ಕಳ್ಳತನ ಪ್ರಕರಣ ವಜಾ ಆಗಿದೆ ಎಂದು ನಂಬಿದ್ದವರಿಗೆ ಶಾಕ್….! 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳ ಬಂಧನ

ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಸಫಲರಾಗಿದ್ದಾರೆ.

ನಾಗರಾಜು (47) ಮತ್ತು ಶ್ರೀನಿವಾಸಲು (39) ಕಳೆದ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಬ್ಬರೂ 2004ರಲ್ಲಿ ತಾಲ್ಲೂಕಿನ ಕೈಗಾರಿಕಾ ಪ್ರದೇಶ ಬಾಶೆಟ್ಟಿಹಳ್ಳಿ ಬಳಿಯ ಟ್ರಾನ್ಸ್ ಎಲೆಕ್ಟ್ರಿಕ್ ಮೋಟರ್ ಕಂಪನಿಯ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ಕಂಪನಿಗೆ ಬೀಗ ಹಾಕಿದ್ದ ಸಮಯದಲ್ಲಿ ವಾಚ್ ಮನ್ ಗಳಾಗಿದ್ದ ಇವರಿಬ್ಬರು ಕಂಪನಿಯಲ್ಲಿನ ಮೋಟರ್‌ಗಳನ್ನು ಕಳವು ಮಾಡಿದಲ್ಲದೇ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದರು.

ನಾಗರಾಜು (26) ಮತ್ತು ಶ್ರೀನಿವಾಸಲು (19) ಇಬ್ಬರ ಮೇಲೆ ಮೋಟರ್ ಕಳ್ಳತನದ ಆರೋಪದ ಮೇಲೆ ಕ್ರೈಂ ನಂ 95/2004 ರಂತೆ ಪ್ರಕರಣ ದಾಖಲಾಗಿ ಮೂರು ತಿಂಗಳ ಕಾಲ ಜೈಲಿನಲ್ಲಿದ್ದ ಗೆಳೆಯರು ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.

ಆರೋಪಿಗಳ ಪರ ವಾದ ಮಾಡಿದ್ದ ವಕೀಲ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳಿಗೆ ಸಂಪೂರ್ಣ ಮಾಹಿತಿ ನೀಡದೆ ನಿಮ್ಮ ಮೇಲಿನ ಪ್ರಕರಣ ವಜಾ ಆಗಿದೆ ಎಂದು ಹೇಳಿದ್ದರು. ಹೀಗಾಗಿ ನಾವು ಈ ವಿಚಾರವನ್ನು ಮರೆತಿದ್ದೆವು ಎಂದು ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳು ತಿಳಿಸಿದ್ದಾರೆ.

ಇಪ್ಪತ್ತು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರದ ಜೆಎಂಎಫ್‌ಸಿ ನ್ಯಾಯಾಲಯ ಎಲ್‌ಆರ್‌ಪಿ (ತಲೆ ಮರೆಸಿಕೊಂಡ ಆರೋಪಿಗಳು) ಗಳು ಎಂದು ನಿರ್ಧಾರ ಮಾಡಿತ್ತು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ತನಿಖೆಗೆ ಇಳಿದ ತಂಡ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ಆರೋಪಿ ನಾಗರಾಜು

ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ, ಪುಟ್ಟಪರ್ತಿ ಎರಡು ಪೊಲೀಸ್ ಠಾಣೆಗಳಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ನಾಗರಾಜು, ನಂತರ ಗಂಡ ಹೆಂಡತಿ ನಡುವೆ ಜಗಳವಾಗಿ ಕೆಲಸ ಬಿಟ್ಟು, ಧರ್ಮಾವರಂ ಜಿಲ್ಲೆ ಸಿದ್ದರಾಮಪುರಂ ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ.

ಉಸ್ಮಾನಿಯಾ ವಿವಿಯಲ್ಲಿ ಎಂಬಿಎ ಪದವೀಧರ ಆರೋಪಿ ಶ್ರೀನಿವಾಸಲು

ಬಂಧನವಾಗಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ ಬಂದ ಮತ್ತೊಬ್ಬ ಆರೋಪಿ ಶ್ರೀನಿವಾಸಲು ಆಂಧ್ರಪ್ರದೇಶದ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಜೊತೆಗೆ ಮಾರ್ಕೆಟಿಂಗ್ ಗ್ರಾಜ್ಯುಯೆಷನ್ ಪಡೆದು ಟಾಟಾ ಕಂಪನಿಯಲ್ಲಿ ಮಾರ್ಕೆಟಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ.

ಒಮ್ಮೆ ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಕಲಿತಿದ್ದ ಇಬ್ಬರೂ ಆರೋಪಿಗಳು ಮತ್ತೆ ಕೆಟ್ಟದಾರಿ ಹಿಡಿಯದೆ ಓದಿ ವಿದ್ಯಾಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ನಡೆಸುತ್ತಿದ್ದರು. ಆದರೆ, ಮಾಡಿದ ಪಾಪ ಈಗಲೇ ಅನುಭವಿಸಬೇಕು ಎಂಬ ನಾಣ್ಣುಡಿಯಂತೆ ಮಾಡಿದ ತಪ್ಪಿಗೆ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡ ಆರೋಪಿಗಳಾದ ನಾಗರಾಜು, ಶ್ರೀನಿವಾಸಲುರನ್ನ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿರುವ ದೃಶ್ಯ ಕಂಡುಬಂತು.

ಈ ವೇಳೆ ಮುಖ್ಯಪೇದೆ ಗೋವಿಂದರಾಜು, ಪೇದೆ ನಾಗೇಶ್ ಇದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

1 hour ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

6 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago