ಕಳ್ಳನೊಂದಿಗೆ ಸೇರಿ ತಾನೂ ಕಳ್ಳನಾಗಿದ್ದ ಹೆಡ್ ಕಾನ್ಸ್ಟೇಬಲ್ ಬಂಧನ: ರೈಲಿನಲ್ಲಿ ಪ್ರಯಾಣಿಕರು ನಿದ್ರೆಗೆ ಜಾರಿದಾಗ ‘ಕಳ್ಳ-ಪೊಲೀಸ್ ಆಟ’ ಶುರು

ಚಿಕ್ಕಬಳ್ಳಾಪುರ ಹೊರ ಪೊಲೀಸ್ ಉಪಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ಕಳ್ಳನೊಂದಿಗೆ ಸೇರಿ ತಾನೂ ಕಳ್ಳತನದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸಿದ್ದರಾಮರೆಡ್ಡಿ (38), ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಉಪಠಾಣೆಯ ಮುಖ್ಯಪೇದೆ ಬಂಧಿತ ಆರೋಪಿ. ಆಗಸ್ಟ್ ನಲ್ಲಿ ತ್ರಿಶೂರ್ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬರ್ತಿದ್ದ ಪ್ರಯಾಣಿಕರ ಬ್ಯಾಗ್ ಬೈಯ್ಯಪ್ಪನಹಳ್ಳಿ ಸ್ಟೇಷನ್ ಬಳಿ ಕಳುವಾಗಿತ್ತು, ಆ ಬ್ಯಾಗ್ ನಲ್ಲಿ ಸುಮಾರು 10ಲಕ್ಷ ರೂ. ಮೌಲ್ಯದ ಚಿನ್ನಾಭರಣವಿತ್ತು. ದೂರಿನ ಮೇರೆಗೆ ಈ ಸಂಬಂಧ  ಇತ್ತಿಚೆಗೆ ಕೆ.ಆರ್.ಪುರಂ ರೈಲ್ವೆ ಸ್ಟೇಷನ್ ಬಳಿ ಸಾಬಣ್ಣ ಎಂಬುವನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಹೆಡ್ ಕಾನ್ಸ್ಟೇಬಲ್ ವಿಚಾರ ಬಯಲಿಗೆ ಬಂದಿದೆ.

ಹೆಡ್ ಕಾನ್ಸ್ಟೇಬಲ್ ಸಿದ್ದರಾಮರೆಡ್ಡಿಯು ಸಾಬಣ್ಣ ಜೊತೆ ಸೇರಿ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನ ಮಾಡುತ್ತಿದ್ದರು.ರೈಲುಗಳಲ್ಲಿ ಬೆಳಗಿನ ಜಾವ ಪ್ರಯಾಣಿಕರು ನಿದ್ದೆ ಮಾಡುವ ವೇಳೆ ಕಳ್ಳ ಪೊಲೀಸ್ ಆಟ ಪ್ರಾರಂಭವಾಗುತ್ತಿತ್ತು.

ದೋಚಿದ್ದ ಚಿನ್ನಾಭರಣ ಮತ್ತು ನಗದನ್ನು ಇಬ್ಬರು ಶೇರ್ ಮಾಡುಕೊಳ್ಳಲಾಗುತ್ತಿತ್ತು. ಈ ಇಬ್ಬರ ಬಂಧನದಿಂದ 2 ರೈಲ್ವೆ ಠಾಣಾ ವ್ಯಾಪ್ತಿಯ 4 ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿ ಹೆಡ್ ಕಾನ್ಸ್ ಟೇಬಲ್ ಸಿದ್ದರಾಮರೆಡ್ಡಿ ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ.

Ramesh Babu

Journalist

Recent Posts

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

2 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

19 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

19 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago