ಕಸದ ಸಮಸ್ಯೆಗೆ ಮುಕ್ತಿ ನೀಡುವಂತೆ ಡಿಸಿಎಂ ಕಾಲಿಗೆ ಬಿದ್ದ ಶಾಸಕ ಧೀರಜ್ ಮುನಿರಾಜ್- ಕಸದ ಸಮಸ್ಯೆಗೆ ಮುಂದಿನಗಳಲ್ಲಿ ಮುಕ್ತಿ- ದೊಡ್ಡಬಳ್ಳಾಪುರಕ್ಕೆ ಹೆಚ್ಚಿನ ಆದ್ಯತೆ- ಡಿಸಿಎಂ‌ ಡಿಕೆಶಿ ಭರವಸೆ

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯು ಸಂಪೂರ್ಣವಾಗಿ ಕೃಷಿಯನ್ನೇ ಅವಲಂಬಿಸಿದೆ. ಇಲ್ಲಿ ಯಾವುದೇ ಖಾಸಗಿ ಲೇಔಟ್ ಗಳು ಇಲ್ಲ, ಖಾಸಗೀಕರಣ ಆಗಿಲ್ಲ. ಎತ್ತಿನಹೊಳೆ ಯೋಜನೆಯಿಂದಾಗಿ ರೈತರು ಜಮೀನು ಕಳೆದುಕೊಳ್ಳುವುದಲ್ಲದೇ ಜಲಾಶಯ ಪ್ರದೇಶದ ಸುತ್ತಾಮುತ್ತ ಹಳ್ಳಿಗಳು ಮುಳುಗಡೆಯಾಗುತ್ತವೆ. ಆದ್ದರಿಂದ ರೈತರಿಗೆ ಜಮೀನು, ಮನೆ ಸಮೇತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕ ಧೀರಜ್ ಮುನಿರಾಜ್ ಅವರು ಡಿಸಿಎಂ ಡಿಕೆಶಿ ಬಳಿ ಕಾಲಿಗೆ ಬಿದ್ದು, ಕೈ ಮುಗಿದು ಮನವಿ ಮಾಡಿದರು.

ಇಂದು ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಪರಿಶೀಲನೆ ನಡೆಸಿದೆ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯಿಂದ ಜಮೀನು, ಮನೆ ಕಳೆದುಕೊಂಡವರಿಗೆ ಇದೇ ಹೋಬಳಿಯಲ್ಲಿ ಜಮೀನು,‌ ಮನೆ ವ್ಯವ್ಯಸ್ಥೆ ಕಲ್ಪಿಸಬೇಕು. ಇಲ್ಲಿ ಬೇಕಾದಷ್ಟು ಸರ್ಕಾರಿ ಭೂಮಿ‌ ಇದೆ. ಬೇರೆಲ್ಲೂ ಪರ್ಯಾಯ ವ್ಯವಸ್ಥೆ ಮಾಡದೇ ಇಲ್ಲೇ ರೈತರನ್ನು ಉಳಿಸಿಕೊಳ್ಳಬೇಕು ಎಂದರು.

ಈ ಯೋಜನೆಯಿಂದ ನಮ್ಮ ತಾಲೂಕಿನಲ್ಲಿ ಕೇವಲ 7 ಕೆರೆಗಳು ಮಾತ್ರ ತುಂಬುತ್ತವೆ. ನಮ್ಮಲ್ಲಿ ಒಂದೇ ಒಂದು ಕುಡಿಯುವ ನೀರಿನ ಯೋಜನೆ ಇಲ್ಲ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 29‌ ಕೆರೆಗಳಿವೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತೂಬಗೆರೆ ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು 10 ಸಣ್ಣ ನೀರಾವರಿ ಕೆರೆಗಳಿವೆ. ಈ ಎಲ್ಲಾ ಕೆರೆಗಳಿಗೂ ಎತ್ತಿನಹೊಳೆ ನೀರು ಹೋಗಬೇಕು. ಆ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದರು.

ಅದೇರೀತಿ ಸಾಸಲು ಹೋಬಳಿಯ ದೊಡ್ಡ ಸಮಸ್ಯೆ ಎಂಎಸ್ ಜಿಪಿ ಘಟಕ. ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುವ ಕಸವನ್ನು ನಿಲ್ಲಿಸಬೇಕು.

ಎರಡು ವರ್ಷಗಳಿಂದಲು ಬಿಬಿಎಂಪಿ ವತಿಯಿಂದ ತಾಲ್ಲೂಕಿನ ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಅನುದಾನವನ್ನು ಪಡೆಯದೆ ವಿರೋಧಿಸಲಾಗಿದೆ. ನಮಗೆ ಬೇಕಿರುವುದು ಬಿಬಿಎಂಪಿ ಅನುದಾನವಲ್ಲ, ಕಸ ಇಲ್ಲಿಗೆ ಬರುವುದು ನಿಲ್ಲಬೇಕು. ಬಿಬಿಎಂಪಿ ಕಸ ಇಲ್ಲಿಗೆ ಬರುತ್ತಿರುವುದರಿಂದ ಅಂತರ್ಜಲ ಕಲುಷಿತವಾಗಿ ದೊಡ್ಡಬೆಳವಂಗಲ ಹಾಗೂ ಸಾಸಲು ಭಾಗದ ಹತ್ತಾರು ಗ್ರಾಮಗಳ ಜನರು ನಾನಾ ರೀತಿಯ ಚರ್ಮ ರೋಗ ಸೇರಿದಂತೆ ಹಲವಾರು ಆರೋಗ್ಯದ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಅಂತರ್ಜಲ ಬಳಕೆಯಿಂದ ಬೆಳೆಗಳು ಸಹ ಹಾಳಾಗುತ್ತಿವೆ. ಇದರ ವಿರುದ್ಧ ಈಗಾಗಲೇ ಹಲವಾರು ಜನ ರೈತರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರುಗಳನ್ನು ದಾಖಲಿಸಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಹ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕುರಿತು ವರದಿ ನೀಡಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲು ಕಸ ವಿಲೇವಾರಿ ಘಟಕ ಮುಚ್ಚುವಂತೆ ನಿರ್ಣಯ ಅಂಗೀಕರಿಸಿದ್ದಾರೆ ಎಂದರು.

ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮೊದಲು ನಾವು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ದೊಡ್ಡಬಳ್ಳಾಪುರ ತಾಲೂಕಿಗೆ ಹೆಚ್ಚು ಒತ್ತು‌ಕೊಟ್ಟು ರೈತರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ವ್ಯವ್ಯಸ್ಥೆ ಕಲ್ಲಿಸಿಕೊಡುತ್ತೇನೆ. ಇಡೀ ರಾಜ್ಯದಲ್ಲಿ ಕಸದ ಸಮಸ್ಯೆ ಇದೆ. ಕಸದ ಸಮಸ್ಯೆಗೆ ಪರ್ಯಾಯ ಮಾರ್ಗ ಕಂಡುಕೊಳ್ಳಲಾಗುತ್ತಿದೆ. ಒಂದು ದಿನದ ಕಸ ಮೂರು ದಿನದಲ್ಲಿ ಸಂಪೂರ್ಣವಾಗಿ ಬರ್ನ್ ಆಗಬೇಕು. ಕಸದಿಂದ ಗ್ಯಾಸ್, ವಿದ್ಯುತ್ ಉತ್ಪಾದನೆ ಆಗಬೇಕು. ಮೊದಲು ಬೆಂಗಳೂರು ನಗರದಲ್ಲೇ ಈ ಪ್ಲಾನ್ ನನ್ನು ಜಾರಿಗೆ ತರುತ್ತೇವೆ. ನಂತರ ಗ್ರಾಮೀಣ ಭಾಗದಲ್ಲಿ ಸುಮಾರು ಹತ್ತು ಎಕರೆಯಲ್ಲಿ ಕಸದಿಂದ ಗ್ಯಾಸ್, ವಿದ್ಯುತ್ ಉತ್ಪಾದನೆ ಮಾಡಲಾಗುವುದು. ಎಂಎಸ್ ಜಿಪಿ ಕಸ ವಿಲೇವಾರಿ ಘಟಕ ವೀಕ್ಷಣೆಗೆ ಪ್ರತ್ಯೇಕವಾಗಿ ಇನ್ನೊಂದು ದಿನ ಬರುತ್ತೇನೆ. ಬಂದು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೆನೆ ಎಂದರು.

ಎತ್ತಿನಹೊಳೆ ಯೋಜನೆಗೆ ಭೂಮಿಕೊಟ್ಟ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಹೊಸದಾಗಿ ಹಳ್ಳಿಗಳನ್ನು ಕಟ್ಟುವಂತಹ ಕೆಲಸ ಮಾಡುತ್ತೇವೆ ಎಂದರು.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 14.5 ಟಿ.ಎಂ.ಸಿ ನೀರನ್ನು ನೀಡಬೇಕಾಗಿದೆ ಹಾಗಾಗಿ ಯಾವುದೇ ತಾಲೂಕಿನ ಕೆರೆಗಳನ್ನು ತುಂಬಿಸಬಾರದು.

ಅದಕ್ಕಿಂತ ಮೊದಲು ಲಕ್ಕೇನಹಳ್ಳಿ ಭಾಗದಲ್ಲಿ ಸಮತೋಲನ ಜಲಾಶಯ ಆಗುವುದರಿಂದ ನಿಮ್ಮ ಬೇಡಿಕೆಯ ಕೆರೆಗಳನ್ನು ತುಂಬಿಸಲು ವಿಶೇಷ ಗಮನ ಹರಿಸಲಾಗುವುದು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಮಾತನಾಡಿ, ಎತ್ತಿನ ಹೊಳೆ ಯೋಜನೆಗೆ ಜಮೀನು, ಮನೆ ಕಳೆದುಕೊಳ್ಳುವ ರೈತರಿಗೆ ಗರಿಷ್ಠ ಪರಿಹಾರವನ್ನು ಒಂದು ತಿಂಗಳೊಳಗಾಗಿ ನೀಡಬೇಕು ಹಾಗೂ ಭೂಮಿ ಕಳೆದುಕೊಳ್ಳುವ ರೈತರಿಗೆ ಕನಿಷ್ಟ ಎರಡು ಎಕರೆ ಭೊಮಿಯನ್ನು ಲಭ್ಯವಿರುವ ಕಡೆ ನೀಡಬೇಕು ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

57 minutes ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

12 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago