ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ನಡೆಸುವ ಕನ್ನಡ ಪ್ರವೇಶ, ಕನ್ನಡ ಕಾವ, ಕನ್ನಡ ಜಾಣ ಮತ್ತು ಕನ್ನಡ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. ಬರುವ ಡಿಸೆಂಬರ್‌ನಲ್ಲಿ ಪರೀಕ್ಷೆಗಳು ನಡೆಯಲಿದೆ.

ಪರೀಕ್ಷೆಗಳಿಗೆ ಸಂಬಂಧಿಸಿದ ಪಠ್ಯ, ವಿವರ ಹಾಗೂ ಮಾಹಿತಿಯನ್ನು ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಾ ವಿಭಾಗದಲ್ಲಿ ಪಡೆಯಬಹುದು. 2024-25ನೇ ಸಾಲಿನ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್‌ 31 ಕೊನೆಯ ದಿನವಾಗಿದ್ದು, 50 ರುಪಾಯಿ ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ 15ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಮಾಹಿತಿಗಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ(94492 46189), ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್(98861 69299), ಕೋಶಾಧ್ಯಕ್ಷ ಡಾ.ಮುನಿರಾಜು(98802 28259) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *