ಚಿಕ್ಕಬಳ್ಳಾಪುರ ಹೊರ ಪೊಲೀಸ್ ಉಪಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ಕಳ್ಳನೊಂದಿಗೆ ಸೇರಿ ತಾನೂ ಕಳ್ಳತನದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸಿದ್ದರಾಮರೆಡ್ಡಿ (38), ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಉಪಠಾಣೆಯ ಮುಖ್ಯಪೇದೆ ಬಂಧಿತ ಆರೋಪಿ. ಆಗಸ್ಟ್ ನಲ್ಲಿ ತ್ರಿಶೂರ್ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬರ್ತಿದ್ದ ಪ್ರಯಾಣಿಕರ ಬ್ಯಾಗ್ ಬೈಯ್ಯಪ್ಪನಹಳ್ಳಿ ಸ್ಟೇಷನ್ ಬಳಿ ಕಳುವಾಗಿತ್ತು, ಆ ಬ್ಯಾಗ್ ನಲ್ಲಿ ಸುಮಾರು 10ಲಕ್ಷ ರೂ. ಮೌಲ್ಯದ ಚಿನ್ನಾಭರಣವಿತ್ತು. ದೂರಿನ ಮೇರೆಗೆ ಈ ಸಂಬಂಧ ಇತ್ತಿಚೆಗೆ ಕೆ.ಆರ್.ಪುರಂ ರೈಲ್ವೆ ಸ್ಟೇಷನ್ ಬಳಿ ಸಾಬಣ್ಣ ಎಂಬುವನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಹೆಡ್ ಕಾನ್ಸ್ಟೇಬಲ್ ವಿಚಾರ ಬಯಲಿಗೆ ಬಂದಿದೆ.
ಹೆಡ್ ಕಾನ್ಸ್ಟೇಬಲ್ ಸಿದ್ದರಾಮರೆಡ್ಡಿಯು ಸಾಬಣ್ಣ ಜೊತೆ ಸೇರಿ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನ ಮಾಡುತ್ತಿದ್ದರು.ರೈಲುಗಳಲ್ಲಿ ಬೆಳಗಿನ ಜಾವ ಪ್ರಯಾಣಿಕರು ನಿದ್ದೆ ಮಾಡುವ ವೇಳೆ ಕಳ್ಳ ಪೊಲೀಸ್ ಆಟ ಪ್ರಾರಂಭವಾಗುತ್ತಿತ್ತು.
ದೋಚಿದ್ದ ಚಿನ್ನಾಭರಣ ಮತ್ತು ನಗದನ್ನು ಇಬ್ಬರು ಶೇರ್ ಮಾಡುಕೊಳ್ಳಲಾಗುತ್ತಿತ್ತು. ಈ ಇಬ್ಬರ ಬಂಧನದಿಂದ 2 ರೈಲ್ವೆ ಠಾಣಾ ವ್ಯಾಪ್ತಿಯ 4 ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿ ಹೆಡ್ ಕಾನ್ಸ್ ಟೇಬಲ್ ಸಿದ್ದರಾಮರೆಡ್ಡಿ ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…