ಕಸದ ಸಮಸ್ಯೆಗೆ ಮುಕ್ತಿ ನೀಡುವಂತೆ ಡಿಸಿಎಂ ಕಾಲಿಗೆ ಬಿದ್ದ ಶಾಸಕ ಧೀರಜ್ ಮುನಿರಾಜ್- ಕಸದ ಸಮಸ್ಯೆಗೆ ಮುಂದಿನಗಳಲ್ಲಿ ಮುಕ್ತಿ- ದೊಡ್ಡಬಳ್ಳಾಪುರಕ್ಕೆ ಹೆಚ್ಚಿನ ಆದ್ಯತೆ- ಡಿಸಿಎಂ‌ ಡಿಕೆಶಿ ಭರವಸೆ

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯು ಸಂಪೂರ್ಣವಾಗಿ ಕೃಷಿಯನ್ನೇ ಅವಲಂಬಿಸಿದೆ. ಇಲ್ಲಿ ಯಾವುದೇ ಖಾಸಗಿ ಲೇಔಟ್ ಗಳು ಇಲ್ಲ, ಖಾಸಗೀಕರಣ ಆಗಿಲ್ಲ. ಎತ್ತಿನಹೊಳೆ ಯೋಜನೆಯಿಂದಾಗಿ ರೈತರು ಜಮೀನು ಕಳೆದುಕೊಳ್ಳುವುದಲ್ಲದೇ ಜಲಾಶಯ ಪ್ರದೇಶದ ಸುತ್ತಾಮುತ್ತ ಹಳ್ಳಿಗಳು ಮುಳುಗಡೆಯಾಗುತ್ತವೆ. ಆದ್ದರಿಂದ ರೈತರಿಗೆ ಜಮೀನು, ಮನೆ ಸಮೇತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕ ಧೀರಜ್ ಮುನಿರಾಜ್ ಅವರು ಡಿಸಿಎಂ ಡಿಕೆಶಿ ಬಳಿ ಕಾಲಿಗೆ ಬಿದ್ದು, ಕೈ ಮುಗಿದು ಮನವಿ ಮಾಡಿದರು.

ಇಂದು ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಪರಿಶೀಲನೆ ನಡೆಸಿದೆ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯಿಂದ ಜಮೀನು, ಮನೆ ಕಳೆದುಕೊಂಡವರಿಗೆ ಇದೇ ಹೋಬಳಿಯಲ್ಲಿ ಜಮೀನು,‌ ಮನೆ ವ್ಯವ್ಯಸ್ಥೆ ಕಲ್ಪಿಸಬೇಕು. ಇಲ್ಲಿ ಬೇಕಾದಷ್ಟು ಸರ್ಕಾರಿ ಭೂಮಿ‌ ಇದೆ. ಬೇರೆಲ್ಲೂ ಪರ್ಯಾಯ ವ್ಯವಸ್ಥೆ ಮಾಡದೇ ಇಲ್ಲೇ ರೈತರನ್ನು ಉಳಿಸಿಕೊಳ್ಳಬೇಕು ಎಂದರು.

ಈ ಯೋಜನೆಯಿಂದ ನಮ್ಮ ತಾಲೂಕಿನಲ್ಲಿ ಕೇವಲ 7 ಕೆರೆಗಳು ಮಾತ್ರ ತುಂಬುತ್ತವೆ. ನಮ್ಮಲ್ಲಿ ಒಂದೇ ಒಂದು ಕುಡಿಯುವ ನೀರಿನ ಯೋಜನೆ ಇಲ್ಲ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 29‌ ಕೆರೆಗಳಿವೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತೂಬಗೆರೆ ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು 10 ಸಣ್ಣ ನೀರಾವರಿ ಕೆರೆಗಳಿವೆ. ಈ ಎಲ್ಲಾ ಕೆರೆಗಳಿಗೂ ಎತ್ತಿನಹೊಳೆ ನೀರು ಹೋಗಬೇಕು. ಆ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದರು.

ಅದೇರೀತಿ ಸಾಸಲು ಹೋಬಳಿಯ ದೊಡ್ಡ ಸಮಸ್ಯೆ ಎಂಎಸ್ ಜಿಪಿ ಘಟಕ. ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುವ ಕಸವನ್ನು ನಿಲ್ಲಿಸಬೇಕು.

ಎರಡು ವರ್ಷಗಳಿಂದಲು ಬಿಬಿಎಂಪಿ ವತಿಯಿಂದ ತಾಲ್ಲೂಕಿನ ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಅನುದಾನವನ್ನು ಪಡೆಯದೆ ವಿರೋಧಿಸಲಾಗಿದೆ. ನಮಗೆ ಬೇಕಿರುವುದು ಬಿಬಿಎಂಪಿ ಅನುದಾನವಲ್ಲ, ಕಸ ಇಲ್ಲಿಗೆ ಬರುವುದು ನಿಲ್ಲಬೇಕು. ಬಿಬಿಎಂಪಿ ಕಸ ಇಲ್ಲಿಗೆ ಬರುತ್ತಿರುವುದರಿಂದ ಅಂತರ್ಜಲ ಕಲುಷಿತವಾಗಿ ದೊಡ್ಡಬೆಳವಂಗಲ ಹಾಗೂ ಸಾಸಲು ಭಾಗದ ಹತ್ತಾರು ಗ್ರಾಮಗಳ ಜನರು ನಾನಾ ರೀತಿಯ ಚರ್ಮ ರೋಗ ಸೇರಿದಂತೆ ಹಲವಾರು ಆರೋಗ್ಯದ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಅಂತರ್ಜಲ ಬಳಕೆಯಿಂದ ಬೆಳೆಗಳು ಸಹ ಹಾಳಾಗುತ್ತಿವೆ. ಇದರ ವಿರುದ್ಧ ಈಗಾಗಲೇ ಹಲವಾರು ಜನ ರೈತರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರುಗಳನ್ನು ದಾಖಲಿಸಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಹ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕುರಿತು ವರದಿ ನೀಡಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲು ಕಸ ವಿಲೇವಾರಿ ಘಟಕ ಮುಚ್ಚುವಂತೆ ನಿರ್ಣಯ ಅಂಗೀಕರಿಸಿದ್ದಾರೆ ಎಂದರು.

ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮೊದಲು ನಾವು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ದೊಡ್ಡಬಳ್ಳಾಪುರ ತಾಲೂಕಿಗೆ ಹೆಚ್ಚು ಒತ್ತು‌ಕೊಟ್ಟು ರೈತರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ವ್ಯವ್ಯಸ್ಥೆ ಕಲ್ಲಿಸಿಕೊಡುತ್ತೇನೆ. ಇಡೀ ರಾಜ್ಯದಲ್ಲಿ ಕಸದ ಸಮಸ್ಯೆ ಇದೆ. ಕಸದ ಸಮಸ್ಯೆಗೆ ಪರ್ಯಾಯ ಮಾರ್ಗ ಕಂಡುಕೊಳ್ಳಲಾಗುತ್ತಿದೆ. ಒಂದು ದಿನದ ಕಸ ಮೂರು ದಿನದಲ್ಲಿ ಸಂಪೂರ್ಣವಾಗಿ ಬರ್ನ್ ಆಗಬೇಕು. ಕಸದಿಂದ ಗ್ಯಾಸ್, ವಿದ್ಯುತ್ ಉತ್ಪಾದನೆ ಆಗಬೇಕು. ಮೊದಲು ಬೆಂಗಳೂರು ನಗರದಲ್ಲೇ ಈ ಪ್ಲಾನ್ ನನ್ನು ಜಾರಿಗೆ ತರುತ್ತೇವೆ. ನಂತರ ಗ್ರಾಮೀಣ ಭಾಗದಲ್ಲಿ ಸುಮಾರು ಹತ್ತು ಎಕರೆಯಲ್ಲಿ ಕಸದಿಂದ ಗ್ಯಾಸ್, ವಿದ್ಯುತ್ ಉತ್ಪಾದನೆ ಮಾಡಲಾಗುವುದು. ಎಂಎಸ್ ಜಿಪಿ ಕಸ ವಿಲೇವಾರಿ ಘಟಕ ವೀಕ್ಷಣೆಗೆ ಪ್ರತ್ಯೇಕವಾಗಿ ಇನ್ನೊಂದು ದಿನ ಬರುತ್ತೇನೆ. ಬಂದು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೆನೆ ಎಂದರು.

ಎತ್ತಿನಹೊಳೆ ಯೋಜನೆಗೆ ಭೂಮಿಕೊಟ್ಟ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಹೊಸದಾಗಿ ಹಳ್ಳಿಗಳನ್ನು ಕಟ್ಟುವಂತಹ ಕೆಲಸ ಮಾಡುತ್ತೇವೆ ಎಂದರು.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 14.5 ಟಿ.ಎಂ.ಸಿ ನೀರನ್ನು ನೀಡಬೇಕಾಗಿದೆ ಹಾಗಾಗಿ ಯಾವುದೇ ತಾಲೂಕಿನ ಕೆರೆಗಳನ್ನು ತುಂಬಿಸಬಾರದು.

ಅದಕ್ಕಿಂತ ಮೊದಲು ಲಕ್ಕೇನಹಳ್ಳಿ ಭಾಗದಲ್ಲಿ ಸಮತೋಲನ ಜಲಾಶಯ ಆಗುವುದರಿಂದ ನಿಮ್ಮ ಬೇಡಿಕೆಯ ಕೆರೆಗಳನ್ನು ತುಂಬಿಸಲು ವಿಶೇಷ ಗಮನ ಹರಿಸಲಾಗುವುದು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಮಾತನಾಡಿ, ಎತ್ತಿನ ಹೊಳೆ ಯೋಜನೆಗೆ ಜಮೀನು, ಮನೆ ಕಳೆದುಕೊಳ್ಳುವ ರೈತರಿಗೆ ಗರಿಷ್ಠ ಪರಿಹಾರವನ್ನು ಒಂದು ತಿಂಗಳೊಳಗಾಗಿ ನೀಡಬೇಕು ಹಾಗೂ ಭೂಮಿ ಕಳೆದುಕೊಳ್ಳುವ ರೈತರಿಗೆ ಕನಿಷ್ಟ ಎರಡು ಎಕರೆ ಭೊಮಿಯನ್ನು ಲಭ್ಯವಿರುವ ಕಡೆ ನೀಡಬೇಕು ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

4 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

5 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

6 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

13 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago