ಕಸದ ಸಮಸ್ಯೆಗೆ ಮುಕ್ತಿ ನೀಡುವಂತೆ ಡಿಸಿಎಂ ಕಾಲಿಗೆ ಬಿದ್ದ ಶಾಸಕ ಧೀರಜ್ ಮುನಿರಾಜ್- ಕಸದ ಸಮಸ್ಯೆಗೆ ಮುಂದಿನಗಳಲ್ಲಿ ಮುಕ್ತಿ- ದೊಡ್ಡಬಳ್ಳಾಪುರಕ್ಕೆ ಹೆಚ್ಚಿನ ಆದ್ಯತೆ- ಡಿಸಿಎಂ‌ ಡಿಕೆಶಿ ಭರವಸೆ

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯು ಸಂಪೂರ್ಣವಾಗಿ ಕೃಷಿಯನ್ನೇ ಅವಲಂಬಿಸಿದೆ. ಇಲ್ಲಿ ಯಾವುದೇ ಖಾಸಗಿ ಲೇಔಟ್ ಗಳು ಇಲ್ಲ, ಖಾಸಗೀಕರಣ ಆಗಿಲ್ಲ. ಎತ್ತಿನಹೊಳೆ ಯೋಜನೆಯಿಂದಾಗಿ ರೈತರು ಜಮೀನು ಕಳೆದುಕೊಳ್ಳುವುದಲ್ಲದೇ ಜಲಾಶಯ ಪ್ರದೇಶದ ಸುತ್ತಾಮುತ್ತ ಹಳ್ಳಿಗಳು ಮುಳುಗಡೆಯಾಗುತ್ತವೆ. ಆದ್ದರಿಂದ ರೈತರಿಗೆ ಜಮೀನು, ಮನೆ ಸಮೇತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕ ಧೀರಜ್ ಮುನಿರಾಜ್ ಅವರು ಡಿಸಿಎಂ ಡಿಕೆಶಿ ಬಳಿ ಕಾಲಿಗೆ ಬಿದ್ದು, ಕೈ ಮುಗಿದು ಮನವಿ ಮಾಡಿದರು.

ಇಂದು ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಪರಿಶೀಲನೆ ನಡೆಸಿದೆ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯಿಂದ ಜಮೀನು, ಮನೆ ಕಳೆದುಕೊಂಡವರಿಗೆ ಇದೇ ಹೋಬಳಿಯಲ್ಲಿ ಜಮೀನು,‌ ಮನೆ ವ್ಯವ್ಯಸ್ಥೆ ಕಲ್ಪಿಸಬೇಕು. ಇಲ್ಲಿ ಬೇಕಾದಷ್ಟು ಸರ್ಕಾರಿ ಭೂಮಿ‌ ಇದೆ. ಬೇರೆಲ್ಲೂ ಪರ್ಯಾಯ ವ್ಯವಸ್ಥೆ ಮಾಡದೇ ಇಲ್ಲೇ ರೈತರನ್ನು ಉಳಿಸಿಕೊಳ್ಳಬೇಕು ಎಂದರು.

ಈ ಯೋಜನೆಯಿಂದ ನಮ್ಮ ತಾಲೂಕಿನಲ್ಲಿ ಕೇವಲ 7 ಕೆರೆಗಳು ಮಾತ್ರ ತುಂಬುತ್ತವೆ. ನಮ್ಮಲ್ಲಿ ಒಂದೇ ಒಂದು ಕುಡಿಯುವ ನೀರಿನ ಯೋಜನೆ ಇಲ್ಲ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 29‌ ಕೆರೆಗಳಿವೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತೂಬಗೆರೆ ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು 10 ಸಣ್ಣ ನೀರಾವರಿ ಕೆರೆಗಳಿವೆ. ಈ ಎಲ್ಲಾ ಕೆರೆಗಳಿಗೂ ಎತ್ತಿನಹೊಳೆ ನೀರು ಹೋಗಬೇಕು. ಆ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದರು.

ಅದೇರೀತಿ ಸಾಸಲು ಹೋಬಳಿಯ ದೊಡ್ಡ ಸಮಸ್ಯೆ ಎಂಎಸ್ ಜಿಪಿ ಘಟಕ. ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುವ ಕಸವನ್ನು ನಿಲ್ಲಿಸಬೇಕು.

ಎರಡು ವರ್ಷಗಳಿಂದಲು ಬಿಬಿಎಂಪಿ ವತಿಯಿಂದ ತಾಲ್ಲೂಕಿನ ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಅನುದಾನವನ್ನು ಪಡೆಯದೆ ವಿರೋಧಿಸಲಾಗಿದೆ. ನಮಗೆ ಬೇಕಿರುವುದು ಬಿಬಿಎಂಪಿ ಅನುದಾನವಲ್ಲ, ಕಸ ಇಲ್ಲಿಗೆ ಬರುವುದು ನಿಲ್ಲಬೇಕು. ಬಿಬಿಎಂಪಿ ಕಸ ಇಲ್ಲಿಗೆ ಬರುತ್ತಿರುವುದರಿಂದ ಅಂತರ್ಜಲ ಕಲುಷಿತವಾಗಿ ದೊಡ್ಡಬೆಳವಂಗಲ ಹಾಗೂ ಸಾಸಲು ಭಾಗದ ಹತ್ತಾರು ಗ್ರಾಮಗಳ ಜನರು ನಾನಾ ರೀತಿಯ ಚರ್ಮ ರೋಗ ಸೇರಿದಂತೆ ಹಲವಾರು ಆರೋಗ್ಯದ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಅಂತರ್ಜಲ ಬಳಕೆಯಿಂದ ಬೆಳೆಗಳು ಸಹ ಹಾಳಾಗುತ್ತಿವೆ. ಇದರ ವಿರುದ್ಧ ಈಗಾಗಲೇ ಹಲವಾರು ಜನ ರೈತರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರುಗಳನ್ನು ದಾಖಲಿಸಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಹ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕುರಿತು ವರದಿ ನೀಡಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲು ಕಸ ವಿಲೇವಾರಿ ಘಟಕ ಮುಚ್ಚುವಂತೆ ನಿರ್ಣಯ ಅಂಗೀಕರಿಸಿದ್ದಾರೆ ಎಂದರು.

ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮೊದಲು ನಾವು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ದೊಡ್ಡಬಳ್ಳಾಪುರ ತಾಲೂಕಿಗೆ ಹೆಚ್ಚು ಒತ್ತು‌ಕೊಟ್ಟು ರೈತರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ವ್ಯವ್ಯಸ್ಥೆ ಕಲ್ಲಿಸಿಕೊಡುತ್ತೇನೆ. ಇಡೀ ರಾಜ್ಯದಲ್ಲಿ ಕಸದ ಸಮಸ್ಯೆ ಇದೆ. ಕಸದ ಸಮಸ್ಯೆಗೆ ಪರ್ಯಾಯ ಮಾರ್ಗ ಕಂಡುಕೊಳ್ಳಲಾಗುತ್ತಿದೆ. ಒಂದು ದಿನದ ಕಸ ಮೂರು ದಿನದಲ್ಲಿ ಸಂಪೂರ್ಣವಾಗಿ ಬರ್ನ್ ಆಗಬೇಕು. ಕಸದಿಂದ ಗ್ಯಾಸ್, ವಿದ್ಯುತ್ ಉತ್ಪಾದನೆ ಆಗಬೇಕು. ಮೊದಲು ಬೆಂಗಳೂರು ನಗರದಲ್ಲೇ ಈ ಪ್ಲಾನ್ ನನ್ನು ಜಾರಿಗೆ ತರುತ್ತೇವೆ. ನಂತರ ಗ್ರಾಮೀಣ ಭಾಗದಲ್ಲಿ ಸುಮಾರು ಹತ್ತು ಎಕರೆಯಲ್ಲಿ ಕಸದಿಂದ ಗ್ಯಾಸ್, ವಿದ್ಯುತ್ ಉತ್ಪಾದನೆ ಮಾಡಲಾಗುವುದು. ಎಂಎಸ್ ಜಿಪಿ ಕಸ ವಿಲೇವಾರಿ ಘಟಕ ವೀಕ್ಷಣೆಗೆ ಪ್ರತ್ಯೇಕವಾಗಿ ಇನ್ನೊಂದು ದಿನ ಬರುತ್ತೇನೆ. ಬಂದು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೆನೆ ಎಂದರು.

ಎತ್ತಿನಹೊಳೆ ಯೋಜನೆಗೆ ಭೂಮಿಕೊಟ್ಟ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಹೊಸದಾಗಿ ಹಳ್ಳಿಗಳನ್ನು ಕಟ್ಟುವಂತಹ ಕೆಲಸ ಮಾಡುತ್ತೇವೆ ಎಂದರು.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 14.5 ಟಿ.ಎಂ.ಸಿ ನೀರನ್ನು ನೀಡಬೇಕಾಗಿದೆ ಹಾಗಾಗಿ ಯಾವುದೇ ತಾಲೂಕಿನ ಕೆರೆಗಳನ್ನು ತುಂಬಿಸಬಾರದು.

ಅದಕ್ಕಿಂತ ಮೊದಲು ಲಕ್ಕೇನಹಳ್ಳಿ ಭಾಗದಲ್ಲಿ ಸಮತೋಲನ ಜಲಾಶಯ ಆಗುವುದರಿಂದ ನಿಮ್ಮ ಬೇಡಿಕೆಯ ಕೆರೆಗಳನ್ನು ತುಂಬಿಸಲು ವಿಶೇಷ ಗಮನ ಹರಿಸಲಾಗುವುದು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಮಾತನಾಡಿ, ಎತ್ತಿನ ಹೊಳೆ ಯೋಜನೆಗೆ ಜಮೀನು, ಮನೆ ಕಳೆದುಕೊಳ್ಳುವ ರೈತರಿಗೆ ಗರಿಷ್ಠ ಪರಿಹಾರವನ್ನು ಒಂದು ತಿಂಗಳೊಳಗಾಗಿ ನೀಡಬೇಕು ಹಾಗೂ ಭೂಮಿ ಕಳೆದುಕೊಳ್ಳುವ ರೈತರಿಗೆ ಕನಿಷ್ಟ ಎರಡು ಎಕರೆ ಭೊಮಿಯನ್ನು ಲಭ್ಯವಿರುವ ಕಡೆ ನೀಡಬೇಕು ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…

5 hours ago

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

14 hours ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

14 hours ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

16 hours ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

1 day ago

ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…

1 day ago