ಕಳ್ಳನೊಂದಿಗೆ ಸೇರಿ ತಾನೂ ಕಳ್ಳನಾಗಿದ್ದ ಹೆಡ್ ಕಾನ್ಸ್ಟೇಬಲ್ ಬಂಧನ: ರೈಲಿನಲ್ಲಿ ಪ್ರಯಾಣಿಕರು ನಿದ್ರೆಗೆ ಜಾರಿದಾಗ ‘ಕಳ್ಳ-ಪೊಲೀಸ್ ಆಟ’ ಶುರು

ಚಿಕ್ಕಬಳ್ಳಾಪುರ ಹೊರ ಪೊಲೀಸ್ ಉಪಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ಕಳ್ಳನೊಂದಿಗೆ ಸೇರಿ ತಾನೂ ಕಳ್ಳತನದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸಿದ್ದರಾಮರೆಡ್ಡಿ (38), ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಉಪಠಾಣೆಯ ಮುಖ್ಯಪೇದೆ ಬಂಧಿತ ಆರೋಪಿ. ಆಗಸ್ಟ್ ನಲ್ಲಿ ತ್ರಿಶೂರ್ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬರ್ತಿದ್ದ ಪ್ರಯಾಣಿಕರ ಬ್ಯಾಗ್ ಬೈಯ್ಯಪ್ಪನಹಳ್ಳಿ ಸ್ಟೇಷನ್ ಬಳಿ ಕಳುವಾಗಿತ್ತು, ಆ ಬ್ಯಾಗ್ ನಲ್ಲಿ ಸುಮಾರು 10ಲಕ್ಷ ರೂ. ಮೌಲ್ಯದ ಚಿನ್ನಾಭರಣವಿತ್ತು. ದೂರಿನ ಮೇರೆಗೆ ಈ ಸಂಬಂಧ  ಇತ್ತಿಚೆಗೆ ಕೆ.ಆರ್.ಪುರಂ ರೈಲ್ವೆ ಸ್ಟೇಷನ್ ಬಳಿ ಸಾಬಣ್ಣ ಎಂಬುವನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಹೆಡ್ ಕಾನ್ಸ್ಟೇಬಲ್ ವಿಚಾರ ಬಯಲಿಗೆ ಬಂದಿದೆ.

ಹೆಡ್ ಕಾನ್ಸ್ಟೇಬಲ್ ಸಿದ್ದರಾಮರೆಡ್ಡಿಯು ಸಾಬಣ್ಣ ಜೊತೆ ಸೇರಿ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನ ಮಾಡುತ್ತಿದ್ದರು.ರೈಲುಗಳಲ್ಲಿ ಬೆಳಗಿನ ಜಾವ ಪ್ರಯಾಣಿಕರು ನಿದ್ದೆ ಮಾಡುವ ವೇಳೆ ಕಳ್ಳ ಪೊಲೀಸ್ ಆಟ ಪ್ರಾರಂಭವಾಗುತ್ತಿತ್ತು.

ದೋಚಿದ್ದ ಚಿನ್ನಾಭರಣ ಮತ್ತು ನಗದನ್ನು ಇಬ್ಬರು ಶೇರ್ ಮಾಡುಕೊಳ್ಳಲಾಗುತ್ತಿತ್ತು. ಈ ಇಬ್ಬರ ಬಂಧನದಿಂದ 2 ರೈಲ್ವೆ ಠಾಣಾ ವ್ಯಾಪ್ತಿಯ 4 ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿ ಹೆಡ್ ಕಾನ್ಸ್ ಟೇಬಲ್ ಸಿದ್ದರಾಮರೆಡ್ಡಿ ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

26 minutes ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

52 minutes ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

13 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

16 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago