Categories: Crime

ಕಷ್ಟಾಪಟ್ಟು ಮೇಯಿಸಿದ್ದ ಕುರಿ ಮಾರಾಟದ ಹಣ ಕೇಳಿದಕ್ಕೆ ಮರ್ಡರ್

ಆಕೆ ದಿನಪೂರ್ತಿ ಕಷ್ಟಾಪಟ್ಟು ದುಡಿದು ಇದ್ದ ನಾಲ್ಕು ಕುರಿಗಳನ್ನ ಮೇಯಿಸುತ್ತಾ ಜೀವನ ಸಾಗಿಸುತ್ತಿದ್ಲು. ಜೊತೆಗೆ ಕಳೆದ ಗಣೇಶನ ಹಬ್ಬದ ಸಮಯದಲ್ಲಿ ಕುರಿಯನ್ನ ಮಾರಿದ್ದು, ಹಣಕ್ಕಾಗಿ ಒತ್ತಾಯಿಸಿದ್ಲು. ಆದ್ರೆ ಕಷ್ಟಪಟ್ಟು ಸಾಕಿದ್ದ ಕುರಿ ಮಾರಿದ್ದ ವೃದ್ದೆಯನ್ನೆ ಯಾಮಾರಿಸಲು ಹೋದ ಭೂಪ ಕೊನೆಗೆ ಜಸ್ಟ್ ಐದಾರು ಸಾವಿರಕ್ಕಾಗಿ ಮರ್ಡರ್ ಮಾಡಿದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಇವನ ಮುಖವನ್ನೊಮ್ಮೆ ಸರಿಯಾಗಿ ನೋಡಿ ಮೂತಿ ಮೇಲೆ ಇನ್ನೂ ನೆಟ್ಟಗೆ ಮೀಸೆ ಸಹ ಚಿಗುರಿಲ್ಲ. ಆದ್ರೆ, ಅಷ್ಟರಲ್ಲೆ ಹಗಲು ರಾತ್ರಿ ಅನ್ನದೆ ಕಷ್ಟಾಪಟ್ಟು ದುಡಿಯುತ್ತಿದ್ದ ವರಲಕ್ಷ್ಮೀ ಅನ್ನೂ ಈ ವೃದ್ದೆಗೆ ಚಟ್ಟ ಕಟ್ಟಿದ್ದಾನೆ. ಕಷ್ಟಕಾಲಕ್ಕೆ ಅಂತ ಇಟ್ಟುಕೊಂಡಿದ್ದ ಕುರಿಯನ್ನ ಮಾರಾಟ ಮಾಡಿಸುವುದಾಗಿ ವೃದ್ದೆಯನ್ನ ಪುಸಲಾಯಿಸಿದವನು ನಂತರ ಹಣ ಕೇಳ್ತಿದ್ದಂತೆ ಆಕೆಯನ್ನೆ ಶಿವನ ಪಾದ ಸೇರಿಸಿ ಇವನು ಮಾತ್ರ ಪಾಪ ತೊಳೆದುಕೊಳ್ಳಲು ದೇವರ ಮೊರೆ ಹೋಗಿದ್ದಾನೆ.

