ಕಳ್ಳನೊಂದಿಗೆ ಸೇರಿ ತಾನೂ ಕಳ್ಳನಾಗಿದ್ದ ಹೆಡ್ ಕಾನ್ಸ್ಟೇಬಲ್ ಬಂಧನ: ರೈಲಿನಲ್ಲಿ ಪ್ರಯಾಣಿಕರು ನಿದ್ರೆಗೆ ಜಾರಿದಾಗ ‘ಕಳ್ಳ-ಪೊಲೀಸ್ ಆಟ’ ಶುರು

ಚಿಕ್ಕಬಳ್ಳಾಪುರ ಹೊರ ಪೊಲೀಸ್ ಉಪಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ಕಳ್ಳನೊಂದಿಗೆ ಸೇರಿ ತಾನೂ ಕಳ್ಳತನದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸಿದ್ದರಾಮರೆಡ್ಡಿ (38), ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಉಪಠಾಣೆಯ ಮುಖ್ಯಪೇದೆ ಬಂಧಿತ ಆರೋಪಿ. ಆಗಸ್ಟ್ ನಲ್ಲಿ ತ್ರಿಶೂರ್ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬರ್ತಿದ್ದ ಪ್ರಯಾಣಿಕರ ಬ್ಯಾಗ್ ಬೈಯ್ಯಪ್ಪನಹಳ್ಳಿ ಸ್ಟೇಷನ್ ಬಳಿ ಕಳುವಾಗಿತ್ತು, ಆ ಬ್ಯಾಗ್ ನಲ್ಲಿ ಸುಮಾರು 10ಲಕ್ಷ ರೂ. ಮೌಲ್ಯದ ಚಿನ್ನಾಭರಣವಿತ್ತು. ದೂರಿನ ಮೇರೆಗೆ ಈ ಸಂಬಂಧ  ಇತ್ತಿಚೆಗೆ ಕೆ.ಆರ್.ಪುರಂ ರೈಲ್ವೆ ಸ್ಟೇಷನ್ ಬಳಿ ಸಾಬಣ್ಣ ಎಂಬುವನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಹೆಡ್ ಕಾನ್ಸ್ಟೇಬಲ್ ವಿಚಾರ ಬಯಲಿಗೆ ಬಂದಿದೆ.

ಹೆಡ್ ಕಾನ್ಸ್ಟೇಬಲ್ ಸಿದ್ದರಾಮರೆಡ್ಡಿಯು ಸಾಬಣ್ಣ ಜೊತೆ ಸೇರಿ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನ ಮಾಡುತ್ತಿದ್ದರು.ರೈಲುಗಳಲ್ಲಿ ಬೆಳಗಿನ ಜಾವ ಪ್ರಯಾಣಿಕರು ನಿದ್ದೆ ಮಾಡುವ ವೇಳೆ ಕಳ್ಳ ಪೊಲೀಸ್ ಆಟ ಪ್ರಾರಂಭವಾಗುತ್ತಿತ್ತು.

ದೋಚಿದ್ದ ಚಿನ್ನಾಭರಣ ಮತ್ತು ನಗದನ್ನು ಇಬ್ಬರು ಶೇರ್ ಮಾಡುಕೊಳ್ಳಲಾಗುತ್ತಿತ್ತು. ಈ ಇಬ್ಬರ ಬಂಧನದಿಂದ 2 ರೈಲ್ವೆ ಠಾಣಾ ವ್ಯಾಪ್ತಿಯ 4 ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿ ಹೆಡ್ ಕಾನ್ಸ್ ಟೇಬಲ್ ಸಿದ್ದರಾಮರೆಡ್ಡಿ ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

8 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

9 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

15 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

16 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

21 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago