ಚಿಕ್ಕಬಳ್ಳಾಪುರ ಹೊರ ಪೊಲೀಸ್ ಉಪಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ಕಳ್ಳನೊಂದಿಗೆ ಸೇರಿ ತಾನೂ ಕಳ್ಳತನದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸಿದ್ದರಾಮರೆಡ್ಡಿ (38), ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಉಪಠಾಣೆಯ ಮುಖ್ಯಪೇದೆ ಬಂಧಿತ ಆರೋಪಿ. ಆಗಸ್ಟ್ ನಲ್ಲಿ ತ್ರಿಶೂರ್ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬರ್ತಿದ್ದ ಪ್ರಯಾಣಿಕರ ಬ್ಯಾಗ್ ಬೈಯ್ಯಪ್ಪನಹಳ್ಳಿ ಸ್ಟೇಷನ್ ಬಳಿ ಕಳುವಾಗಿತ್ತು, ಆ ಬ್ಯಾಗ್ ನಲ್ಲಿ ಸುಮಾರು 10ಲಕ್ಷ ರೂ. ಮೌಲ್ಯದ ಚಿನ್ನಾಭರಣವಿತ್ತು. ದೂರಿನ ಮೇರೆಗೆ ಈ ಸಂಬಂಧ ಇತ್ತಿಚೆಗೆ ಕೆ.ಆರ್.ಪುರಂ ರೈಲ್ವೆ ಸ್ಟೇಷನ್ ಬಳಿ ಸಾಬಣ್ಣ ಎಂಬುವನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಹೆಡ್ ಕಾನ್ಸ್ಟೇಬಲ್ ವಿಚಾರ ಬಯಲಿಗೆ ಬಂದಿದೆ.
ಹೆಡ್ ಕಾನ್ಸ್ಟೇಬಲ್ ಸಿದ್ದರಾಮರೆಡ್ಡಿಯು ಸಾಬಣ್ಣ ಜೊತೆ ಸೇರಿ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನ ಮಾಡುತ್ತಿದ್ದರು.ರೈಲುಗಳಲ್ಲಿ ಬೆಳಗಿನ ಜಾವ ಪ್ರಯಾಣಿಕರು ನಿದ್ದೆ ಮಾಡುವ ವೇಳೆ ಕಳ್ಳ ಪೊಲೀಸ್ ಆಟ ಪ್ರಾರಂಭವಾಗುತ್ತಿತ್ತು.
ದೋಚಿದ್ದ ಚಿನ್ನಾಭರಣ ಮತ್ತು ನಗದನ್ನು ಇಬ್ಬರು ಶೇರ್ ಮಾಡುಕೊಳ್ಳಲಾಗುತ್ತಿತ್ತು. ಈ ಇಬ್ಬರ ಬಂಧನದಿಂದ 2 ರೈಲ್ವೆ ಠಾಣಾ ವ್ಯಾಪ್ತಿಯ 4 ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿ ಹೆಡ್ ಕಾನ್ಸ್ ಟೇಬಲ್ ಸಿದ್ದರಾಮರೆಡ್ಡಿ ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…