ಕಳ್ಳನೊಂದಿಗೆ ಸೇರಿ ತಾನೂ ಕಳ್ಳನಾಗಿದ್ದ ಹೆಡ್ ಕಾನ್ಸ್ಟೇಬಲ್ ಬಂಧನ: ರೈಲಿನಲ್ಲಿ ಪ್ರಯಾಣಿಕರು ನಿದ್ರೆಗೆ ಜಾರಿದಾಗ ‘ಕಳ್ಳ-ಪೊಲೀಸ್ ಆಟ’ ಶುರು

ಚಿಕ್ಕಬಳ್ಳಾಪುರ ಹೊರ ಪೊಲೀಸ್ ಉಪಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ಕಳ್ಳನೊಂದಿಗೆ ಸೇರಿ ತಾನೂ ಕಳ್ಳತನದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸಿದ್ದರಾಮರೆಡ್ಡಿ (38), ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಉಪಠಾಣೆಯ ಮುಖ್ಯಪೇದೆ ಬಂಧಿತ ಆರೋಪಿ. ಆಗಸ್ಟ್ ನಲ್ಲಿ ತ್ರಿಶೂರ್ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬರ್ತಿದ್ದ ಪ್ರಯಾಣಿಕರ ಬ್ಯಾಗ್ ಬೈಯ್ಯಪ್ಪನಹಳ್ಳಿ ಸ್ಟೇಷನ್ ಬಳಿ ಕಳುವಾಗಿತ್ತು, ಆ ಬ್ಯಾಗ್ ನಲ್ಲಿ ಸುಮಾರು 10ಲಕ್ಷ ರೂ. ಮೌಲ್ಯದ ಚಿನ್ನಾಭರಣವಿತ್ತು. ದೂರಿನ ಮೇರೆಗೆ ಈ ಸಂಬಂಧ  ಇತ್ತಿಚೆಗೆ ಕೆ.ಆರ್.ಪುರಂ ರೈಲ್ವೆ ಸ್ಟೇಷನ್ ಬಳಿ ಸಾಬಣ್ಣ ಎಂಬುವನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಹೆಡ್ ಕಾನ್ಸ್ಟೇಬಲ್ ವಿಚಾರ ಬಯಲಿಗೆ ಬಂದಿದೆ.

ಹೆಡ್ ಕಾನ್ಸ್ಟೇಬಲ್ ಸಿದ್ದರಾಮರೆಡ್ಡಿಯು ಸಾಬಣ್ಣ ಜೊತೆ ಸೇರಿ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನ ಮಾಡುತ್ತಿದ್ದರು.ರೈಲುಗಳಲ್ಲಿ ಬೆಳಗಿನ ಜಾವ ಪ್ರಯಾಣಿಕರು ನಿದ್ದೆ ಮಾಡುವ ವೇಳೆ ಕಳ್ಳ ಪೊಲೀಸ್ ಆಟ ಪ್ರಾರಂಭವಾಗುತ್ತಿತ್ತು.

ದೋಚಿದ್ದ ಚಿನ್ನಾಭರಣ ಮತ್ತು ನಗದನ್ನು ಇಬ್ಬರು ಶೇರ್ ಮಾಡುಕೊಳ್ಳಲಾಗುತ್ತಿತ್ತು. ಈ ಇಬ್ಬರ ಬಂಧನದಿಂದ 2 ರೈಲ್ವೆ ಠಾಣಾ ವ್ಯಾಪ್ತಿಯ 4 ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿ ಹೆಡ್ ಕಾನ್ಸ್ ಟೇಬಲ್ ಸಿದ್ದರಾಮರೆಡ್ಡಿ ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

56 minutes ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

1 hour ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

9 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

20 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago