ ಇಳಿದ ತಂಡ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ಆರೋಪಿ ನಾಗರಾಜು
ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ, ಪುಟ್ಟಪರ್ತಿ ಎರಡು ಪೊಲೀಸ್ ಠಾಣೆಗಳಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ನಾಗರಾಜು, ನಂತರ ಗಂಡ ಹೆಂಡತಿ ನಡುವೆ ಜಗಳವಾಗಿ ಕೆಲಸ ಬಿಟ್ಟು, ಧರ್ಮಾವರಂ ಜಿಲ್ಲೆ ಸಿದ್ದರಾಮಪುರಂ ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ.
ಉಸ್ಮಾನಿಯಾ ವಿವಿಯಲ್ಲಿ ಎಂಬಿಎ ಪದವೀಧರ ಆರೋಪಿ ಶ್ರೀನಿವಾಸಲು
ಬಂಧನವಾಗಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ ಬಂದ ಮತ್ತೊಬ್ಬ ಆರೋಪಿ ಶ್ರೀನಿವಾಸಲು ಆಂಧ್ರಪ್ರದೇಶದ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಜೊತೆಗೆ ಮಾರ್ಕೆಟಿಂಗ್ ಗ್ರಾಜ್ಯುಯೆಷನ್ ಪಡೆದು ಟಾಟಾ ಕಂಪನಿಯಲ್ಲಿ ಮಾರ್ಕೆಟಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ.
ಒಮ್ಮೆ ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಕಲಿತಿದ್ದ ಇಬ್ಬರೂ ಆರೋಪಿಗಳು ಮತ್ತೆ ಕೆಟ್ಟದಾರಿ ಹಿಡಿಯದೆ ಓದಿ ವಿದ್ಯಾಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ನಡೆಸುತ್ತಿದ್ದರು. ಆದರೆ, ಮಾಡಿದ ಪಾಪ ಈಗಲೇ ಅನುಭವಿಸಬೇಕು ಎಂಬ ನಾಣ್ಣುಡಿಯಂತೆ ಮಾಡಿದ ತಪ್ಪಿಗೆ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
ಈ ವೇಳೆ ಮುಖ್ಯಪೇದೆ ಗೋವಿಂದರಾಜು, ಪೇದೆ ನಾಗೇಶ್ ಇದ್ದರು.
ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…
ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…
ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…
ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…