ಕಳ್ಳತನ ಪ್ರಕರಣ ವಜಾ ಆಗಿದೆ ಎಂದು ನಂಬಿದ್ದವರಿಗೆ ಶಾಕ್….! 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳ ಬಂಧನ

ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಸಫಲರಾಗಿದ್ದಾರೆ.

ನಾಗರಾಜು (47) ಮತ್ತು ಶ್ರೀನಿವಾಸಲು (39) ಕಳೆದ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಬ್ಬರೂ 2004ರಲ್ಲಿ ತಾಲ್ಲೂಕಿನ ಕೈಗಾರಿಕಾ ಪ್ರದೇಶ ಬಾಶೆಟ್ಟಿಹಳ್ಳಿ ಬಳಿಯ ಟ್ರಾನ್ಸ್ ಎಲೆಕ್ಟ್ರಿಕ್ ಮೋಟರ್ ಕಂಪನಿಯ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ಕಂಪನಿಗೆ ಬೀಗ ಹಾಕಿದ್ದ ಸಮಯದಲ್ಲಿ ವಾಚ್ ಮನ್ ಗಳಾಗಿದ್ದ ಇವರಿಬ್ಬರು ಕಂಪನಿಯಲ್ಲಿನ ಮೋಟರ್‌ಗಳನ್ನು ಕಳವು ಮಾಡಿದಲ್ಲದೇ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದರು.

ನಾಗರಾಜು (26) ಮತ್ತು ಶ್ರೀನಿವಾಸಲು (19) ಇಬ್ಬರ ಮೇಲೆ ಮೋಟರ್ ಕಳ್ಳತನದ ಆರೋಪದ ಮೇಲೆ ಕ್ರೈಂ ನಂ 95/2004 ರಂತೆ ಪ್ರಕರಣ ದಾಖಲಾಗಿ ಮೂರು ತಿಂಗಳ ಕಾಲ ಜೈಲಿನಲ್ಲಿದ್ದ ಗೆಳೆಯರು ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.

ಆರೋಪಿಗಳ ಪರ ವಾದ ಮಾಡಿದ್ದ ವಕೀಲ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳಿಗೆ ಸಂಪೂರ್ಣ ಮಾಹಿತಿ ನೀಡದೆ ನಿಮ್ಮ ಮೇಲಿನ ಪ್ರಕರಣ ವಜಾ ಆಗಿದೆ ಎಂದು ಹೇಳಿದ್ದರು. ಹೀಗಾಗಿ ನಾವು ಈ ವಿಚಾರವನ್ನು ಮರೆತಿದ್ದೆವು ಎಂದು ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳು ತಿಳಿಸಿದ್ದಾರೆ.

ಇಪ್ಪತ್ತು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರದ ಜೆಎಂಎಫ್‌ಸಿ ನ್ಯಾಯಾಲಯ ಎಲ್‌ಆರ್‌ಪಿ (ತಲೆ ಮರೆಸಿಕೊಂಡ ಆರೋಪಿಗಳು) ಗಳು ಎಂದು ನಿರ್ಧಾರ ಮಾಡಿತ್ತು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ತನಿಖೆಗೆ ಇಳಿದ ತಂಡ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ಆರೋಪಿ ನಾಗರಾಜು

ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ, ಪುಟ್ಟಪರ್ತಿ ಎರಡು ಪೊಲೀಸ್ ಠಾಣೆಗಳಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ನಾಗರಾಜು, ನಂತರ ಗಂಡ ಹೆಂಡತಿ ನಡುವೆ ಜಗಳವಾಗಿ ಕೆಲಸ ಬಿಟ್ಟು, ಧರ್ಮಾವರಂ ಜಿಲ್ಲೆ ಸಿದ್ದರಾಮಪುರಂ ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ.

ಉಸ್ಮಾನಿಯಾ ವಿವಿಯಲ್ಲಿ ಎಂಬಿಎ ಪದವೀಧರ ಆರೋಪಿ ಶ್ರೀನಿವಾಸಲು

ಬಂಧನವಾಗಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ ಬಂದ ಮತ್ತೊಬ್ಬ ಆರೋಪಿ ಶ್ರೀನಿವಾಸಲು ಆಂಧ್ರಪ್ರದೇಶದ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಜೊತೆಗೆ ಮಾರ್ಕೆಟಿಂಗ್ ಗ್ರಾಜ್ಯುಯೆಷನ್ ಪಡೆದು ಟಾಟಾ ಕಂಪನಿಯಲ್ಲಿ ಮಾರ್ಕೆಟಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ.

ಒಮ್ಮೆ ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಕಲಿತಿದ್ದ ಇಬ್ಬರೂ ಆರೋಪಿಗಳು ಮತ್ತೆ ಕೆಟ್ಟದಾರಿ ಹಿಡಿಯದೆ ಓದಿ ವಿದ್ಯಾಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ನಡೆಸುತ್ತಿದ್ದರು. ಆದರೆ, ಮಾಡಿದ ಪಾಪ ಈಗಲೇ ಅನುಭವಿಸಬೇಕು ಎಂಬ ನಾಣ್ಣುಡಿಯಂತೆ ಮಾಡಿದ ತಪ್ಪಿಗೆ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡ ಆರೋಪಿಗಳಾದ ನಾಗರಾಜು, ಶ್ರೀನಿವಾಸಲುರನ್ನ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿರುವ ದೃಶ್ಯ ಕಂಡುಬಂತು.

ಈ ವೇಳೆ ಮುಖ್ಯಪೇದೆ ಗೋವಿಂದರಾಜು, ಪೇದೆ ನಾಗೇಶ್ ಇದ್ದರು.

Ramesh Babu

Journalist

Recent Posts

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

15 hours ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

15 hours ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

16 hours ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

20 hours ago

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

1 day ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

2 days ago