ಕೋಲಾರ : ತಾಲೂಕಿನ ವೇಮಗಲ್ ಭಾಗದಲ್ಲಿ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ.
ಈ ಭಾಗದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ ಮಂಗಳವಾರ ರಾತ್ರಿ ವೇಮಗಲ್ ಸಿ ಬ್ಲಾಕ್ 17ನೇ ವಾರ್ಡಿನಲ್ಲಿ ರಾಮಪ್ಪಗೆ ಸೇರಿದ 5 ಸಾವಿರ ಬೆಲೆ ಕೋಳಿ ಹುಂಜ ಕಳ್ಳತನವಾಗಿದೆ ಅದೇ ದಿನ ರಾವುಲಮ್ಮನವರ ಅಶೋಕ್ ಮನೆಯ ಬಳಿಯೂ ಸುಮಾರು 50 ಸಾವಿರ ಬೆಲೆ ಬಾಳುವ 10 ಕೋಳಿ ಹುಂಜಗಳು ಕಳ್ಳತನವಾಗಿವೆ, ಬುಲೋರೋ ವಾಹನದಲ್ಲಿ ಬಂದು ಕಳ್ಳತನ ಮಾಡಿರುವ ದೃಶ್ಯಾವಳಿಗಳು ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ
ಕಳ್ಳರು ಮಾಸ್ಕ್ ಹಾಗೂ ಟೋಪಿ ಧರಿಸಿರುವುದರಿಂದ ಯಾರು ಏನು ಎಂಬುದು ತಿಳಿಯುತ್ತಿಲ್ಲ ವಾಹನದ ಸಂಖ್ಯೆಯು ಇಲ್ಲವಾಗಿದೆ ಗೋಪಾಲಪ್ಪ ನವರ ತೋಟದ ಬಳಿ ಪಂಪ್ ಸೆಟ್ ರಿಪೇರಿಗಾಗಿ ತೆಗೆದಿದ್ದ ಕೇಬಲ್ ಕಳ್ಳತನಗಳಾಗಿದ್ದು ಪತ್ತೆಗೆ ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…