ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ 10 ಮಂದಿ ಪ್ರಯಾಣಿಕರನ್ನು ಬಂಧಿಸಲಾಗಿದೆ.
ಯೆಸ್, ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಳೆದ 18 ದಿನಗಳಲ್ಲಿ ನಡೆಸಿದ ತಪಾಸಣೆಯಲ್ಲಿ ಸುಮಾರು 14.22 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ, ಇ-ಸಿಗರೇಟ್ ವಶಪಡಿಸಿಕೊಂಡಿದಾರೆ.
ಅಧಿಕಾರಿಗಳ ಮಾಹಿತಿಯಂತೆ, ಬ್ಯಾಂಕಾಕ್ ಸೇರಿದಂತೆ ವಿದೇಶದ ಹಲವು ನಗರಗಳಿಂದ ಬಂದ ಪ್ರಯಾಣಿಕರು ತಮ್ಮ ಬ್ಯಾಗ್ಗಳಲ್ಲಿ 38.64 ಕೆ.ಜಿ ಹೈಡ್ರೋಪೋನಿಕ್ಸ್ ಗಾಂಜಾ, 2.38 ಲಕ್ಷ ರೂ. ಮೌಲ್ಯದ ವಿದೇಶಿ ಇ-ಸಿಗರೇಟ್ಗಳು ಹಾಗೂ ಎಂಟು ಬಗೆಯ ಅಪರೂಪದ ಜೀವಂತ ಪ್ರಾಣಿಗಳನ್ನು ಸಾಗಿಸುತ್ತಿದ್ದರೆಂದು ಗೊತ್ತಾಗಿದೆ. ಏರ್ಪೋರ್ಟ್ ನ ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯಾಸ್ಪದ ಬ್ಯಾಗ್ಗಳನ್ನು ಸ್ಕ್ಯಾನಿಂಗ್ ಮಾಡಿದಾಗ ಈ ಅಕ್ರಮ ವಸ್ತುಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಕಸ್ಟಮ್ಸ್ ಅಧಿಕಾರಿಗಳು ಕಸ್ಟಮ್ಸ್ ಆಕ್ಟ್ ಮತ್ತು ಸಂಬಂಧಿತ ಕಾನೂನುಗಳಡಿ ಪ್ರಕರಣ ದಾಖಲಿಸಿ, ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…