ಹೌದು, ಅಂದಹಾಗೆ ಜಸ್ಟ್ 5 ಸಾವಿರ ಹಣ ಕೇಳಿದಕ್ಕೆ ಚಿಗುರು ಮೀಸೆ ಯುವಕನಿಂದ ಭೀಕರವಾಗಿ ಕೊಲೆಯಾಗಿರುವ ಈಕೆ ವರಲಕ್ಷ್ಮೀ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ ನಿವಾಸಿಯಾದ ಈಕೆ ಕಷ್ಟಕಾಲಕ್ಕೆ ಅಂತ ನಾಲ್ಕೈದು ಕುರಿಗಳನ್ನ ಖರೀದಿಸಿದ್ದು ಕೂಲಿ ಮಾಡುತ್ತಾ ಅವುಗಳನ್ನ ಮೇಯಿಸುತ್ತಿದ್ಲು. ಜೊತೆಗೆ ಕಳೆದ ಗಣೇಶ ಹಬ್ಬದ ಹೊಸ ತೊಡಕು ಸಂಧರ್ಭದಲ್ಲಿ ಕುರಿಯನ್ನ ಮಾರಾಟ ಮಾಡಿದ್ರೆ ಹೆಚ್ಚಿನ ಹಣ ಬರುತ್ತೆ ಅಂತ ವೃದ್ದೆಯನ್ನ ಪುಸಲಾಯಿಸಿದ ಪಕ್ಕದ ಮನೆಯ ಯುವಕ ಮಧು ಅನ್ನೋ ಇವನು ವೃದ್ದೆ ಬಳಿ ಕುರಿಗಳನ್ನ ತೆಗೆದುಕೊಂಡು ಹೋಗಿದ್ದು ಹಣ ನೀಡಿರಲಿಲ್ವಂತೆ. ಹೀಗಾಗಿ ಹಲವು ಬಾರಿ ಸಿಕ್ಕ ಸಿಕ್ಕ ಕಡೆಯೆಲೆಲ್ಲ ವೃದ್ದೆ ಹಣ ಕೇಳ್ತಿದಕ್ಕೆ ರೋಸಿಹೋದ ಖದೀಮ ಕೊನೆಗೆ ವೃದ್ದೆಗೆ ಹಣ ನೀಡದೆ ವೃದ್ದೆಯನ್ನೆ ಕೊಲೆ ಮಾಡಿದ್ದಾನೆ ಎಂದು ಮೃತ ವೃದ್ದೆಯ ಸಂಬಂಧಿ ಶ್ವೇತ ಆರೋಪಿಸಿದ್ದಾರೆ.

ಕಳೆದ ತಿಂಗಳು ಗಣೇಶ ಹಬ್ಬದ ಸಂಧರ್ಭದಲ್ಲಿ ವೃದ್ದೆಗೆ ಹಣ ಕೊಡುವುದಾಗಿ ರಸ್ತೆ ಬಳಿಗೆ ಕರೆಸಿಕೊಂಡು ಆಕೆಯನ್ನ ಕಾರು ಹತ್ತಿಸಿಕೊಂಡಿದ್ದ ಭೂಪ ನಂತರ ಅಕೆ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕೇಳಿದ್ನಂತೆ. ಈ ವೇಳೆ ಆಕೆ ಕೊಡಲ್ಲ ನನ್ನ ಹಣ ಕೊಡು ಅಂತ ಗಲಾಟ ಮಾಡಿದಕ್ಕೆ ಆಕೆಯ ಮೇಲೆ ಹಲ್ಲೆ ಮಾಡಿದವನೆ ನಂತರ ಸೀದಾ ವಿಜಯಪುರ ಪಟ್ಟಣದ ಅಮಾನಿಕೆರೆಯ ನೀರಿಗೆ ತಳ್ಳಿ ಎಸ್ಕೇಪ್ ಆಗಿದ್ದ. ಇನ್ನೂ ನೀರಿಗೆ ತಳ್ಳಿದ ಎರಡು ದಿನದ ನಂತರ ಮಹಿಳೆಯ ಮೃತದೇಹ ಹೊರಗಡೆ ಬಂದಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಕುಟುಂಬಸ್ಥರ ಶಂಕೆ ಮೆರೆಗೆ ಮಧುವನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಮೃತಳ ಸಂಬಂಧಿ ಮಂಜುಳಾ ಹೇಳಿದ್ದಾರೆ.

ಒಟ್ಟಾರೆ ಕಷ್ಟಕಾಲಕ್ಕೆ ಅನುಕೂಲವಾಗುತ್ತೆ ಹಬ್ಬಕ್ಕೆ ನಾಲ್ಕು ಕಾಸು ಸಿಗುತ್ತೆ ಅಂತ ಕಷ್ಟಾ ಪಟ್ಟು ಸಾಕಿದ್ದ ಕುರಿಯ ಹಣಕ್ಕಾಗಿ ವೃದ್ದೆ ಕೊಲೆಯಾಗಿದ್ದು ಮಾತ್ರ ನಿಜಕ್ಕೂ ದುರಂತ. ಇನ್ನೂ ಐದು ಸಾವಿರ ಹಣಕ್ಕಾಗಿ ಕೊಲೆ ಮಾಡಿದ ಆರೋಫಿ ಇದೀಗ ಮಾಡಿದುಣ್ಣೋ ಮಾರಾಯ ಅಂತ ಮುದ್ದೆ ಮುರಿಯಲು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 hour ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

15 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

16 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

17 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

17 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

21 hours ago