ಕಳ್ಳತನ ಪ್ರಕರಣ ವಜಾ ಆಗಿದೆ ಎಂದು ನಂಬಿದ್ದವರಿಗೆ ಶಾಕ್….! 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳ ಬಂಧನ

ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಸಫಲರಾಗಿದ್ದಾರೆ.

ನಾಗರಾಜು (47) ಮತ್ತು ಶ್ರೀನಿವಾಸಲು (39) ಕಳೆದ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಬ್ಬರೂ 2004ರಲ್ಲಿ ತಾಲ್ಲೂಕಿನ ಕೈಗಾರಿಕಾ ಪ್ರದೇಶ ಬಾಶೆಟ್ಟಿಹಳ್ಳಿ ಬಳಿಯ ಟ್ರಾನ್ಸ್ ಎಲೆಕ್ಟ್ರಿಕ್ ಮೋಟರ್ ಕಂಪನಿಯ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ಕಂಪನಿಗೆ ಬೀಗ ಹಾಕಿದ್ದ ಸಮಯದಲ್ಲಿ ವಾಚ್ ಮನ್ ಗಳಾಗಿದ್ದ ಇವರಿಬ್ಬರು ಕಂಪನಿಯಲ್ಲಿನ ಮೋಟರ್‌ಗಳನ್ನು ಕಳವು ಮಾಡಿದಲ್ಲದೇ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದರು.

ನಾಗರಾಜು (26) ಮತ್ತು ಶ್ರೀನಿವಾಸಲು (19) ಇಬ್ಬರ ಮೇಲೆ ಮೋಟರ್ ಕಳ್ಳತನದ ಆರೋಪದ ಮೇಲೆ ಕ್ರೈಂ ನಂ 95/2004 ರಂತೆ ಪ್ರಕರಣ ದಾಖಲಾಗಿ ಮೂರು ತಿಂಗಳ ಕಾಲ ಜೈಲಿನಲ್ಲಿದ್ದ ಗೆಳೆಯರು ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.

ಆರೋಪಿಗಳ ಪರ ವಾದ ಮಾಡಿದ್ದ ವಕೀಲ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳಿಗೆ ಸಂಪೂರ್ಣ ಮಾಹಿತಿ ನೀಡದೆ ನಿಮ್ಮ ಮೇಲಿನ ಪ್ರಕರಣ ವಜಾ ಆಗಿದೆ ಎಂದು ಹೇಳಿದ್ದರು. ಹೀಗಾಗಿ ನಾವು ಈ ವಿಚಾರವನ್ನು ಮರೆತಿದ್ದೆವು ಎಂದು ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳು ತಿಳಿಸಿದ್ದಾರೆ.

ಇಪ್ಪತ್ತು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರದ ಜೆಎಂಎಫ್‌ಸಿ ನ್ಯಾಯಾಲಯ ಎಲ್‌ಆರ್‌ಪಿ (ತಲೆ ಮರೆಸಿಕೊಂಡ ಆರೋಪಿಗಳು) ಗಳು ಎಂದು ನಿರ್ಧಾರ ಮಾಡಿತ್ತು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ತನಿಖೆಗೆ ಇಳಿದ ತಂಡ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ಆರೋಪಿ ನಾಗರಾಜು

ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ, ಪುಟ್ಟಪರ್ತಿ ಎರಡು ಪೊಲೀಸ್ ಠಾಣೆಗಳಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ನಾಗರಾಜು, ನಂತರ ಗಂಡ ಹೆಂಡತಿ ನಡುವೆ ಜಗಳವಾಗಿ ಕೆಲಸ ಬಿಟ್ಟು, ಧರ್ಮಾವರಂ ಜಿಲ್ಲೆ ಸಿದ್ದರಾಮಪುರಂ ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ.

ಉಸ್ಮಾನಿಯಾ ವಿವಿಯಲ್ಲಿ ಎಂಬಿಎ ಪದವೀಧರ ಆರೋಪಿ ಶ್ರೀನಿವಾಸಲು

ಬಂಧನವಾಗಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ ಬಂದ ಮತ್ತೊಬ್ಬ ಆರೋಪಿ ಶ್ರೀನಿವಾಸಲು ಆಂಧ್ರಪ್ರದೇಶದ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಜೊತೆಗೆ ಮಾರ್ಕೆಟಿಂಗ್ ಗ್ರಾಜ್ಯುಯೆಷನ್ ಪಡೆದು ಟಾಟಾ ಕಂಪನಿಯಲ್ಲಿ ಮಾರ್ಕೆಟಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ.

ಒಮ್ಮೆ ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಕಲಿತಿದ್ದ ಇಬ್ಬರೂ ಆರೋಪಿಗಳು ಮತ್ತೆ ಕೆಟ್ಟದಾರಿ ಹಿಡಿಯದೆ ಓದಿ ವಿದ್ಯಾಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ನಡೆಸುತ್ತಿದ್ದರು. ಆದರೆ, ಮಾಡಿದ ಪಾಪ ಈಗಲೇ ಅನುಭವಿಸಬೇಕು ಎಂಬ ನಾಣ್ಣುಡಿಯಂತೆ ಮಾಡಿದ ತಪ್ಪಿಗೆ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡ ಆರೋಪಿಗಳಾದ ನಾಗರಾಜು, ಶ್ರೀನಿವಾಸಲುರನ್ನ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿರುವ ದೃಶ್ಯ ಕಂಡುಬಂತು.

ಈ ವೇಳೆ ಮುಖ್ಯಪೇದೆ ಗೋವಿಂದರಾಜು, ಪೇದೆ ನಾಗೇಶ್ ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

22 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago